advertise here

Search

ದಾವೂದ್ ದಾರಿಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ!


ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣದ ಹೊಣೆ ಹೊತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾದಿಯಲ್ಲಿ ಸಾಗುತ್ತಿದ್ದು, 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) 16 ಗ್ಯಾಂಗ್ ಸ್ಟರ್ ಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿಕೊಂಡಿದೆ.

ಪಂಜಾಬ್ ನಲ್ಲಿ ಖ್ಯಾತ ಗಾಯಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಲಾರೆನ್ಸ್ ಬಿಶ್ನೋಯಿ ದಾವೂದ್ ಇಬ್ರಾಹಿಂನ ಡಿ ಕಂಪನಿ ಮಾದರಿಯಲ್ಲಿ ದೇಶಾದ್ಯಂತ ತನ್ನ ಕಂಬಂಧ ಹಸ್ತ ವಿಸ್ತರಿಸುತ್ತಿದ್ದಾನೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.

ಸಣ್ಣ ಅಪರಾಧಗಳನ್ನು ಮಾಡುವ ಯುವಕರನ್ನು ಬಳಸಿಕೊಂಡು 90ರ ದಶಕದಲ್ಲಿ ದಾವೂದ್ ಇಬ್ರಾಹಿಂ ಹೇಗೆ ಭೂಗತ ಲೋಕದ ಮೇಲೆ ಹಿಡಿತ ಸಾಧಿಸಿದ ಅದೇ ಮಾದರಿಯಲ್ಲಿ ಲಾರೆನ್ಸ್ ಬಿಶ್ನೋಯಿ ತನ್ನ ಅಪರಾಧ ಕೃತ್ಯಗಳನ್ನು ಸಂಘಟಿತವಾಗಿ ಬೆಳೆಸುತ್ತಿದ್ದಾನೆ.

ALSO READ :  ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ ಅರೆಸ್ಟ್: ಎಂಪಿ ಸೀಟು ಕೊಡಿಸ್ತೀನಿ ಅಂತ 2 ಕೋಟಿ ವಂಚನೆ!

ಬಿಶ್ನೋಯಿ 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿದ್ದು, ಇದರಲ್ಲಿ 300 ಮಂದಿ ಪಂಜಾಬ್ ನಲ್ಲಿಯೇ ಇದ್ದಾರೆ. ಹರಿಯಾಣ, ರಾಜಸ್ಥಾನ, ದೆಹಲಿಯಲ್ಲಿ ಅತೀ ಹೆಚ್ಚು ಸಂಪರ್ಕಗಳನ್ನು ಹೊಂದಿದ್ದು, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಉತ್ತರಪ್ರದೇಶಗಳಲ್ಲೂ ಪ್ರಭಾವ ಹೊಂದಿದ್ದಾನೆ ಎಂದು ಎಫ್ ಐಆರ್ ನಲ್ಲಿ ವಿವರಿಸಲಾಗಿದೆ.

2021ರಲ್ಲಿ ಬೆದರಿಕೆಗಳ ಮೂಲಕ ಕೋಟ್ಯಂತರ ರೂಪಾಯಿ ಗಳಿಸಿರುವ ಬಿಶ್ನೋಯಿ ಗ್ಯಾಂಗ್ ಹವಾಲಾ ಮೂಲಕ ವಿದೇಶಕ್ಕೆ ರವಾನೆ ಮಾಡುತ್ತಿದೆ. ಇದರಿಂದ ಕೆನಡಾದಲ್ಲಿ ಕೂಡ ಈತ `ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದಾನೆ.

ಬಡತನದಲ್ಲಿರುವ ಸಣ್ಣಪುಟ್ಟ ಅಪರಾಧಗಳಲ್ಲಿ ಸಿಕ್ಕಿಬಿದ್ದ ಯುವಕರೇ ಈತನ ಪರ ದಾಳಿ ಅಥವಾ ಕೊಲೆ ಮಾಡುವ ಆಯುಧಗಳಾಗಿದ್ದು, ಇವರು ಗುಜುರಿ, ಹೋಟೆಲ್ ಸೇರಿದಂತೆ ಸಣ್ಣಪುಟ್ಟ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದು, ಆದೇಶ ಬರುತ್ತಿದ್ದಂತೆ ಸಕ್ರಿಯವಾಗುತ್ತಾರೆ.


Political News

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

Scroll to Top