advertise here

Search

ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ: ಬೀರೂರಿನ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ


ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ ಪರಾಕ್ ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ಇತಿಹಾಸ ಪ್ರಸಿದ್ಧ ಮೈಲಾಂಗರಲಿಂಗೇಶ್ವರ ಕಾರ್ಣಿಕ ನುಡಿದಿದೆ.

ವಿಜಯದಶಮಿಯ ಮಾರನೇ ದಿನವಾದ ಭಾನುವಾರ ಮಹಾನವಮಿ ಬಯಲಿನಲ್ಲಿ ನಡೆದ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೆರವಣಿಗೆ ನಡೆದಿದ್ದು, ಭಾನುವಾರ ಬೆಳಿಗ್ಗೆ ದಶರಥ ಪೂಜಾರ್ ಕಾರ್ಣಿಕ ನುಡಿದಿದ್ದಾರೆ.

ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಅಗಮಿಸಿರುವ ಭಕ್ತರು. ಹಲವು ಬಾರಿ ಕಾರ್ಣಿಕದ ನುಡಿಯಂತೆ ನಡೆದಿರುವ ಉದಾಹರಣೆ ಇದೆ. ಕಾರ್ಣಿಕ ಕೇಳಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಕಾರ್ಣಿಕ ನುಡಿದಿರುವ ಭವಷ್ಯವಾಣಿ ಬಗ್ಗೆ ಭಕ್ತರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ALSO READ :  ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ "ಯೂ ಟರ್ನ್" ಹಿಂದಿದ್ಯಾ "ಮೆಗಾ ಪ್ಲ್ಯಾನ್"-"ಬಿಗ್ ಡೀಲ್"..!?

ಕಾರ್ಣಿಕದ ಭವಿಷ್ಯವನ್ನು ಈ ರೀತಿ ವಿಶ್ಲೇಷಿಸಲಾಗಿದೆ.

ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ: ರಾಮ ಬಾಣದ ಗುರಿ ಎಂದೂ ತಪ್ಪಿಲ್ಲ. ಅದರಂತೆ ನಿಶ್ಚಿತ ಗುರಿಯೊಂದಿಗೆ ಮಾಡಿದ ಕೆಲಸ ಕೈತಪ್ಪುವುದಿಲ್ಲ.

ನ್ಯಾಯದ ತಕ್ಕಡಿ ಜರುಗಿತ್ತು: ರಾಜ್ಯದಲ್ಲಿ ನ್ಯಾಯಕ್ಕೆ ಜಯ ಸಿಗದೇ ಅನ್ಯಾಯಕ್ಕೆ ಜಯವಾಗುತ್ತೆ. ಅನ್ಯಾಯದ ದಾರಿಯಲ್ಲಿದ್ದವರಿಗೆ ಜಯವಾಗುತ್ತೆ.

ಜ್ಞಾನದ ಹಣತೆ ಹಚ್ಚಿದರು: ರಾಜ್ಯದಲ್ಲಿ ನಡೆಯ ಬಹುದಾದ ಘಟನೆ ಬಗ್ಗೆ ಮುಂಚಿತವಾಗಿ ಜ್ಞಾನಿಗಳು ಮಾಹಿತಿ ನೀಡುತ್ತಾರೆ.

ಜೀವ ರಾಶಿಗೆ ಸಂಪಾಯಿತಲೇ ಪರಾಕ್: ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಕಲ ಜೀವರಾಶಿಗಳು ಸಂಪಾಗಿರುತ್ತೆ.


Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top