advertise here

Search

ದಾವೂದ್ ದಾರಿಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ!


ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣದ ಹೊಣೆ ಹೊತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾದಿಯಲ್ಲಿ ಸಾಗುತ್ತಿದ್ದು, 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) 16 ಗ್ಯಾಂಗ್ ಸ್ಟರ್ ಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿಕೊಂಡಿದೆ.

ಪಂಜಾಬ್ ನಲ್ಲಿ ಖ್ಯಾತ ಗಾಯಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಲಾರೆನ್ಸ್ ಬಿಶ್ನೋಯಿ ದಾವೂದ್ ಇಬ್ರಾಹಿಂನ ಡಿ ಕಂಪನಿ ಮಾದರಿಯಲ್ಲಿ ದೇಶಾದ್ಯಂತ ತನ್ನ ಕಂಬಂಧ ಹಸ್ತ ವಿಸ್ತರಿಸುತ್ತಿದ್ದಾನೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.

ಸಣ್ಣ ಅಪರಾಧಗಳನ್ನು ಮಾಡುವ ಯುವಕರನ್ನು ಬಳಸಿಕೊಂಡು 90ರ ದಶಕದಲ್ಲಿ ದಾವೂದ್ ಇಬ್ರಾಹಿಂ ಹೇಗೆ ಭೂಗತ ಲೋಕದ ಮೇಲೆ ಹಿಡಿತ ಸಾಧಿಸಿದ ಅದೇ ಮಾದರಿಯಲ್ಲಿ ಲಾರೆನ್ಸ್ ಬಿಶ್ನೋಯಿ ತನ್ನ ಅಪರಾಧ ಕೃತ್ಯಗಳನ್ನು ಸಂಘಟಿತವಾಗಿ ಬೆಳೆಸುತ್ತಿದ್ದಾನೆ.

ALSO READ :  ಕೋರ್ಟ್ ಕಲಾಪ ವೇಳೆ ನ್ಯಾಯಮೂರ್ತಿ ಪ್ರಸನ್ನ ವರಾಳೆ ಗದ್ಗದಿತ-ಭಾವುಕ

ಬಿಶ್ನೋಯಿ 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿದ್ದು, ಇದರಲ್ಲಿ 300 ಮಂದಿ ಪಂಜಾಬ್ ನಲ್ಲಿಯೇ ಇದ್ದಾರೆ. ಹರಿಯಾಣ, ರಾಜಸ್ಥಾನ, ದೆಹಲಿಯಲ್ಲಿ ಅತೀ ಹೆಚ್ಚು ಸಂಪರ್ಕಗಳನ್ನು ಹೊಂದಿದ್ದು, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಉತ್ತರಪ್ರದೇಶಗಳಲ್ಲೂ ಪ್ರಭಾವ ಹೊಂದಿದ್ದಾನೆ ಎಂದು ಎಫ್ ಐಆರ್ ನಲ್ಲಿ ವಿವರಿಸಲಾಗಿದೆ.

2021ರಲ್ಲಿ ಬೆದರಿಕೆಗಳ ಮೂಲಕ ಕೋಟ್ಯಂತರ ರೂಪಾಯಿ ಗಳಿಸಿರುವ ಬಿಶ್ನೋಯಿ ಗ್ಯಾಂಗ್ ಹವಾಲಾ ಮೂಲಕ ವಿದೇಶಕ್ಕೆ ರವಾನೆ ಮಾಡುತ್ತಿದೆ. ಇದರಿಂದ ಕೆನಡಾದಲ್ಲಿ ಕೂಡ ಈತ `ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದಾನೆ.

ಬಡತನದಲ್ಲಿರುವ ಸಣ್ಣಪುಟ್ಟ ಅಪರಾಧಗಳಲ್ಲಿ ಸಿಕ್ಕಿಬಿದ್ದ ಯುವಕರೇ ಈತನ ಪರ ದಾಳಿ ಅಥವಾ ಕೊಲೆ ಮಾಡುವ ಆಯುಧಗಳಾಗಿದ್ದು, ಇವರು ಗುಜುರಿ, ಹೋಟೆಲ್ ಸೇರಿದಂತೆ ಸಣ್ಣಪುಟ್ಟ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದು, ಆದೇಶ ಬರುತ್ತಿದ್ದಂತೆ ಸಕ್ರಿಯವಾಗುತ್ತಾರೆ.


Political News

ವಿಧಾನಸೌಧಕ್ಕೆ ನಿರ್ಬಂಧ ಹೇರಿದ್ರೂ ಮಾದ್ಯಮಗಳೇಕೆ ಮೌನ? ನಿದ್ರೆಯಲ್ಲಿದೆಯಾ ಸಂಘ-ಕ್ಲಬ್..

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ: 5 ಲಕ್ಷ ಲಂಚ ಪಡೆಯುವಾಗ ಅರೆಸ್ಟ್!

ಟ್ರಂಪ್‌ ಆರ್ಥಿಕ ಸಂಘರ್ಷ: ಸುಪ್ರೀಂ ಕೋರ್ಟ್ ತಡೆ ನಡುವೆಯೂ ಶೇ.10ರಷ್ಟು ಆಮದು ಸುಂಕ ಜಾರಿ!

“ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ” ಟ್ರಂಪ್ ಹೇಳಿಕೆ

ಎಐ ಶೃಂಗಸಭೆಯಲ್ಲಿ ಹೈಡ್ರಾಮಾ: ಅರೆಬೆತ್ತಲೆ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು!

ವಿಕ್ಟೋರಿಯಾ(ನೆಫ್ರೋ) ಆಸ್ಪತ್ರೆಯ “ಯಮರೂಪಿ” ವೈದ್ಯರ ನಿರ್ಲಕ್ಷ್ಯಕ್ಕೆ ಜೀವಂತ “ಶವ” ವಾದ ರಂಜಿತ್!

“ಧರ್ಮಪತ್ನಿ”ಯ ಕಂಪೆನಿ ವಿರುದ್ಧ “ಭ್ರಷ್ಟಾಚಾರ”ದ ಆರೋಪ..ಸುವರ್ಣನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌  ಗೆ  “ಮುಜುಗರ”..!?

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

Scroll to Top