advertise here

Search

14 ಲಕ್ಷ ಅನರ್ಹ ಪಡಿತರ ಚೀಟಿ ರದ್ದು: ಸಚಿವ ಕೆಎಚ್ ಮುನಿಯಪ್ಪ


ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದ್ದು, ಈಗಾಗಲೇ 3.64 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.

ಸರ್ಕಾರಿ ನೌಕರರ 2,964 ಅನರ್ಹ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ 4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಅಹರ್ನತೆಗೆ ಮಾನದಂಡವೇನು?

6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ.

ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್​ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್‌ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅನ್ನಭಾಗ್ಯ ಹಣ ವರ್ಗಾವಣೆ ಮುಂದುವರಿಕೆ ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ನಗದು ವರ್ಗಾವಣೆ (ಡಿಬಿಟಿ) ಮುಂದುವರಿಯಲಿದೆ ಎಂದು ಮುನಿಯಪ್ಪ ತಿಳಿಸಿದರು.

ALSO READ :  ಬೆಂಗಳೂರು ಟೆಸ್ಟ್: ಸರ್ಫರಾಜ್ ಚೊಚ್ಚಲ ಶತಕ, ಕಿವೀಸ್ ಗೆ 107 ರನ್ ಗುರಿ

ರಾಜ್ಯಕ್ಕೆ ಕೆಜಿ ಅಕ್ಕಿಯನ್ನು 28 ರೂ.ಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದೂ ಅವರು ಹೇಳಿದರು. ಹೆಚ್ಚುವರಿಯಾಗಿ ಅಗತ್ಯವಿರುವ 20,000 ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆಡೆಗಳಿಂದ ಸಂಗ್ರಹಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

2023-24ರಲ್ಲಿ ಕರ್ನಾಟಕಕ್ಕೆ ವಾರ್ಷಿಕ 27.48 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಕೆಜಿಗೆ 34.6 ರೂ.ಗೆ ನೀಡಲು ಕೇಂದ್ರ ನಿರಾಕರಿಸಿತ್ತು. ರಾಜ್ಯ ಸರ್ಕಾರವು ಚುನಾವಣಾ ಪೂರ್ವ ಭರವಸೆಯಂತೆ 5 ಕೆಜಿ ಅಕ್ಕಿ ಬದಲಿಗೆ 170 ರೂಪಾಯಿ ನೀಡಲು ನಿರ್ಧರಿಸಿತ್ತು.

ಹೋಟೆಲ್, ಸಮುದಾಯ ಭವನಗಳಲ್ಲಿ ಆಹಾರ ಪೋಲು ಮಾಡುವುದನ್ನು ತಡೆಯಲು ಕಾನೂನು ರೂಪಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುನಿಯಪ್ಪ ತಿಳಿಸಿದ್ದಾರೆ.


Political News

‘ಪರಿಶ್ರಮ’ದ ಹೆಸರಲ್ಲಿ ಪ್ರದೀಪ್ ಈಶ್ವರ್ ರಾಜಕೀಯ ಪಾರುಪತ್ಯ? – ತೆರೆ ಮರೆಯ ಕರಾಳ ಸತ್ಯ ಬಯಲು!

ವಿಶ್ವ ರಾಜಕಾರಣದಲ್ಲಿ ಹೊಸ ಸಮೀಕರಣ: ಟ್ರಂಪ್-ಮೋದಿ ಕಾಲ್‌ನಲ್ಲಿ ಎಲಾನ್ ಮಸ್ಕ್ ಎಂಟ್ರಿ!

ನೇಪಾಳ:  ‘ಜೆನ್ ಜಿ’ ಪ್ರತಿಭಟನೆ ಹತ್ತಿಕ್ಕಿದ್ದ ಮಾಜಿ ಪ್ರಧಾನಿ ಓಲಿ ಸೆರೆ

ಜನಸಾಮಾನ್ಯರಿಗೆ ಕ್ಯೂ.. ಶಾಸಕರಿಗೆ ವಿಐಪಿ ವ್ಯೂ! ಇದು ‘ಹಸ್ತ’ ಸರ್ಕಾರದ ಅಸಲಿ ಮುಖವೇ?

ಪೆಟ್ರೋಲ್-ಡೀಸೆಲ್ ಶಾಕ್ ನಡುವೆ ಕೇಂದ್ರದ ಮಾಸ್ಟರ್ ಪ್ಲಾನ್: ಅಬಕಾರಿ ಸುಂಕ ₹10 ಕಡಿತ

ಬೆಂಗಳೂರು ಕೇಂದ್ರ ಬಜೆಟ್ 2026: ಕಾಂಕ್ರೀಟ್ ಕಾಡಿಗೆ ‘ಮಾನವೀಯ’ ಸ್ಪರ್ಶ!

ಬೆಂಗಳೂರು ಪೂರ್ವ ಬಜೆಟ್ 2026-27: ಮೂಲಸೌಕರ್ಯದ ಜೊತೆ ‘ಕಲ್ಯಾಣ’ ಮಂತ್ರ; ಬಡವರ ಮನೆಗೆ ಪಾಲಿಕೆ ಆಸರೆ!

ಕರಾವಳಿಗೆ ಬಂತು ‘ಅನಿಲ’ ಸಂಜೀವಿನಿ: ಮಂಗಳೂರು ಬಂದರಿಗೆ 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿ!

Scroll to Top