advertise here

Search

ವಾರದೊಳಗೆ ಅನ್ನಭಾಗ್ಯದ ಹಣ ಜಮೆ: ಆಹಾರ ಸಚಿವ ಕೆಎಚ್ ಮುನಿಯಪ್ಪ


ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿ ನೀಡುತ್ತಿರುವ ಅನ್ನಭಾಗ್ಯದ ಅಕ್ಕಿ ಹಣ ವಾರದೊಳಗೆ ಪಾವತಿಯಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಕೋಲಾರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವರ್‌ ಸಮಸ್ಯೆಯಿಂದಾಗಿ 2 ತಿಂಗಳಿಂದ ಅಕ್ಕಿ ಹಣ ಬಿಡುಗಡೆ ಮಾಡಲು ಆಗಿರಲಿಲ್ಲ. ಇದೀಗ ಸಮಸ್ಯೆ ಬಗೆಹರಿದಿದ್ದು, ವಾರದೊಳಗೆ ಹಣ ಪಾವತಿಯಾಗಲಿದೆ ಎಂದರು.

ಸಾಮಾನ್ಯವಾಗಿ ಪ್ರತಿ ತಿಂಗಳು 10ನೇ ತಾರೀಖಿನಿಂದ ಬಿಡುಗಡೆಯಾಗುತ್ತಿದ್ದು, ಸರ್ವರ್‌ ಸಮಸ್ಯೆಯಿಂದಾಗಿ ಅಕ್ಕಿ ಹಣ ಬಂದಿಲ್ಲ. ಸರಕಾರದಲ್ಲಿ ಹಣದ ಕೊರತೆಯಿಲ್ಲ. ಈ ಬಾರಿ ತಡವಾಗಿದ್ದು, ಮುಂದಿನ ವಾರದಲ್ಲಿ ಹಣ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ALSO READ :  EXCLUSIVE.."ಖಡಕ್" IAS "ಮೌದ್ಗಿಲ್" ಎತ್ತಂಗಡಿಗೆ "ಪ್ಲ್ಯಾನ್"..! ಸರ್ಕಾರದ ಮಟ್ಟದಲ್ಲಿ "ಲಾಭಿ"..?

ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಹೊರತುಪಡಿಸಿ ಎಲ್ಲಿಯೂ ಶೇ.50ರಷ್ಟು ಬಿಪಿಎಲ್‌ ಕಾರ್ಡ್‌ಗಳು ಇಲ್ಲ. ರಾಜ್ಯದಲ್ಲಿರುವ ಪಡಿತರ ಚೀಟಿಗಳ ಪೈಕಿ ಶೇ.80ರಷ್ಟು ಬಿಪಿಎಲ್‌ ಇವೆ. ಹೀಗಾಗಿ ಪರಿಷ್ಕರಣೆ ಮಾಡಿದ ಬಳಿಕ ಬಿಪಿಎಲ್‌ಗೆ ಅರ್ಹತೆ ಇಲ್ಲದ ಕಾರ್ಡ್‌ಗಳನ್ನು ಎಪಿಎಲ್‌ ಎಂದು ಪರಿಗಣಿಸಲಾಗುತ್ತದೆ. ಪ್ರತಿ ಕೆಜಿ ಅಕ್ಕಿಗೆ 15 ರೂ.ಗಳನ್ನು ಪಡೆದು, ಸಬ್ಸಿಡಿ ನೀಡಲಾಗುತ್ತದೆ. ಉಳಿದ ಹಣವನ್ನು ಸರಕಾರವೇ ಭರಿಸಲಿದೆ ಎಂದು ತಿಳಿಸಿದರು.


Political News

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

Scroll to Top