advertise here

Search

ಬೆಂಗಳೂರು ಟೆಸ್ಟ್: 46 ರನ್ ಗೆ ಆಲೌಟಾದ ಭಾರತ ತವರಿನಲ್ಲಿ ಕಳಪೆ ದಾಖಲೆ!


ನ್ಯೂಜಿಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ತಂಡ 46 ರನ್ ಗೆ ಆಲೌಟಾಗಿದೆ. ತವರಿನಲ್ಲಿ ಭಾರತ ತಂಡ ದಾಖಲಿಸಿದ ಅತ್ಯಂತ ಕಳಪೆ ಮೊತ್ತವಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಳೆಯಿಂದ ಮೊದಲ ದಿನದಾಟ ರದ್ದಾಗಿದ್ದರಿಂದ ಪಂದ್ಯದ ಎರಡನೇ ದಿನವಾದ ಗುರುವಾರ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 31.2 ಓವರ್ ಗಳಲ್ಲಿ 46 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಭಾರತ ತಂಡ ತವರಿನಲ್ಲಿ ದಾಖಲಿಸಿದ ಅತ್ಯಂತ ಕಳಪೆ ಮೊತ್ತ ಹಾಗೂ ಒಟ್ಟಾರೆ ಮೂರನೇ ಅತ್ಯಂತ ಕಳಪೆ ಮೊತ್ತವಾಗಿದೆ.

ನ್ಯೂಜಿಲೆಂಡ್ ಪರ ಮಾರ್ಕ್ ಹೆನ್ರಿ 5 ವಿಕೆಟ್ ಗೊಂಚಲು ಪಡೆದಿದ್ದೂ ಅಲ್ಲದೇ ಟೆಸ್ಟ್ ಕ್ರಿಕೆಟ್ ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದರು. ವಿಲಿಯಮ್ ಓರೊರ್ಕಿ ಪ್ರಮುಖ 4 ವಿಕೆಟ್ ಪಡೆದು ಉತ್ತಮ ಬೆಂಬಲ ನೀಡಿದರು. ಕಿವೀಸ್ ಬೌಲಿಂಗ್ ಎಷ್ಟು ತೀಕ್ಷ್ಣವಾಗಿತ್ತು ಅಂದರೆ ತಂಡ ಕೇವಲ ಮೂವರು ಬೌಲರ್ ಬಳಸಿ ಭಾರತ ತಂಡ 10 ವಿಕೆಟ್ ಕಬಳಿಸಿತು.

ALSO READ :  ನಟಿ ಅಮೂಲ್ಯ ಸೋದರ, ನಿರ್ದೇಶಕ ದೀಪಕ್ ಅರಸ್ 42 ವಯಸ್ಸಿಗೆ ನಿಧನ

ಭಾರತದ ಬ್ಯಾಟಿಂಗ್ ಬೆನ್ನೆಲುಬು ಆದ ವಿರಾಟ್ ಕೊಹ್ಲಿ (0), ಕೆಎಲ್ ರಾಹುಲ್ (0), ಸರ್ಫರಾಜ್ ಖಾನ್ (0), ರವೀಂದ್ರ ಜಡೇಜಾ (0) ಮತ್ತು ಆರ್.ಅಶ್ವಿನ್ (0) ಶೂನ್ಯಕ್ಕೆ ಔಟಾದರೆ, ನಾಯಕ ರೋಹಿತ್ ಶರ್ಮ (2) ಅಲ್ಪ ಮೊತ್ತಕ್ಕೆ ನಿರ್ಗಮಿಸಿದರು. ಆರಂಭಿಕ ಯಶಸ್ವಿ ಜೈಸ್ವಾಲ್ (13) ಮತ್ತು ರಿಷಭ್ ಪಂತ್ (20) ಮಾತ್ರ ಎರಡಂಕಿಯ ಮೊತ್ತ ಕಲೆ ಹಾಕಿದರು.


Political News

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Scroll to Top