advertise here

Search

ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ಏರ್ ಇಂಡಿಯಾ ದುರಂತ: 140 ಪ್ರಯಾಣಿಕರು ಪಾರು!


ಹಾರಾಟದ ವೇಳೆ ಹೈಡ್ರೋಲಿಕ್ ವೈಫಲ್ಯಕ್ಕೆ ಒಳಗಾದ ಏರ್ ಇಂಡಿಯಾ ವಿಮಾನ ತಮಿಳುನಾಡಿನ ತಿರುಚನಾಪಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, 140 ಪ್ರಯಾಣಿಕರು ಪಾರಾಗಿದ್ದಾರೆ.

ತಿರುಚನಾಪಳ್ಳಿಯಿಂದ ಶಾರ್ಜಾಕ್ಕೆ ಶುಕ್ರವಾರ ಸಂಜೆ 5.40ರ ಸುಮಾರಿಗೆ ಹೊರಟ್ಟಿದ್ದ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಯಿತು. ಪೈಲೆಟ್ ಗಳು ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದರು.

ವಿಮಾನದ ಹೈಡ್ರೋಲಿಕ್ ವಿಫಲಗೊಂಡಿದೆ ಎಂದು ಪೈಲೆಟ್ ವಿಮಾನ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ವಿಮಾನ ಇಳಿಸಲು ವ್ಯವಸ್ಥೆ ಮಾಡಲಾಗಿತ್ತು ಎಂದು ತಿರುಚನಾಪಳ್ಳಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದರು.

ALSO READ :  ಒಂದೇ ಫ್ಯಾನಿಗೆ ಕೊರಳೊಡ್ಡಿದ ತಾಯಿ-ಮಗಳು

ಹೈಡ್ರೋಲಿಕ್ ಅಂದರೆ ವಿಮಾನ ಹಾರಾಟದ ವೇಳೆ ಬ್ರೇಕ್, ಗೇರ್ ಮುಂತಾದವುಗಳು ಸುಲಲಿತವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ. ಹೈಡ್ರೋಲಿಕ್ ವ್ಯವಸ್ಥೆ ಹಾಳಾದರೆ ವಿಮಾನ ಲ್ಯಾಂಡಿಂಗ್ ಮತ್ತು ಟೇಕಾಫ್ ವೇಳೆ ಸಮಸ್ಯೆ ಉಂಟಾಗಿ ಅನಾಹುತಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇರುತ್ತದೆ.


Political News

ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಭಿನ್ನಮತಕ್ಕೆ ಸಿಎಂ ‘ಬ್ರೇಕ್’; ಸಂಧಾನ ಸಭೆ ಯಶಸ್ವಿ!

ಪೆನ್‌ಡ್ರೈವ್ ಹಗರಣ: 13,712 ಪುಟಗಳ ಬೃಹತ್ ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ; 39 ಜನರ ವಿರುದ್ಧ ಸಾಬೀತಾಯ್ತು ಆರೋಪ!

RSS-RAW ಗೆ ಅಮೆರಿಕ ಶಾಕ್: ಟ್ರಂಪ್‌ಗೆ ಯುಎಸ್‌ ಆಯೋಗ ನೀಡಿದ ಶಿಫಾರಸಿನಲ್ಲಿ ಏನಿದೆ?

ಶಾಸಕರ ಪ್ರಶ್ನೆಗಳಿಗೆ ಬೆಲೆ ಇಲ್ಲವೇ? ಕರ್ತವ್ಯ ಲೋಪ ಎಸಗಿದ 3 ಅಧಿಕಾರಿಗಳು ಸಸ್ಪೆಂಡ್!

ರಾಜ್ಯಸಭೆಗೆ ಇಂದು ಹೈವೋಲ್ಟೇಜ್ ಎಲೆಕ್ಷನ್: 11 ಸ್ಥಾನಗಳಿಗಾಗಿ ಶಾಸಕರ ಹಣಾಹಣಿ!

ನೆಹರೂ ಬದುಕಿದ್ದರೆ ಕಾನ್ಶಿರಾಮ್ ಅವರನ್ನೇ ಸಿಎಂ ಮಾಡುತ್ತಿದ್ದರು: ರಾಹುಲ್ ಗಾಂಧಿ 

ನನ್ನ ದೇಹದಲ್ಲಿ ಪ್ರಾಣವಿರುವವರೆಗೂ ಜನರ ಸೇವೆ ಮಾಡುತ್ತೇನೆ : ಸಿದ್ದರಾಮಯ್ಯ

ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ!

Scroll to Top