advertise here

Search

ಖಾಸಗಿ ಸಂಸ್ಥೆಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ


ಶಾಲೆ, ಐಟಿ ಬಿಟಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕನ್ನಡ ಭಾಷಾ ಪ್ರೇಮ ಹೆಚ್ಚಲು ಆಗಲು ಜಾಗೃತಿ ಮೂಡಿಸುವ ಉದ್ದೇಶದಿಂದ ಖಾಸಗಿ ಶಾಲಾ-ಕಾಲೇಜು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ಶಾಲೆಗಳಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಬೇಕು ಹಾಗೂ ಕನ್ನಡ ಸಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆದರೆ ಖಾಸಗಿ ಕಂಪನಿಗಳಲ್ಲಿ ಅದರಲ್ಲೂ ಐಟಿ-ಬಿಟಿ ಕಂಪನಿಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿಲ್ಲ. ಬದಲಿಗೆ ಧ್ವಜಾರೋಹಣ ಮಾಡಿದರೂ ಸಾಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ALSO READ :  ಇರಾನ್ ಮೇಲೆ ಯುದ್ಧಕ್ಕೆ ಇಸ್ರೇಲ್ ಸೇನೆ ಸಜ್ಜು: ಅಮೆರಿಕ ರಹಸ್ಯ ದಾಖಲೆ ಸೋರಿಕೆ!

ಖಾಸಗಿ ಕಂಪನಿಗಳು ಹಾಗೂ ಶಾಲೆಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿರುವ ಬಗ್ಗೆ ಫೋಟೊ ಹಾಗೂ ವೀಡಿಯೊಗಳನ್ನು ತೆಗೆದು ಬಿಬಿಎಂಪಿ ಕಚೇರಿಗೆ ತಲುಪಿಸಬೇಕು ಎಂದು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಲ್ಲಾ ಖಾಸಗಿ ಕಂಪನಿಗಳು, ಐಟಿ ಬಿಟಿ ಕಂಪನಿಗಳು, ಕಾರ್ಖಾನೆಗಳು, ಶಾಲಾ-ಕಾಲೇಜುಗಳು ತಮ್ಮ ಕಚೇರಿಯ ಮುಭಾಂಗದಲ್ಲಿ ಕನ್ನಡ ಧ್ವಜಾರೋಹಣ ಮಾಡಬೇಕು ಸರ್ಕಾರ ತೀರ್ಮಾನಿಸಿದೆ ಎಂದರು.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top