advertise here

Search

ವಿಜಯನಗರ: ಕಲುಷಿತ ನೀರು ಸೇವಿಸಿ 5 ಮಂದಿ ಸಾವು, 50 ಮಂದಿ ಅಸ್ವಸ್ಥ


ಕಲುಷಿತ ನೀರು ಸೇವಿಸಿ 8 ತಿಂಗಳ ಹಸುಗೂಸು ಸೇರಿ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ.

ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ನಿವಾಸಿಗಳಾದ ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು 8 ತಿಂಗಳ ಗಂಡು ಮಗು ಮೃತಪಟ್ಟಿದ್ದಾರೆ.

ಕಲುಷಿತ ನೀರು ಸೇವನೆಯಿಂದ ಗ್ರಾಮದ ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ. ಕಳೆದ ವಾರ ಮೂವರು ಮೃತಪಟ್ಟಿದ್ದಾರೆ. ಆದರೂ ಕೂಡ ಸ್ಥಳಕ್ಕೆ ಭೇಟಿ ನೀಡದೆ ಆರೋಗ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ALSO READ :  ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ವಾಂತಿ ಭೇದಿಯಿಂದ ಜನರು ನರಳುತ್ತಿದ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ನಿವಾಸಿಗಳು ಸಾಯುತ್ತಿದ್ದಾರೆ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ.

ಗರ್ಭಿಣಿ ನಿಂಗಮ್ಮ ಎನ್ನುವವರಿಗೆ ಕೂಡ ವಾಂತಿಭೇದಿ ಕಾಣಿಸಿಕೊಂಡಿದ್ದು, ಹೆರಿಗೆ ವೇಳೆ ಗಂಡು ಮಗು ಕೂಡ ಸಾವನ್ನಪ್ಪಿದೆ. ಇದಕ್ಕೆ ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯಲ್ಲಿ ಕಲುಷಿತ ನೀರು ಬಂದು ವಾಂತಿ ಭೇದಿಯಾಗುತ್ತಿದೆ ಎಂದು ಗ್ರಾಮಸ್ಥರ ಆರೋಪ ಮಾಡಿದ್ದಾರೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top