advertise here

Search

ವಾರದೊಳಗೆ ಅನ್ನಭಾಗ್ಯದ ಹಣ ಜಮೆ: ಆಹಾರ ಸಚಿವ ಕೆಎಚ್ ಮುನಿಯಪ್ಪ


ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿ ನೀಡುತ್ತಿರುವ ಅನ್ನಭಾಗ್ಯದ ಅಕ್ಕಿ ಹಣ ವಾರದೊಳಗೆ ಪಾವತಿಯಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಕೋಲಾರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವರ್‌ ಸಮಸ್ಯೆಯಿಂದಾಗಿ 2 ತಿಂಗಳಿಂದ ಅಕ್ಕಿ ಹಣ ಬಿಡುಗಡೆ ಮಾಡಲು ಆಗಿರಲಿಲ್ಲ. ಇದೀಗ ಸಮಸ್ಯೆ ಬಗೆಹರಿದಿದ್ದು, ವಾರದೊಳಗೆ ಹಣ ಪಾವತಿಯಾಗಲಿದೆ ಎಂದರು.

ಸಾಮಾನ್ಯವಾಗಿ ಪ್ರತಿ ತಿಂಗಳು 10ನೇ ತಾರೀಖಿನಿಂದ ಬಿಡುಗಡೆಯಾಗುತ್ತಿದ್ದು, ಸರ್ವರ್‌ ಸಮಸ್ಯೆಯಿಂದಾಗಿ ಅಕ್ಕಿ ಹಣ ಬಂದಿಲ್ಲ. ಸರಕಾರದಲ್ಲಿ ಹಣದ ಕೊರತೆಯಿಲ್ಲ. ಈ ಬಾರಿ ತಡವಾಗಿದ್ದು, ಮುಂದಿನ ವಾರದಲ್ಲಿ ಹಣ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ALSO READ :  ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ....! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ "ಡಿಕೆಶಿ" ಜಂಪಿಂಗ್ ಪಕ್ಕಾ..!

ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಹೊರತುಪಡಿಸಿ ಎಲ್ಲಿಯೂ ಶೇ.50ರಷ್ಟು ಬಿಪಿಎಲ್‌ ಕಾರ್ಡ್‌ಗಳು ಇಲ್ಲ. ರಾಜ್ಯದಲ್ಲಿರುವ ಪಡಿತರ ಚೀಟಿಗಳ ಪೈಕಿ ಶೇ.80ರಷ್ಟು ಬಿಪಿಎಲ್‌ ಇವೆ. ಹೀಗಾಗಿ ಪರಿಷ್ಕರಣೆ ಮಾಡಿದ ಬಳಿಕ ಬಿಪಿಎಲ್‌ಗೆ ಅರ್ಹತೆ ಇಲ್ಲದ ಕಾರ್ಡ್‌ಗಳನ್ನು ಎಪಿಎಲ್‌ ಎಂದು ಪರಿಗಣಿಸಲಾಗುತ್ತದೆ. ಪ್ರತಿ ಕೆಜಿ ಅಕ್ಕಿಗೆ 15 ರೂ.ಗಳನ್ನು ಪಡೆದು, ಸಬ್ಸಿಡಿ ನೀಡಲಾಗುತ್ತದೆ. ಉಳಿದ ಹಣವನ್ನು ಸರಕಾರವೇ ಭರಿಸಲಿದೆ ಎಂದು ತಿಳಿಸಿದರು.


Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top