advertise here

Search

ಸರಿಯಾಗಿ ಬಟ್ಟೆ ಹಾಕದಿದ್ದರೆ ಆಸಿಡ್ ಹಾಕುವೆ ಎಂದು ಬೆದರಿಸಿದ್ದ ಬೆಂಗಳೂರಿನ ಉದ್ಯೋಗಿ ವಜಾ!


ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇಟಿಯೋಸ್ ಸರ್ವಿಸಸ್ ಕಂಪನಿ ಸೇವೆಯಿಂದ ವಜಾಗೊಳಿಸಿದೆ.

ಪತ್ನಿಗೆ ಮಾಡಿದ ಮೆಸೇಜ್ ನ ಸ್ಕ್ರೀನ್ ಶಾಟ್ ಅನ್ನು ಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ? ಎಂದು ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಬೆದರಿಕೆ ಹಾಕಿದ್ದ ನಿಕಿತ್ ಶೆಟ್ಟಿ ಎಂಬಾತನನ್ನು ಕಂಪನಿಯು ಸೇವೆಯಿಂದ ವಜಾಗೊಳಿಸಿದೆ.

ನಿನಗಿಷ್ಟ ಬಂದ ಬಟ್ಟೆಗಳನ್ನು ಹಾಕಿಕೊಳ್ಳಬೇಡ. ಸರಿಯಾಗಿರುವ ಬಟ್ಟೆ ಹಾಕಿಕೊ. ಇಲ್ಲದಿದ್ದರೆ ಮುಖದ ಮೇಲೆ ಆಸಿಡ್ ಎರಚುವೆ ಎಂದು ನಿಕಿತ್ ಶೆಟ್ಟಿ ಮಹಿಳೆಗೆ ಮೆಸೇಜ್ ಮಾಡಿದ್ದ. ಈ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದ ಪತಿ, ನನ್ನ ಪತ್ನಿ ಬಟ್ಟೆಯ ಆಯ್ಕೆಯನ್ನು ನಿರ್ಧರಿಸುವ ಆ ವ್ಯಕ್ತಿ ಯಾರು? ಈ ರೀತಿ ಬೆದರಿಕೆ ಹಾಕುವವರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಿ ಎಂದು ಪತಿ ಪೋಸ್ಟ್ ಮಾಡಿದ್ದರು.

ALSO READ :  SAD DEMISE: ಕ್ರೈಂ ಪತ್ರಿಕೋದ್ಯಮದ "ಪದ-ಪಂಡಿತ" ಅಕ್ಷರಗಳಲ್ಲಿ ಲೀನ..

ಈ ಪೋಸ್ಟ್ ಅನ್ನು ಷೇರ್ ಮಾಡಿಕೊಂಡಿದ್ದ ಪತ್ರಕರ್ತ ಶಹಬಾಜ್ ಅಜರ್, ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರನ್ನು ಟ್ಯಾಗ್ ಮಾಡಿ ಕೂಡಲೇ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನಿಕಿತ್ ಶೆಟ್ಟಿ ಕೆಲಸ ಮಾಡುತ್ತಿದ್ದ ಕಂಪನಿ ಇಟಿಯೋಸ್ ಸರ್ವಿಸಸ್ ಕೂಡಲೇ ಆತನನ್ನು ಸೇವೆಯಿಂದ ವಜಾ ಮಾಡಿದೆ.

ಈ ವಿಷಯ ತಿಳಿದ ಮಹಿಳೆಯ ಪತಿ ಸಂಬಂಧಪಟ್ಟವರಿಗೆ ಧನ್ಯವಾದ ಅರ್ಪಿಸಿದ್ದು, ನನ್ನ ಮನವಿಗೆ ಸ್ಪಂದಿಸಿದ್ದಕ್ಕೆ ಧನ್ಯವಾದಗಳು. ಬೆಂಗಳೂರು ಸುರಕ್ಷಿತ ಮಾಡಲು ನಿಮ್ಮ ಕೊಡುಗೆ ಅಗತ್ಯ ಎಂದು ಪೋಸ್ಟ್ ಮಾಡಿದ್ದಾರೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top