advertise here

Search

ಭವಾನಿ ರೇವಣ್ಣಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ರದ್ದುಪಡಿಸಲು ಸುಪ್ರೀಂಕೋರ್ಟ್ ನಕಾರ


ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಚಿವೆ ಎಚ್.ಡಿ. ರೇವಣ್ಣ ಪತ್ನಿ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಅವರಿಗೆ ಮಂಜೂರು ಮಾಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್‌ ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ನೇತೃತ್ವದ ವಿಭಾಗೀಯ ಪೀಠ, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ.

ಪ್ರಕರಣದಲ್ಲಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ALSO READ :  "ನ್ಯೂಸ್‌ ಫಸ್ಟ್‌" 5 ನೇ ಹುಟ್ಟುಹಬ್ಬದಂದೇ   ಮತ್ತೊಂದು "ಚಾನೆಲ್‌" ಘೋಷಣೆ..

ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾದ ಮೈಸೂರು ಜಿಲ್ಲೆಯ ಕೆಆರ್ ನಗರದ ಸಂತ್ರಸ್ತೆಯನ್ನು ಅಪಹರಿಸಿ ಗೃಹ ಬಂಧನದಲ್ಲಿ ಇರಿಸಲಾಗಿತ್ತು ಮತ್ತು ಇದಕ್ಕೆ ಭವಾನಿ ರೇವಣ್ಣ ನಿರ್ದೇಶನ ನೀಡಿದ್ದರು. ಪ್ರಕರಣದ ಹಿಂದೆ ಪ್ರಮುಖ ಪಾತ್ರ ವಹಿಸಿರುವ ಭವಾನಿ ರೇವಣ್ಣಗೆ ಜಾಮೀನು ನೀಡಬಾರದು ಎಂದು ಎಸ್​ಐಟಿ ಪರ ವಕೀಲರು ವಾದ ಮಂಡಿಸಿದ್ದರು.

ಆರೋಪಿ ಮಹಿಳೆ ಪ್ರಕರಣದಲ್ಲಿ ನೇರವಾಗಿ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಕೂಡ ಆಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ಹೈಕೋರ್ಟ್ ನೀಡಿರುವ ನಿರಿಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಸುಪ್ರೀಂ ಕೋರ್ಟ್​ನಲ್ಲಿ ಎಸ್​ಐಟಿ ಅಧಿಕಾರಿಗಳ ಪರ ವಕೀಲರು ವಾದಿಸಿದ್ದರು.


Political News

ನೆಹರೂ ಬದುಕಿದ್ದರೆ ಕಾನ್ಶಿರಾಮ್ ಅವರನ್ನೇ ಸಿಎಂ ಮಾಡುತ್ತಿದ್ದರು: ರಾಹುಲ್ ಗಾಂಧಿ 

ನನ್ನ ದೇಹದಲ್ಲಿ ಪ್ರಾಣವಿರುವವರೆಗೂ ಜನರ ಸೇವೆ ಮಾಡುತ್ತೇನೆ : ಸಿದ್ದರಾಮಯ್ಯ

ಅಡುಗೆ ಅನಿಲ ಬಿಕ್ಕಟ್ಟು: ಬಿಜೆಪಿ ಸಂಸದರ ಮೌನ ಖಂಡಿಸಿ, ಸಂಸತ್ತಿನಲ್ಲಿ ಧ್ವನಿ ಎತ್ತಲು ಡಿಕೆಶಿ ಆಗ್ರಹ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ‘ಗ್ರೀನ್ ಸಿಗ್ನಲ್’ ಕೊಟ್ಟ ಇರಾನ್!

ಮಾರ್ಚ್ ಅಂತ್ಯಕ್ಕೆ ಕರ್ನಾಟಕದ ಗದ್ದುಗೆ ಬದಲಾವಣೆ ಪಕ್ಕಾ?! ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಸಜ್ಜಾದ ಹೈಕಮಾಂಡ್!

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಪಯಣಕ್ಕೆ ಸಿಎಂ ಅಭಿನಂದನೆ

ಸಂವಿಧಾನ ರಕ್ಷಣೆಗೆ ಸ್ಪೀಕರ್ ಪೀಠಕ್ಕೆ ಸವಾಲು: ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ

ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Scroll to Top