advertise here

Search

ದಾವೂದ್ ದಾರಿಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ!


ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣದ ಹೊಣೆ ಹೊತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾದಿಯಲ್ಲಿ ಸಾಗುತ್ತಿದ್ದು, 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) 16 ಗ್ಯಾಂಗ್ ಸ್ಟರ್ ಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿಕೊಂಡಿದೆ.

ಪಂಜಾಬ್ ನಲ್ಲಿ ಖ್ಯಾತ ಗಾಯಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಲಾರೆನ್ಸ್ ಬಿಶ್ನೋಯಿ ದಾವೂದ್ ಇಬ್ರಾಹಿಂನ ಡಿ ಕಂಪನಿ ಮಾದರಿಯಲ್ಲಿ ದೇಶಾದ್ಯಂತ ತನ್ನ ಕಂಬಂಧ ಹಸ್ತ ವಿಸ್ತರಿಸುತ್ತಿದ್ದಾನೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.

ಸಣ್ಣ ಅಪರಾಧಗಳನ್ನು ಮಾಡುವ ಯುವಕರನ್ನು ಬಳಸಿಕೊಂಡು 90ರ ದಶಕದಲ್ಲಿ ದಾವೂದ್ ಇಬ್ರಾಹಿಂ ಹೇಗೆ ಭೂಗತ ಲೋಕದ ಮೇಲೆ ಹಿಡಿತ ಸಾಧಿಸಿದ ಅದೇ ಮಾದರಿಯಲ್ಲಿ ಲಾರೆನ್ಸ್ ಬಿಶ್ನೋಯಿ ತನ್ನ ಅಪರಾಧ ಕೃತ್ಯಗಳನ್ನು ಸಂಘಟಿತವಾಗಿ ಬೆಳೆಸುತ್ತಿದ್ದಾನೆ.

ALSO READ :  ಪರಿಸರಾಧಿಕಾರಿ ಶಿವಕುಮಾರ್‌ ಗೆ "ಕ್ಲೀನ್‌ ಚಿಟ್‌" ಕೊಡುವ "ಧಾವಂತ"ದಲ್ಲಿ ಘಟನೆ ಹಿಂದಿನ "ವಾಸ್ತವ"ವನ್ನೇ ಮರೆಮಾಚಲಾಯ್ತಾ..?!

ಬಿಶ್ನೋಯಿ 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿದ್ದು, ಇದರಲ್ಲಿ 300 ಮಂದಿ ಪಂಜಾಬ್ ನಲ್ಲಿಯೇ ಇದ್ದಾರೆ. ಹರಿಯಾಣ, ರಾಜಸ್ಥಾನ, ದೆಹಲಿಯಲ್ಲಿ ಅತೀ ಹೆಚ್ಚು ಸಂಪರ್ಕಗಳನ್ನು ಹೊಂದಿದ್ದು, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಉತ್ತರಪ್ರದೇಶಗಳಲ್ಲೂ ಪ್ರಭಾವ ಹೊಂದಿದ್ದಾನೆ ಎಂದು ಎಫ್ ಐಆರ್ ನಲ್ಲಿ ವಿವರಿಸಲಾಗಿದೆ.

2021ರಲ್ಲಿ ಬೆದರಿಕೆಗಳ ಮೂಲಕ ಕೋಟ್ಯಂತರ ರೂಪಾಯಿ ಗಳಿಸಿರುವ ಬಿಶ್ನೋಯಿ ಗ್ಯಾಂಗ್ ಹವಾಲಾ ಮೂಲಕ ವಿದೇಶಕ್ಕೆ ರವಾನೆ ಮಾಡುತ್ತಿದೆ. ಇದರಿಂದ ಕೆನಡಾದಲ್ಲಿ ಕೂಡ ಈತ `ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದಾನೆ.

ಬಡತನದಲ್ಲಿರುವ ಸಣ್ಣಪುಟ್ಟ ಅಪರಾಧಗಳಲ್ಲಿ ಸಿಕ್ಕಿಬಿದ್ದ ಯುವಕರೇ ಈತನ ಪರ ದಾಳಿ ಅಥವಾ ಕೊಲೆ ಮಾಡುವ ಆಯುಧಗಳಾಗಿದ್ದು, ಇವರು ಗುಜುರಿ, ಹೋಟೆಲ್ ಸೇರಿದಂತೆ ಸಣ್ಣಪುಟ್ಟ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದು, ಆದೇಶ ಬರುತ್ತಿದ್ದಂತೆ ಸಕ್ರಿಯವಾಗುತ್ತಾರೆ.


Political News

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

Scroll to Top