advertise here

Search

ದಾಖಲೆ 7ನೇ ಬಾರಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!


ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಅರಮನೆಯಲ್ಲಿ ದಾಖಲೆಯ 7ನೇ ಬಾರಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ.

ಶನಿವಾರ ಮಧ್ಯಾಹ್ನ 2.10ರ ಸುಮಾರಿಗೆ ಕುಂಭ ಲಗ್ನದಲ್ಲಿ ನಂದಿಧ್ವಜಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಪೂಜೆ ಸಲ್ಲಿಸಿದರು. ಈ ಮೂಲಕ ಮುಡಾ ಹಗರಣದಲ್ಲಿ ದಸರಾಗೆ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಸುಳ್ಳಾಗಿಸಿದರು.

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ದೊರೆಯಲಿದೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಸರ್ಕಾರದ ವತಿಯಿಂದ ಮೈಸೂರು ದಸರಾ ಆಚರಿಸಲಾಗುತ್ತಿದೆ.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದುಷ್ಟಶಕ್ತಿಗಳ ಸಂಹಾರ, ಶಿಷ್ಟ ಶಕ್ತಿಗಳ ರಕ್ಷಣೆಯಾದ ದಸರಾ ಹಬ್ಬವನ್ನು ಆಚರಿಸೋಣ ಎಂದು ಕರೆ ನೀಡಿದರು.

ALSO READ :  POLITICAL EXCLUSIVE.."ಡಿ.ಕೆ" ಗೆ "ಠಕ್ಕರ್" ಕೊಡಲು "ಸತೀಶ್ ಜಾರಕಿಹೊಳಿ" ಹೆಸ್ರು "ತೇಲಿ"ಬಿಟ್ಟವರು "ಇವರೇ"ನಾ..? ಏಕೆ..?

ದಸರಾಗೆ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಿ ಅಂತ ಪ್ರತಿಪಕ್ಷಗಳು ಹೇಳಿದ್ದರಲ್ಲಾ ಎಂಬ ಪ್ರಶ್ನೆಗೆ ಯಾರೋ ಮೂರ್ಖರು ಹೇಳುತ್ತಾರೆ ಅಂದರೆ ಅದೆಲ್ಲಾ ಆಗುತ್ತಾ? ಎಂದು ಪ್ರತಿಕ್ರಿಯಿಸಿದರು.

ಅತ್ಯಂತ ಸಂತೋಷದಿಂದ ದಸರಾ ಜಂಬೂಸವಾರಿಗೆ ಚಾಲನೆ ನೀಡಿದ್ದೇನೆ. ಪ್ರಜಾಪ್ರಭುತ್ವ ಬಂದಾಗಿನಿಂದ ಸರಕಾರ ಈ ಪದ್ಧತಿ ಅನುಸರಿಸಿಕೊಂಡು ಬರುತ್ತಿದೆ. ಎಲ್ಲರಿಗೂ ದಸರಾ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು ಎಂದು ಸಿದ್ದರಾಮಯ್ಯ ಹೇಳಿದರು.


Political News

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

Scroll to Top