advertise here

Search

ಸದ್ಗುರು ಜಗ್ಗಿ ವಾಸುದೇವ್ ಗೆ ರಿಲೀಫ್: ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾ!

ಹೆಣ್ಣುಮಕ್ಕಳಿಗೆ ಬ್ರೈನ್ ವಾಷ್ ಮಾಡಿ ಆಶ್ರಮದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ತಂದೆ ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ತಮಿಳುನಾಡಿನ ಕೊಯಮತ್ತೂರು ಆಶ್ರಮದಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಪೋಷಕರ ಸಂಪರ್ಕದಿಂದ ಕಡಿತಗೊಳಿಸಿ ಆಶ್ರಮದಲ್ಲಿ ಅಕ್ರಮವಾಗಿ ಇರಿಸಿಕೊಳ್ಳಲಾಗಿದೆ ಎಂದು ಪ್ರೊಫೆಸರ್ ನ್ಯಾಯಾಲಯಕ್ಕೆ ದೂರು ನೀಡಿದ್ದರು. ದೂರಿನ ಅನ್ವಯ ಇತ್ತೀಚೆಗೆ ತಮಿಳುನಾಡು ಪೊಲೀಸರು ಈಶಾ ಫೌಂಡೇಷನ್ ಮೇಲೆ ದಾಳಿ ಮಾಡಿದ್ದರು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ … Read more

ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆ

ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಗುರುವಾರ ವಿಚಾರಣೆಗೊಳಪಡಿಸಿದೆ. ಎಚ್ ಪಿಜೆಡ್ ಮೊಬೈಲ್ ಆಪ್ ಮೂಲಕ ಬಿಟ್ ಕಾಯಿನ್ ಅಥವಾ ಕ್ರಿಪ್ಟೊಕರೆನ್ಸಿ ಹೆಸರಿನಲ್ಲಿ ಹಲವಾರು ಜನರಿಗೆ ಸಂದೇಶ ಕಳುಹಿಸಿ ವಂಚಿಸಿದ ಪ್ರಕರಣದ ಹಿನ್ನೆಲೆಯಲ್ಲಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 34 ವರ್ಷದ ತಮನ್ನಾ ಭಾಟಿಯಾ ಅವರ ಹೇಳಿಕೆಯನ್ನು ಇಡಿ ದಾಖಲಿಸಿಕೊಂಡಿದೆ. ಮೊಬೈಲ್ ಆಪ್ ಸಂಸ್ಥೆಯ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ `ಸೆಲೆಬ್ರೆಟಿಯಾಗಿ … Read more

5 ಕೋಟಿ ರೂ.ಗೆ ಡಿಮ್ಯಾಂಡ್: ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸದಾಗಿ ಮತ್ತೊಂದು ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಕೊಟ್ಟು ಲಾರೆನ್ಸ್ ಬಿಶ್ನೋಯಿ ಜೊತೆಗಿನ ವೈರತ್ವಕ್ಕೆ ಕೊನೆ ಮಾಡಿ ಎಂದು ಬೆದರಿಸಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಗ್ರೂಪ್ ಗೆ ಬಂದಿರುವ ಸಂದೇಶದಲ್ಲಿ ಲಾರೆನ್ಸ್ ಬಿಶ್ನೋಯಿ ಗುಂಪಿನವರು ಎಂದು ಶಂಕಿಸಲಾದ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಸಲ್ಮಾನ್ ಖಾನ್ ಒಂದು ವೇಳೆ 5 ಕೋಟಿ ರೂ. ನೀಡದೇ ಇದ್ದರೆ ಇತ್ತೀಚೆಗೆ ಹತ್ಯೆಯಾದ ಶಾಸಕ ಬಾಬಾ ಸಿದ್ದಿಕಿಗೆ ಆದ ಸ್ಥಿತಿಗಿಂತ … Read more

ನಟಿ ಅಮೂಲ್ಯ ಸೋದರ, ನಿರ್ದೇಶಕ ದೀಪಕ್ ಅರಸ್ 42 ವಯಸ್ಸಿಗೆ ನಿಧನ

ನಟಿ ಅಮೂಲ್ಯ ಸೋದರ ಹಾಗೂ ಕನ್ನಡ ಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದ ಕಾರಣ ಗುರುವಾರ ನಿಧನರಾಗಿದ್ದು, ಅವರಿಗೆ 42 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ದೀಪಕ್ ಅರಸ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ದೀಪಕ್ ಅರಸ್ ಮನಸಾಲಜಿ, ಶುಗರ್ ಫ್ಯಾಕ್ಟರಿ ಎಂಬ ಎರಡು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಅಲ್ಲದೇ ಟೂರ್ ಅಂಡ್ ಟ್ರಾವೆಲ್ಸ್ ನಡೆಸುತ್ತಿದ್ದರು.

ನವೆಂಬರ್ 1ರಿಂದ ಟಿಕೆಟ್ ಬುಕ್ಕಿಂಗ್ ಅವಧಿ 120 ದಿನದಿಂದ 60 ದಿನಕ್ಕೆ ಇಳಿಕೆ!

ರೈಲ್ವೆ ಟಿಕೆಟ್ ಮುಂಗಡ ಬುಕ್ಕಿಂಗ್ ಅವಧಿಯಲ್ಲಿ 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ನವೆಂಬರ್ 1ರಿಂದ ನೂತನ ನಿಯಮ ಜಾರಿಗೆ ಬರಲಿದೆ. ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನ ಅಂದರೆ 4 ತಿಂಗಳ ಮುನ್ನವೇ ಮಾಡಬಹುದಿತ್ತು. ಆದರೆ ನೂತನ ಆದೇಶದ ಪ್ರಕಾರ 60 ದಿನ ಅಂದರೆ ಎರಡು ತಿಂಗಳಿಗೆ ಮಾತ್ರ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಅಕ್ಟೋಬರ್ 31ರವರೆಗೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನಗಳ ಅವಧಿಯವರೆಗೆ ಚಾಲ್ತಿಯಲ್ಲಿರುತ್ತದೆ. ಪರಿಷ್ಕೃತ … Read more

“ಮಗ”ನ ಹೆಸರ “ಕಂಪೆನಿ”ಗೆ ಲಕ್ಷಾಂತರ ರೂ “ಧಾರೆ”..! “ಟೆಂಡರ್” ನಿಯಮ ಉಲ್ಲಂಘಿಸಿ ಹಣ “ಟ್ರಾನ್ಸ್ ಫರ್”..? “ಅಕ್ರಮ” ನಡೆದ್ರೂ ಕ್ರಮ ಕೈಗೊಳ್ಳಲು “ಮೀನಾಮೇಷ”ವೇಕೇ..?!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಸುಂದರ ಬೆಂಗಳೂರು… ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಅದೆಲ್ಲಕ್ಕಿಂತ ಮುನ್ನ ತುರ್ತಾಗಿ ಮಾಡಬೇಕಿ ರುವ ಕೆಲಸವೇ ಬೇರೆಯಿದೆ. ಬೆಂಗಳೂರನ್ನು ಸ್ವಚ್ಛ ಸುಂದರವಾಗಿಟ್ಟುಕೊಳ್ಳುವ ಮುನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಅದರ ಆಡಳಿತವನ್ನು ಸರಿಯಾಗಿಟ್ಟುಕೊಳ್ಳಲಿ.ಅವರ ಅಧೀನದಲ್ಲಿರುವ ಅಧಿಕಾರಿ-ಸಿಬ್ಬಂದಿ ನಡೆಸುತ್ತಿರುವ ಅಂದಾದರ್ಬಾರ್ ಗೆ ಕಡಿವಾಣ ಹಾಕಿ ಅವರನ್ನೆಲ್ಲಾ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕಿದೆ.ಅದನ್ನು ಮಾಡದೆ ಬೇರೆ ಏನನ್ನೇ ಮಾಡಿದ್ರೂ ಅದೆಲ್ಲಾ ವೇಸ್ಟ್…ವೇಸ್ಟ್…ಒನ್ಸ್ ಅಗೈನ್ ವೇಸ್ಟ್ ಅಷ್ಟೆ.. ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ … Read more

ಕಿಲಾರಿ ಬೊಮ್ಮಯ್ಯ, ರಾಜಶೇಖರ, ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗೆ ಶ್ರಮಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಭಾಗ: ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ ಗಡ್ಡದಾರಹಟ್ಟಿ, ಚಳ್ಳಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆಯವರಾದ ಇವರು ಕಿಲಾರಿ ( ಜಾನುವಾರುಗಳ ಸಂರಕ್ಷಣೆ)  ವೃತ್ತಿಯ ಮೂಲಕ ಸಮಾಜದ ಒಳಿತಿಗಾಗಿ ಸಲ್ಲಿಸಿದ್ದಾರೆ.  ದೇವರ ಎತ್ತುಗಳ ರಕ್ಷಣೆ, ಜಾನುವಾರುಗಳ ಪೋಷಣೆ, ಸ್ಥಳೀಯ ಬುಡಕಟ್ಟು ಸಮುದಾಯದ … Read more

ಕಲಬುರಗಿಯಲ್ಲಿ ಕಾರು-ಬೈಕ್-ಲಾರಿ ಸರಣಿ ಅಪಘಾತ: ನಾಲ್ವರ ದುರ್ಮರಣ

ಕಾರು, ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಕಲಬುರಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದೆ. ಬೈಕ್‌ ಮತ್ತು ಕಾರಿನಲ್ಲಿದ್ದ ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ ಬಿ (45) ಮತ್ತು ಮೌಲಾಬಿ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಪರಮಾನಂದ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ಕಾರಲ್ಲಿ‌ ತೇರಳುತ್ತಿದ್ದರು. ಸ್ಥಳಕ್ಕೆ‌ ಕಲಬುರಗಿ ಪೊಲೀಸ್ … Read more

ತಲಕಾವೇರಿಯಲ್ಲಿ ಉದ್ಭವಿಸಿದ ಕಾವೇರಿ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

ಕೊಡಗು ಜಿಲ್ಲೆಯ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವಿಸಿದ್ದು ಭಕ್ತಾದಿಗಳಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು. ತಲಕಾವೇರಿ ಪುಣ್ಯಕ್ಷೇತ್ರದ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷೆಯಂತೆ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭ ಆಯಿತು. ಮೂರು ಬಾರಿ ಉಕ್ಕಿ ಬಂದ ಕಾವೇರಿ ಭಕ್ತರಿಗೆ ಕಾಣಿಸಿಕೊಂಡಿದ್ದು, ನೆರೆದಿರುವ ಭಕ್ತರಿಗೆ ಬ್ರಹ್ಮಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಮಂಡ್ಯ, ಮೈಸೂರು, ಹಾಸನ ಅಲ್ಲದೇ ರಾಜ್ಯದ ನಾನಾ ಕಡೆಗಳಿಂದ ಹಾಗೂ ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳದಿಂದ ಸಹಸ್ರ ಸಂಖ್ಯೆಯಲ್ಲಿ … Read more

ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿ ಅರೆಸ್ಟ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಹರಿಯಾಣದಲ್ಲಿ ಬಂಧಿಸಿದ್ದಾರೆ. ನವೀ ಮುಂಬೈನ ಪನ್ವೆಲ್ ನಲ್ಲಿರುವ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ಗುಂಡಿನ ದಾಳಿ ನಡೆಸಿದ್ದ ಶೂಟರ್ ಸುಕ್ಕಾ ಎಂಬಾತನನ್ನು ಹರಿಯಾಣದ ಪಾಣಿಪತ್ ನಲ್ಲಿ ಬಂಧಿಸಲಾಗಿದೆ. ಪಾಣಿಪತ್ ನಲ್ಲಿ ಬಂಧಿಸಲಾಗಿರುವ ಸುಕ್ಕಾ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ನಡೆದ ದಾಳಿಯ ಪ್ರಮುಖ ಆರೋಪಿಯಾಗಿದ್ದು, ಈತನ ವಿರುದ್ಧ ಪನ್ವೆಲ್ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದು, … Read more