advertise here

Search

ಉದಯೋನ್ಮುಖರ ಏಷ್ಯಾಕಪ್ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತ `ಎ’ಗೆ ರೋಚಕ 7 ವಿಕೆಟ್ ಜಯ


ಸಂಘಟಿತ ಪ್ರದರ್ಶನ ನೀಡಿದ ಭಾರತ `ಎ’ ತಂಡ 7 ರನ್ ಗಳಿಂದ ಪಾಕಿಸ್ತಾನ ಶಹೀನ್ಸ್ ತಂಡದ ವಿರುದ್ಧ ರೋಚಕ ಜಯ ಸಾಧಿಸಿ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಓಮನ್ ನ ಅರ್ಮೆತ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡ 8 ವಿಕೆಟ್ ಕಳೆದುಕೊಂಡು 183 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಪಾಕಿಸ್ತಾನ ಶಹೀನ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಲಷ್ಟೇ ಶಕ್ತವಾಯಿತು.

ಪಾಕಿಸ್ತಾನ ತಂಡ ಆರಂಭಿಕ ಆಘಾತಕ್ಕೆ ಒಳಗಾದರೂ ಮಧ್ಯಮ ಕ್ರಮಾಂಕದಲ್ಲಿ ಅರಫತ್ ಮಿನ್ಹಾಸ್ (41ರನ್, 29 ಎಸೆತ, 5 ಬೌಂಡರಿ, 1 ಸಿಕ್ಸರ್), ಯಾಸಿರ್ ಖಾನ್ (33 ರನ್, 22 ಎಸೆತ, 1 ಬೌಂಡರಿ, 3 ಸಿಕ್ಸರ್), ಖಾಸಿಮ್ ಅಕ್ರಮ್ (27 ರನ್, 21 ಎಸೆತ, 4 ಬೌಂಡರಿ) ತಂಡವನ್ನು ಮುನ್ನಡೆಸಿದರೂ ಕೊನೆಯ ಹಂತದಲ್ಲಿ ವಿಕೆಟ್ ಕೈ ಚೆಲ್ಲಿದರು.

ALSO READ :  ಶಿವಮೊಗ್ಗ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್  ಗೆದ್ದ ಪತ್ರಕರ್ತ ನಾಗೇಶನಾಯ್ಕ ಪುತ್ರಿ ದೀಪಿಕಾ..

ಭಾರತದ ಪರ ಅನ್ಸುಲ್ ಕಮುಜ್ 3 ವಿಕೆಟ್ ಕಬಳಿಸಿದರೆ, ರಸೀಕ್ ಸಲೀಂ ಮತ್ತು ನಿಶಾಂತ್ ಸಿದು ತಲಾ 2 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ಎ ತಂಡದ ಪರ ನಾಯಕ ತಿಲಕ್ ವರ್ಮಾ (44ರನ್, 35 ಎಸೆತ, 2 ಬೌಂಡರಿ, 2 ಸಿಕ್ಸರ್), ಪ್ರಭ್ ಸಿಮ್ರಾನ್ ಸಿಂಗ್ (36 ರನ್, 19 ಎಸೆತ, 3 ಬೌಂಡರಿ, 2 ಸಿಕ್ಸರ್), ಅಭಿಷೇಕ್ ಶರ್ಮ (35 ರನ್, 22 ಎಸೆತ, 5 ಬೌಂಡರಿ, 2 ಸಿಕ್ಸರ್) ಮತ್ತು ನೆಹಾಲ್ ವಧೇರಾ (25) ತಂಡಕ್ಕೆ ಭದ್ರ ಬುನಾದಿ ಹಾಕಿದರು. ಆದರೆ ನಂತರ ನಾಟಕೀಯ ಕುಸಿತ ಅನುಭವಿಸಿದ್ದರಿಂದ 200ರ ಮೊತ್ತ ದಾಖಲಿಸುವ ಅವಕಾಶ ಕಳೆದುಕೊಂಡಿತು.


Political News

ನನ್ನ ದೇಹದಲ್ಲಿ ಪ್ರಾಣವಿರುವವರೆಗೂ ಜನರ ಸೇವೆ ಮಾಡುತ್ತೇನೆ : ಸಿದ್ದರಾಮಯ್ಯ

ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ‘ಗ್ರೀನ್ ಸಿಗ್ನಲ್’ ಕೊಟ್ಟ ಇರಾನ್!

ಮಾರ್ಚ್ ಅಂತ್ಯಕ್ಕೆ ಕರ್ನಾಟಕದ ಗದ್ದುಗೆ ಬದಲಾವಣೆ ಪಕ್ಕಾ?! ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಸಜ್ಜಾದ ಹೈಕಮಾಂಡ್!

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಪಯಣಕ್ಕೆ ಸಿಎಂ ಅಭಿನಂದನೆ

ಸಂವಿಧಾನ ರಕ್ಷಣೆಗೆ ಸ್ಪೀಕರ್ ಪೀಠಕ್ಕೆ ಸವಾಲು: ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ

ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಹೊಸ ನಾಯಕನ ಆಯ್ಕೆಯ ಬೆನ್ನಲ್ಲೇ ತೀವ್ರಗೊಂಡ ಯುದ್ಧ: ಆಪರೇಶನ್ ಎಪಿಕ್ ಫ್ಯೂರಿಗೆ 10ನೇ ದಿನ

Scroll to Top