advertise here

Search

ಖಾಸಗಿ ಸಂಸ್ಥೆಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ


ಶಾಲೆ, ಐಟಿ ಬಿಟಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕನ್ನಡ ಭಾಷಾ ಪ್ರೇಮ ಹೆಚ್ಚಲು ಆಗಲು ಜಾಗೃತಿ ಮೂಡಿಸುವ ಉದ್ದೇಶದಿಂದ ಖಾಸಗಿ ಶಾಲಾ-ಕಾಲೇಜು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ಶಾಲೆಗಳಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಬೇಕು ಹಾಗೂ ಕನ್ನಡ ಸಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆದರೆ ಖಾಸಗಿ ಕಂಪನಿಗಳಲ್ಲಿ ಅದರಲ್ಲೂ ಐಟಿ-ಬಿಟಿ ಕಂಪನಿಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿಲ್ಲ. ಬದಲಿಗೆ ಧ್ವಜಾರೋಹಣ ಮಾಡಿದರೂ ಸಾಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ALSO READ :  ರಾಷ್ಟ್ರಧ್ವಜಕ್ಕೆ 21 ಬಾರಿ ಸೆಲ್ಯೂಟ್ ಮಾಡಲು ಯುವಕನಿಗೆ ಶಿಕ್ಷೆ!

ಖಾಸಗಿ ಕಂಪನಿಗಳು ಹಾಗೂ ಶಾಲೆಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿರುವ ಬಗ್ಗೆ ಫೋಟೊ ಹಾಗೂ ವೀಡಿಯೊಗಳನ್ನು ತೆಗೆದು ಬಿಬಿಎಂಪಿ ಕಚೇರಿಗೆ ತಲುಪಿಸಬೇಕು ಎಂದು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಲ್ಲಾ ಖಾಸಗಿ ಕಂಪನಿಗಳು, ಐಟಿ ಬಿಟಿ ಕಂಪನಿಗಳು, ಕಾರ್ಖಾನೆಗಳು, ಶಾಲಾ-ಕಾಲೇಜುಗಳು ತಮ್ಮ ಕಚೇರಿಯ ಮುಭಾಂಗದಲ್ಲಿ ಕನ್ನಡ ಧ್ವಜಾರೋಹಣ ಮಾಡಬೇಕು ಸರ್ಕಾರ ತೀರ್ಮಾನಿಸಿದೆ ಎಂದರು.


Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top