advertise here

Search

ಕೋವಿಡ್ ಅಕ್ರಮ ತನಿಖೆಗೆ ಸಂಪುಟ ಉಪ ಸಮಿತಿ ರಚನೆಗೆ ಸಚಿವ ಸಂಪುಟ ತೀರ್ಮಾನ


ಕೋವಿಡ್ ಸಮಯದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಲು ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದರಿಂದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಗೆ ಸಂಕಷ್ಟ ಶುರುವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ವೈರಸ್ ಅಬ್ಬರದ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮಗಳ ಕುರಿತು ತನಿಖೆಯನ್ನು ಸಂಪುಟ ಉಪ ಸಮಿತಿಗೆ ವಹಿಸಲು ತೀರ್ಮಾನಿಸಲಾಯಿತು.

ಕೋವಿಡ್ ಕಾಲದಲ್ಲಿ ಪಿಪಿಟಿ ಕಿಟ್, ಎಸಿ, ಮಾಸ್ಕ್ ಸೇರಿದಂತೆ ಹಲವು ಅಕ್ರಮಗಳು ನಡೆದಿದ್ದು, 7 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಕೂಡ ವರದಿ ನೀಡಿದ್ದು, ವರದಿ ಆಧಾರದ ಮೇಲೆ ತನಿಖೆಗೆ ಆದೇಶಿಲಾಗುವುದು ಎಂದು ಸಂಪುಟ ಸಭೆಯ ವಿವರವನ್ನು ಸಚಿವ ಎಚ್.ಕೆ. ಪಾಟೀಲ್ ನೀಡಿದರು.

ALSO READ :  ಜಿಬಿಎ ಟೌನ್‌ ಪ್ಲ್ಯಾನಿಂಗ್‌ನಲ್ಲಿ 'ಪರ್ಸಂಟೇಜ್‌' ಪರ್ವ; ಡಿಸಿಎಂ ಹೆಸರಲ್ಲೇ ಅಧಿಕಾರಿಗಳ ಲೂಟಿ ದರ್ಬಾರ್‌!

ಬಿಜೆಪಿ ಆಡಳಿತದಲ್ಲಿ ನಡೆದ ಕೋವಿಡ್ ಭ್ರಷ್ಟಾಚಾರದ ಕುರಿತು ಪೊಲೀಸರು ತನಿಖೆ ನಡೆಸಲಿದ್ದು, ಅಗತ್ಯ ಬಿದ್ದರೆ ಎಸ್ ಐಟಿಗೆ ವಹಿಸಲಾಗುವುದು. ಭ್ರಷ್ಟಾಚಾರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆಯಿಂದ ಹೊರಗೆ ಬರಲಿದೆ ಎಂದು ಅವರು ಹೇಳಿದರು.


Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top