advertise here

Search

ಏರ್ ಇಂಡಿಯಾಗೆ ಹುಸಿಬಾಂಬ್ ಕರೆ: 3 ದಿನದಲ್ಲಿ 12 ವಿಮಾನ ಮಾರ್ಗ ಬದಲು


ಹುಸಿ ಬಾಂಬ್ ಬೆದರಿಕೆಗಳಿಂದ ಏರ್ ಇಂಡಿಯಾ ವಿಮಾನ ಸಂಸ್ಥೆ ತತ್ತರಿಸಿದ್ದು, ಕಳೆದ ಮೂರು ದಿನದಲ್ಲಿ 12 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಮಂಗಳವಾರ ಒಂದೇ ದಿನದಲ್ಲಿ ಹುಸಿಬಾಂಬ್ ಬೆದರಿಕೆಯಿಂದ 7 ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಅಲ್ಲದೇ ಕಳೆದ 48 ಗಂಟೆಗಳಲ್ಲಿ ಈ ರೀತಿ ಬಾಂಬ್ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ 10 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬುಧವಾರ ಮತ್ತೆ ಹುಸಿ ಬಾಂಬ್ ಬೆದರಿಕೆಯಿಂದ ಮೂರು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಮುಂಬೈನಿಂದ ಚಿಕಾಗೊಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನವನ್ನು ಕೆನಡಾದ ಗ್ರಾಮೀಣ ಪ್ರದೇಶವಾದ ಇಲ್ಕುತ್ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ.

ALSO READ :  ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

ಸೋಮವಾರ 2 ಇಂಡಿಗೊ ಹಾಗೂ ಒಂದು ಏರ್ ಇಂಡಿಯಾ ವಿಮಾನಗಳ ಸಂಚಾರ ಮಾರ್ಗ ಬದಲಾಯಿಸಲಾಗಿತ್ತು. ಇದೀಗ ಮಂಗಳವಾರ ಒಂದೇ ದಿನ 7 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಇಂದು, ಏರ್ ಇಂಡಿಯಾ ದೆಹಲಿ-ಚಿಕಾಗೋ ವಿಮಾನ, ದಮ್ಮಾಮ್-ಲಕ್ನೋ ಇಂಡಿಗೋ ವಿಮಾನ, ಅಯೋಧ್ಯೆ-ಬೆಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್, ದರ್ಭಾಂಗಾದಿಂದ ಮುಂಬೈಗೆ ಸ್ಪೈಸ್‌ಜೆಟ್ ವಿಮಾನ (SG116), ಬಾಗ್ಡೋಗ್ರಾದಿಂದ ಬೆಂಗಳೂರಿಗೆ ಆಕಾಶ ಏರ್ ವಿಮಾನ (QP 1373), ಅಲಯನ್ಸ್ ಏರ್ ಅಮೃತಸರ -ಡೆಹ್ರಾಡೂನ್-ದೆಹಲಿ ವಿಮಾನ (9I 650) ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (IX 684) ಮಧುರೈನಿಂದ ಸಿಂಗಾಪುರ ವಿಮಾನಗಳ ಮೇಲೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ.


Political News

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

Scroll to Top