ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ


ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಮಳೆ ಆಗಿದ್ದು, ದಿನದ ಬಹುತೇಕ ಸಮಯ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ALSO READ :  ಪತ್ರಿಕಾ "ಸಂಪಾದಕ"ನಿಗೆ ಪ್ರಭಾವಿ "ವೈದ್ಯ"ನ ಬೆಂಬಲಿಗ ರಿಂದ "ಜೀವಬೆದರಿಕೆ..! "-ಮನೆಗೆ ತೆರಳಿ "ಆಮಿಷ-ಅವಾಜ್"!  

ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಲು, ಕಮ್ಮರಡಿ, ಹುಣಸೂರಿನಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗಿದೆ.

ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್​ಡಿಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಮಳೆಯಾಗಿದೆ.


Leave a Comment