advertise here

Search

ವಿಜಯನಗರ: ಕಲುಷಿತ ನೀರು ಸೇವಿಸಿ 5 ಮಂದಿ ಸಾವು, 50 ಮಂದಿ ಅಸ್ವಸ್ಥ


ಕಲುಷಿತ ನೀರು ಸೇವಿಸಿ 8 ತಿಂಗಳ ಹಸುಗೂಸು ಸೇರಿ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ.

ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ನಿವಾಸಿಗಳಾದ ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು 8 ತಿಂಗಳ ಗಂಡು ಮಗು ಮೃತಪಟ್ಟಿದ್ದಾರೆ.

ಕಲುಷಿತ ನೀರು ಸೇವನೆಯಿಂದ ಗ್ರಾಮದ ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ. ಕಳೆದ ವಾರ ಮೂವರು ಮೃತಪಟ್ಟಿದ್ದಾರೆ. ಆದರೂ ಕೂಡ ಸ್ಥಳಕ್ಕೆ ಭೇಟಿ ನೀಡದೆ ಆರೋಗ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ALSO READ :  ಗ್ಯಾಸ್ ಅಭಾವದ ನೆಪದಲ್ಲಿ ಮರ ಕಡಿದರೆ ಶಿಕ್ಷೆ ಖಚಿತ: ಅರಣ್ಯ ಇಲಾಖೆ ಹೈ-ಅಲರ್ಟ್!

ವಾಂತಿ ಭೇದಿಯಿಂದ ಜನರು ನರಳುತ್ತಿದ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ನಿವಾಸಿಗಳು ಸಾಯುತ್ತಿದ್ದಾರೆ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ.

ಗರ್ಭಿಣಿ ನಿಂಗಮ್ಮ ಎನ್ನುವವರಿಗೆ ಕೂಡ ವಾಂತಿಭೇದಿ ಕಾಣಿಸಿಕೊಂಡಿದ್ದು, ಹೆರಿಗೆ ವೇಳೆ ಗಂಡು ಮಗು ಕೂಡ ಸಾವನ್ನಪ್ಪಿದೆ. ಇದಕ್ಕೆ ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯಲ್ಲಿ ಕಲುಷಿತ ನೀರು ಬಂದು ವಾಂತಿ ಭೇದಿಯಾಗುತ್ತಿದೆ ಎಂದು ಗ್ರಾಮಸ್ಥರ ಆರೋಪ ಮಾಡಿದ್ದಾರೆ.


Political News

ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ: ದಾವಣಗೆರೆ ಟಿಕೆಟ್ ಫೈಟ್ ಈಗ ಹೈಕಮಾಂಡ್ ಅಂಗಳಕ್ಕೆ!

ಅಮೆರಿಕಾ–ಇರಾನ್ ಯುದ್ಧದ ಭೀತಿ: ಶಾಂತಿ ಒಪ್ಪಂದಕ್ಕೆ ಟ್ರಂಪ್ ನಕಾರ, ಇರಾನ್ ತೈಲ ಕೇಂದ್ರಗಳೇ ಟಾರ್ಗೆಟ್!

ಹುಳಿಯಾರು ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ!

ದಾವಣಗೆರೆ ದಕ್ಷಿಣ ಉಪಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ!

ಜಿಬಿಎ ಟೌನ್‌ ಪ್ಲ್ಯಾನಿಂಗ್‌ನಲ್ಲಿ ‘ಪರ್ಸಂಟೇಜ್‌’ ಪರ್ವ; ಡಿಸಿಎಂ ಹೆಸರಲ್ಲೇ ಅಧಿಕಾರಿಗಳ ಲೂಟಿ ದರ್ಬಾರ್‌!

ವರ್ಗಾವಣೆ ದಂಧೆಗೆ ಹೈಕೋರ್ಟ್ ಬ್ರೇಕ್! “ಸಿಎಂಗೆ ಇದಕ್ಕಿಂತ ದೊಡ್ಡ ಕೆಲಸಗಳಿವೆ” ಎಂದ ನ್ಯಾಯಪೀಠ

ಉಪಚುನಾವಣೆ ಸಮರ: ಯುಗಾದಿ ಹಬ್ಬದಂದೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಭಿನ್ನಮತಕ್ಕೆ ಸಿಎಂ ‘ಬ್ರೇಕ್’; ಸಂಧಾನ ಸಭೆ ಯಶಸ್ವಿ!

Scroll to Top