advertise here

Search

ವಿಜಯನಗರ: ಕಲುಷಿತ ನೀರು ಸೇವಿಸಿ 5 ಮಂದಿ ಸಾವು, 50 ಮಂದಿ ಅಸ್ವಸ್ಥ


ಕಲುಷಿತ ನೀರು ಸೇವಿಸಿ 8 ತಿಂಗಳ ಹಸುಗೂಸು ಸೇರಿ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ.

ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ನಿವಾಸಿಗಳಾದ ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು 8 ತಿಂಗಳ ಗಂಡು ಮಗು ಮೃತಪಟ್ಟಿದ್ದಾರೆ.

ಕಲುಷಿತ ನೀರು ಸೇವನೆಯಿಂದ ಗ್ರಾಮದ ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ. ಕಳೆದ ವಾರ ಮೂವರು ಮೃತಪಟ್ಟಿದ್ದಾರೆ. ಆದರೂ ಕೂಡ ಸ್ಥಳಕ್ಕೆ ಭೇಟಿ ನೀಡದೆ ಆರೋಗ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ALSO READ :  ದರ್ಶನ್‌ಗೆ ದೀಪಾವಳಿ.. 131 ದಿನಗಳ ಸೆರೆವಾಸದ ಬಳಿಕ ರಿಲೀಸ್ ಭಾಗ್ಯ -ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅಸ್ತು

ವಾಂತಿ ಭೇದಿಯಿಂದ ಜನರು ನರಳುತ್ತಿದ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ನಿವಾಸಿಗಳು ಸಾಯುತ್ತಿದ್ದಾರೆ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ.

ಗರ್ಭಿಣಿ ನಿಂಗಮ್ಮ ಎನ್ನುವವರಿಗೆ ಕೂಡ ವಾಂತಿಭೇದಿ ಕಾಣಿಸಿಕೊಂಡಿದ್ದು, ಹೆರಿಗೆ ವೇಳೆ ಗಂಡು ಮಗು ಕೂಡ ಸಾವನ್ನಪ್ಪಿದೆ. ಇದಕ್ಕೆ ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯಲ್ಲಿ ಕಲುಷಿತ ನೀರು ಬಂದು ವಾಂತಿ ಭೇದಿಯಾಗುತ್ತಿದೆ ಎಂದು ಗ್ರಾಮಸ್ಥರ ಆರೋಪ ಮಾಡಿದ್ದಾರೆ.


Political News

ಎಲೆನ್ (allen) ಅಕ್ರಮದ ಸಕ್ರಮಕ್ಕೆ ಮುಂದಾಯ್ತಾ ಶಿಕ್ಷಣ ಇಲಾಖೆ..? ಕ್ರಮಕ್ಕೆ ಶಿಫಾರಸ್ಸು ಮಾಡಿದ್ದ  ಡಿಡಿಪಿಯು(ddpu) ಮನೋಹರ್  ಕೊಳ್ಳಾ “ಯೂ ಟರ್ನ್” ಹಿಂದಿದ್ಯಾ “ಮೆಗಾ ಪ್ಲ್ಯಾನ್”-“ಬಿಗ್ ಡೀಲ್”..!?

EXCLUSIVE….. ಯಾವ ಕ್ಷಣದಲ್ಲೂ ಎಲೆನ್‌ (ALLEN) ಟ್ಯೂಷನ್‌ ಸೆಂಟರ್ಸ್‌ ಗಳಿಗೆ ಬೀಗ..?!

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

Scroll to Top