advertise here

Search

ಸರಿಯಾಗಿ ಬಟ್ಟೆ ಹಾಕದಿದ್ದರೆ ಆಸಿಡ್ ಹಾಕುವೆ ಎಂದು ಬೆದರಿಸಿದ್ದ ಬೆಂಗಳೂರಿನ ಉದ್ಯೋಗಿ ವಜಾ!


ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇಟಿಯೋಸ್ ಸರ್ವಿಸಸ್ ಕಂಪನಿ ಸೇವೆಯಿಂದ ವಜಾಗೊಳಿಸಿದೆ.

ಪತ್ನಿಗೆ ಮಾಡಿದ ಮೆಸೇಜ್ ನ ಸ್ಕ್ರೀನ್ ಶಾಟ್ ಅನ್ನು ಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ? ಎಂದು ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಬೆದರಿಕೆ ಹಾಕಿದ್ದ ನಿಕಿತ್ ಶೆಟ್ಟಿ ಎಂಬಾತನನ್ನು ಕಂಪನಿಯು ಸೇವೆಯಿಂದ ವಜಾಗೊಳಿಸಿದೆ.

ನಿನಗಿಷ್ಟ ಬಂದ ಬಟ್ಟೆಗಳನ್ನು ಹಾಕಿಕೊಳ್ಳಬೇಡ. ಸರಿಯಾಗಿರುವ ಬಟ್ಟೆ ಹಾಕಿಕೊ. ಇಲ್ಲದಿದ್ದರೆ ಮುಖದ ಮೇಲೆ ಆಸಿಡ್ ಎರಚುವೆ ಎಂದು ನಿಕಿತ್ ಶೆಟ್ಟಿ ಮಹಿಳೆಗೆ ಮೆಸೇಜ್ ಮಾಡಿದ್ದ. ಈ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದ ಪತಿ, ನನ್ನ ಪತ್ನಿ ಬಟ್ಟೆಯ ಆಯ್ಕೆಯನ್ನು ನಿರ್ಧರಿಸುವ ಆ ವ್ಯಕ್ತಿ ಯಾರು? ಈ ರೀತಿ ಬೆದರಿಕೆ ಹಾಕುವವರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಿ ಎಂದು ಪತಿ ಪೋಸ್ಟ್ ಮಾಡಿದ್ದರು.

ALSO READ :  ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ಸರ್ವೆ...1712 ಒತ್ತುವರಿ ಕಟ್ಟಡಗಳಿಗೆ ಕಾದಿದೆ ಡೆಮಾಲಿಷನ್ ಭೀತಿ

ಈ ಪೋಸ್ಟ್ ಅನ್ನು ಷೇರ್ ಮಾಡಿಕೊಂಡಿದ್ದ ಪತ್ರಕರ್ತ ಶಹಬಾಜ್ ಅಜರ್, ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರನ್ನು ಟ್ಯಾಗ್ ಮಾಡಿ ಕೂಡಲೇ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನಿಕಿತ್ ಶೆಟ್ಟಿ ಕೆಲಸ ಮಾಡುತ್ತಿದ್ದ ಕಂಪನಿ ಇಟಿಯೋಸ್ ಸರ್ವಿಸಸ್ ಕೂಡಲೇ ಆತನನ್ನು ಸೇವೆಯಿಂದ ವಜಾ ಮಾಡಿದೆ.

ಈ ವಿಷಯ ತಿಳಿದ ಮಹಿಳೆಯ ಪತಿ ಸಂಬಂಧಪಟ್ಟವರಿಗೆ ಧನ್ಯವಾದ ಅರ್ಪಿಸಿದ್ದು, ನನ್ನ ಮನವಿಗೆ ಸ್ಪಂದಿಸಿದ್ದಕ್ಕೆ ಧನ್ಯವಾದಗಳು. ಬೆಂಗಳೂರು ಸುರಕ್ಷಿತ ಮಾಡಲು ನಿಮ್ಮ ಕೊಡುಗೆ ಅಗತ್ಯ ಎಂದು ಪೋಸ್ಟ್ ಮಾಡಿದ್ದಾರೆ.


Political News

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

Scroll to Top