advertise here

Search

ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿ ಅರೆಸ್ಟ್: ನಾಲ್ವರು ಯುವತಿಯರ ರಕ್ಷಣೆ!


ಈವೆಂಟ್ ಮ್ಯಾನೇಜ್ ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಬೆಂಗಳೂರಿನ ಪಟ್ಟೆಗಾರಪಾಳ್ಯ ನಿವಾಸಿ ಪ್ರಕಾಶ್ ಹಾಗೂ ಪತಿ ಪಾರಿಜಾತ ಬಂಧಿತ ದಂಪತಿ.

ರಾಕೇಶ್ ಮತ್ತು ಪೂಜಾ ಎಂದು ಹೆಸರು ಬದಲಿಸಿಕೊಂಡಿದ್ದ ಆರೋಪಿಗಳು ಉದ್ಯೋಗ ಕೊಡಿಸುವ ನೆಪದಲ್ಲಿ ಬಡ ಹೆಣ್ಣುಮಕ್ಕಳನ್ನ ವೇಶ್ಯಾವಾಟಿಕೆ ಅಡ್ಡೆಗೆ ತಳ್ಳುತ್ತಿದ್ದರು.

ಉತ್ತರ ಕರ್ನಾಟಕ ಮೂಲದ ಬಡ ಹೆಣ್ಣು ಮಕ್ಕಳನ್ನ ಬೆಂಗಳೂರಿಗೆ ಕರೆತಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸುತ್ತಿದ್ದರು. ಕರ್ನಾಟಕದ ಯುವತಿಯರನ್ನು ತಮಿಳುನಾಡು, ಪುದುಚೇರಿ ರೆಸಾರ್ಟ್ ಗಳಿಗೆ ಕಳುಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ALSO READ :  ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಹೊರ ರಾಜ್ಯದ ಶ್ರೀಮಂತರು ಉದ್ಯಮಿಗಳಿಗೆ ಯುವತಿಯನ್ನು ಪೂರೈಸುತ್ತಿದ್ದ ದಂಪತಿ, ಪ್ರತಿ ವಾರಕ್ಕೊಮ್ಮೆ ಮದುವೆ ಈವೆಂಟ್ ಮ್ಯಾನೇಜ್ ಮೆಂಟ್ ಹೆಸರಿನಲ್ಲಿ ಬೆಂಗಳೂರಿನಿಂದ ತಮಿಳುನಾಡು ಪುದುಚೇರಿಗೆ ಕರೆದೊಯ್ಯುತ್ತಿದ್ದರು.

ಐಷಾರಾಮಿ ರೆಸಾರ್ಟ್ಸ್ ಗಳಲ್ಲಿ ಪಾರ್ಟಿ ಆಯೋಜಿಸುತ್ತಿದ್ದ ದಂಪತಿ ಪಾರ್ಟಿಗೆ ಬರುವ ಒಬ್ಬರಿಗೆ ತಲಾ 25 ಸಾವಿರದಿಂದ 50 ಸಾವಿರ ರೂ.ವರೆಗೂ ಪಡೆಯುತ್ತಿದ್ದರು. ಬೆಂಗಳೂರಿನಿಂದ ಯುವತಿಯರನ್ನು ಕರೆದೊಯ್ಯುವ ಖಚಿತ ಮಾಹಿತಿ ಮೇರೆಗೆ ಸಿಸಿಬಿ ದಾಳಿ ಮಾಡಿ ನಾಲ್ವರು ಯುವತಿಯರನ್ನ ರಕ್ಷಿಸಿದ್ದಾರೆ.

ಬೆಂಗಳೂರಿನ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Political News

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

Scroll to Top