advertise here

Search

ವಾರದೊಳಗೆ ಅನ್ನಭಾಗ್ಯದ ಹಣ ಜಮೆ: ಆಹಾರ ಸಚಿವ ಕೆಎಚ್ ಮುನಿಯಪ್ಪ


ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿ ನೀಡುತ್ತಿರುವ ಅನ್ನಭಾಗ್ಯದ ಅಕ್ಕಿ ಹಣ ವಾರದೊಳಗೆ ಪಾವತಿಯಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಕೋಲಾರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವರ್‌ ಸಮಸ್ಯೆಯಿಂದಾಗಿ 2 ತಿಂಗಳಿಂದ ಅಕ್ಕಿ ಹಣ ಬಿಡುಗಡೆ ಮಾಡಲು ಆಗಿರಲಿಲ್ಲ. ಇದೀಗ ಸಮಸ್ಯೆ ಬಗೆಹರಿದಿದ್ದು, ವಾರದೊಳಗೆ ಹಣ ಪಾವತಿಯಾಗಲಿದೆ ಎಂದರು.

ಸಾಮಾನ್ಯವಾಗಿ ಪ್ರತಿ ತಿಂಗಳು 10ನೇ ತಾರೀಖಿನಿಂದ ಬಿಡುಗಡೆಯಾಗುತ್ತಿದ್ದು, ಸರ್ವರ್‌ ಸಮಸ್ಯೆಯಿಂದಾಗಿ ಅಕ್ಕಿ ಹಣ ಬಂದಿಲ್ಲ. ಸರಕಾರದಲ್ಲಿ ಹಣದ ಕೊರತೆಯಿಲ್ಲ. ಈ ಬಾರಿ ತಡವಾಗಿದ್ದು, ಮುಂದಿನ ವಾರದಲ್ಲಿ ಹಣ ಬರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ALSO READ :  ನಟಿ ಅಮೂಲ್ಯ ಸೋದರ, ನಿರ್ದೇಶಕ ದೀಪಕ್ ಅರಸ್ 42 ವಯಸ್ಸಿಗೆ ನಿಧನ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಹೊರತುಪಡಿಸಿ ಎಲ್ಲಿಯೂ ಶೇ.50ರಷ್ಟು ಬಿಪಿಎಲ್‌ ಕಾರ್ಡ್‌ಗಳು ಇಲ್ಲ. ರಾಜ್ಯದಲ್ಲಿರುವ ಪಡಿತರ ಚೀಟಿಗಳ ಪೈಕಿ ಶೇ.80ರಷ್ಟು ಬಿಪಿಎಲ್‌ ಇವೆ. ಹೀಗಾಗಿ ಪರಿಷ್ಕರಣೆ ಮಾಡಿದ ಬಳಿಕ ಬಿಪಿಎಲ್‌ಗೆ ಅರ್ಹತೆ ಇಲ್ಲದ ಕಾರ್ಡ್‌ಗಳನ್ನು ಎಪಿಎಲ್‌ ಎಂದು ಪರಿಗಣಿಸಲಾಗುತ್ತದೆ. ಪ್ರತಿ ಕೆಜಿ ಅಕ್ಕಿಗೆ 15 ರೂ.ಗಳನ್ನು ಪಡೆದು, ಸಬ್ಸಿಡಿ ನೀಡಲಾಗುತ್ತದೆ. ಉಳಿದ ಹಣವನ್ನು ಸರಕಾರವೇ ಭರಿಸಲಿದೆ ಎಂದು ತಿಳಿಸಿದರು.


Political News

ನನ್ನ ದೇಹದಲ್ಲಿ ಪ್ರಾಣವಿರುವವರೆಗೂ ಜನರ ಸೇವೆ ಮಾಡುತ್ತೇನೆ : ಸಿದ್ದರಾಮಯ್ಯ

ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ‘ಗ್ರೀನ್ ಸಿಗ್ನಲ್’ ಕೊಟ್ಟ ಇರಾನ್!

ಮಾರ್ಚ್ ಅಂತ್ಯಕ್ಕೆ ಕರ್ನಾಟಕದ ಗದ್ದುಗೆ ಬದಲಾವಣೆ ಪಕ್ಕಾ?! ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಸಜ್ಜಾದ ಹೈಕಮಾಂಡ್!

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಪಯಣಕ್ಕೆ ಸಿಎಂ ಅಭಿನಂದನೆ

ಸಂವಿಧಾನ ರಕ್ಷಣೆಗೆ ಸ್ಪೀಕರ್ ಪೀಠಕ್ಕೆ ಸವಾಲು: ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ

ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಹೊಸ ನಾಯಕನ ಆಯ್ಕೆಯ ಬೆನ್ನಲ್ಲೇ ತೀವ್ರಗೊಂಡ ಯುದ್ಧ: ಆಪರೇಶನ್ ಎಪಿಕ್ ಫ್ಯೂರಿಗೆ 10ನೇ ದಿನ

Scroll to Top