advertise here

Search

ನೌಕಾಪಡೆ ಬಲವರ್ಧನೆಗೆ 80,000 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಅಸ್ತು


2 ಪರಮಾಣು ಸಾಮರ್ಥ್ಯದ ಸಬ್ ಮೇರಿನ್ ನಿರ್ಮಾಣ ಹಾಗೂ 31 ಪ್ರೀಡಿಯೇಟರ್ ಡ್ರೋಣ್ ಗಳ ಖರೀದಿಗೆ 80 ಸಾವಿರ ಕೋಟಿ ರೂ. ವಿನಿಯೋಗಿಸಲು ಕೇಂದ್ರ ರಕ್ಷಣಾ ಸಮಿತಿ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರತದ ನೌಕಾಪಡೆ ಬಲವರ್ಧನೆಗೆ ದೊಡ್ಡ ಮೊತ್ತವನ್ನು ವಿನಿಯೋಗಿಸಲು ತೀರ್ಮಾನಿಸಲಾಯಿತು. ಇದರಿಂದ ಭಾರತದ ಬಳಿ ಸಬ್ ಮೇರಿನ್ ಗಳ ಸಂಖ್ಯೆ 5ಕ್ಕೆ ಏರಿಕೆಯಾಗಲಿದೆ.

ಸಮುದ್ರದಲ್ಲಿ ಭಾರತ ಗಡಿ ರಕ್ಷಣೆಗೆ ಒತ್ತು ನೀಡಲು ನಿರ್ಧರಿಸಲಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನದ ಪರಮಾಣು ಸಾಮರ್ಥ್ಯದ ಎರಡು ಜಲಾಂತರ್ಗಾಮಿಗಳನ್ನು ನಿರ್ಮಿಸಲು ಕೇಂದ್ರ ರಕ್ಷಣಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.

ALSO READ :  ಲಕ್ಕುಂಡಿ ನಿಧಿ ರಹಸ್ಯ ಬಯಲು: ಚಿನ್ನದ ಬಿಸ್ಕಿಟ್ ಹೆಸರಲ್ಲಿ 'ಚಾಕಲೇಟ್' ಆಟ! ಮೌಲ್ವಿ ಅರೆಸ್ಟ್

ವಿಶಾಖಪಟ್ಟಣದಲ್ಲಿ ಎರಡು ಸಬ್ ಮೇರಿನ್ ಗಳನ್ನು 45 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಸಬ್ ಮೇರಿನ್ ನಿರ್ಮಾಣದ ಗುತ್ತಿಗೆಯನ್ನು ಲಾರ್ಸೆನ್ ಮತ್ತು ಟರ್ಬೊ ಅಂತಹ ಕಂಪನಿಗಳಿಗೆ ಗುತ್ತಿಗೆ ನೀಡಲು ನಿರ್ಧರಿಸಲಾಗಿದೆ.

ಭಾರತದ ಸಬ್ ಮೇರಿನ್ ನಿರ್ಮಾಣದ ಯೋಜನೆ ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದು, ಯುದ್ಧದ ಕಾರ್ಮೊಡ ಇದ್ದು, ಸಾಗರದಲ್ಲಿ ದಾಳಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 2 ಸಬ್ ಮೇರಿನ್ ತುರ್ತು ನಿರ್ಮಾಣಕ್ಕೆ ತೀರ್ಮಾನಿಸಲಾಗಿದ್ದು, ಇದೇ ರೀತಿ 6 ಸಬ್ ಮೇರಿನ್ ಅಗತ್ಯವಿದೆ ಎಂದು ಹೇಳಲಾಗಿದೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top