advertise here

Search

ದಾವೂದ್ ದಾರಿಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ!


ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣದ ಹೊಣೆ ಹೊತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾದಿಯಲ್ಲಿ ಸಾಗುತ್ತಿದ್ದು, 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) 16 ಗ್ಯಾಂಗ್ ಸ್ಟರ್ ಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿಕೊಂಡಿದೆ.

ಪಂಜಾಬ್ ನಲ್ಲಿ ಖ್ಯಾತ ಗಾಯಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಲಾರೆನ್ಸ್ ಬಿಶ್ನೋಯಿ ದಾವೂದ್ ಇಬ್ರಾಹಿಂನ ಡಿ ಕಂಪನಿ ಮಾದರಿಯಲ್ಲಿ ದೇಶಾದ್ಯಂತ ತನ್ನ ಕಂಬಂಧ ಹಸ್ತ ವಿಸ್ತರಿಸುತ್ತಿದ್ದಾನೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.

ಸಣ್ಣ ಅಪರಾಧಗಳನ್ನು ಮಾಡುವ ಯುವಕರನ್ನು ಬಳಸಿಕೊಂಡು 90ರ ದಶಕದಲ್ಲಿ ದಾವೂದ್ ಇಬ್ರಾಹಿಂ ಹೇಗೆ ಭೂಗತ ಲೋಕದ ಮೇಲೆ ಹಿಡಿತ ಸಾಧಿಸಿದ ಅದೇ ಮಾದರಿಯಲ್ಲಿ ಲಾರೆನ್ಸ್ ಬಿಶ್ನೋಯಿ ತನ್ನ ಅಪರಾಧ ಕೃತ್ಯಗಳನ್ನು ಸಂಘಟಿತವಾಗಿ ಬೆಳೆಸುತ್ತಿದ್ದಾನೆ.

ALSO READ :  ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬಿಶ್ನೋಯಿ 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿದ್ದು, ಇದರಲ್ಲಿ 300 ಮಂದಿ ಪಂಜಾಬ್ ನಲ್ಲಿಯೇ ಇದ್ದಾರೆ. ಹರಿಯಾಣ, ರಾಜಸ್ಥಾನ, ದೆಹಲಿಯಲ್ಲಿ ಅತೀ ಹೆಚ್ಚು ಸಂಪರ್ಕಗಳನ್ನು ಹೊಂದಿದ್ದು, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಉತ್ತರಪ್ರದೇಶಗಳಲ್ಲೂ ಪ್ರಭಾವ ಹೊಂದಿದ್ದಾನೆ ಎಂದು ಎಫ್ ಐಆರ್ ನಲ್ಲಿ ವಿವರಿಸಲಾಗಿದೆ.

2021ರಲ್ಲಿ ಬೆದರಿಕೆಗಳ ಮೂಲಕ ಕೋಟ್ಯಂತರ ರೂಪಾಯಿ ಗಳಿಸಿರುವ ಬಿಶ್ನೋಯಿ ಗ್ಯಾಂಗ್ ಹವಾಲಾ ಮೂಲಕ ವಿದೇಶಕ್ಕೆ ರವಾನೆ ಮಾಡುತ್ತಿದೆ. ಇದರಿಂದ ಕೆನಡಾದಲ್ಲಿ ಕೂಡ ಈತ `ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದಾನೆ.

ಬಡತನದಲ್ಲಿರುವ ಸಣ್ಣಪುಟ್ಟ ಅಪರಾಧಗಳಲ್ಲಿ ಸಿಕ್ಕಿಬಿದ್ದ ಯುವಕರೇ ಈತನ ಪರ ದಾಳಿ ಅಥವಾ ಕೊಲೆ ಮಾಡುವ ಆಯುಧಗಳಾಗಿದ್ದು, ಇವರು ಗುಜುರಿ, ಹೋಟೆಲ್ ಸೇರಿದಂತೆ ಸಣ್ಣಪುಟ್ಟ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದು, ಆದೇಶ ಬರುತ್ತಿದ್ದಂತೆ ಸಕ್ರಿಯವಾಗುತ್ತಾರೆ.


Political News

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Scroll to Top