advertise here

Search

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್


ಬೆಂಗಳೂರು: ನ್ಯೂಸ್ ಚಾನೆಲ್ ಗಳ ಪರದೆ ಮೇಲೆ ನಿರೂಪಕರು,ರಿಪೋರ್ಟರ್ಸ್ ಗಳು ಚೆನ್ನಾಗಿ ಕಾಣುವುದರಲ್ಲಿ ತೆರೆ ಹಿಂದೆ ಕೆಲಸ ಮಾಡುವ ಮೇಕಪ್ ಮ್ಯಾನ್ ಗಳ ಪಾತ್ರ ನಿರ್ಣಾಯಕವಾಗಿರುತ್ತೆ.ತೆರೆ ಮೇಲೆ ಬಂದವರು ಸುದ್ದಿಯಾಗುತ್ತಾರೆ.ಆದರೆ ತೆರೆ ಹಿಂದೆ ಕೆಲಸ ಮಾಡಿದವರು ಪ್ರಚಲಿತಕ್ಕೆ ಬರುವುದೇ ಇಲ್ಲ.ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳಿಂದಲೂ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಎನ್ನುವ ಮಿತಭಾಷಿ,ನಿರುಪದ್ರವಿ,ಅಜಾತಶತೃ ಯುವಕ ಸಣ್ಣ ವಯಸ್ಸಿನಲ್ಲೇ ಶಾಶ್ವತವಾಗಿ ನೇಪಥ್ಯಕ್ಕೆ ಸರಿದಿದ್ದಾನೆ.

ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಹಿರಿಯ ಮೇಕಪ್ ಮ್ಯಾನ್ ಆಗಿದ್ದ ಚೇತನ್ ಗೆ 27 ವರ್ಷ ವಯಸ್ಸಾಗಿತ್ತು. ಬಿಟಿವಿ ನ್ಯೂಸ್ ಚಾನೆಲ್ ಶುರುವಾದಾಗಿನಿಂದಲೂ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಮಿತಭಾಷಿ.ಯಾರೊಂದಿಗೂ ಮಾತನಾಡದೆ ತನ್ನ ಪಾಡಿಗಿದ್ದುಕೊಂಡು ಕೆಲಸ ಮಾಡುತ್ತಿದ್ದ ನಿರುಪದ್ರವಿ. ತಾನಾಯಿತು ತನ್ನ ಕೆಲಸವಾಯಿತೆನ್ನುವ ನಿರ್ಲಿಪ್ತ ಭಾವನೆಯಲ್ಲಿದ್ದ ಚೇತನ್ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ.ಬೆರೆಯುತ್ತಿರಲಿಲ್ಲ ಎಂದು ಆತನ ಒಡನಾಡಿಗಳು ತಿಳಿಸಿದ್ದಾರೆ.

ALSO READ :  1988ರ ನಂತರ ಮೊದಲ ಬಾರಿ ಭಾರತದಲ್ಲಿ ಗೆಲುವು ದಾಖಲಿಸಿದ ನ್ಯೂಜಿಲೆಂಡ್! ಭಾರತಕ್ಕೆ 8 ವಿಕೆಟ್ ಸೋಲು!

ಇತ್ತೀಚೆಗೆ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಚೇತನ್ ಕಳೆದ ನಾಲ್ಕೈದು ದಿನಗಳಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಆಸ್ಪತ್ರೆಗೆ ದಾಖಲಾದ ದಿನದಿಂದಲೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ವೈದ್ಯರ ಆರೈಕೆ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಚೇತನ್ ದಿಡೀರ್ ಸಾವಿಗೆ ಬಿಟಿವಿ ಬಳಗ ದಿಗ್ಬ್ರಾಂತಿ ವ್ಯಕ್ತಪಡಿಸಿದೆ.ಸಣ್ಣ ವಯಸ್ಸಿನಲ್ಲೇ ಅಸುನೀಗಿದ ಚೇತನ್ ಕುಟುಂಬಕ್ಕೆ ಆತನ ಅಗಲಿಕೆ ನೋವನ್ನು ಭರಿಸುವಂಥ ಶಕ್ತಿಯನ್ನು ನೀಡಲಿ.ಆತನ ಸಾವಿಗೆ ಕನ್ನಡ ಫ್ಲ್ಯಾಶ್ ನ್ಯೂಸ್ ಸಂತಾಪ ಸೂಚಿಸುತ್ತದೆ.


Political News

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಪಯಣಕ್ಕೆ ಸಿಎಂ ಅಭಿನಂದನೆ

ಸಂವಿಧಾನ ರಕ್ಷಣೆಗೆ ಸ್ಪೀಕರ್ ಪೀಠಕ್ಕೆ ಸವಾಲು: ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ

ವಾಣಿಜ್ಯ ಎಲ್‌ಪಿಜಿ ಕೊರತೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಹೊಸ ನಾಯಕನ ಆಯ್ಕೆಯ ಬೆನ್ನಲ್ಲೇ ತೀವ್ರಗೊಂಡ ಯುದ್ಧ: ಆಪರೇಶನ್ ಎಪಿಕ್ ಫ್ಯೂರಿಗೆ 10ನೇ ದಿನ

‘ಹೈಕಮಾಂಡ್ ನಿರ್ಧಾರವೇ ಅಂತಿಮ’: ನಾಯಕತ್ವದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಫುಲ್ ಸ್ಟಾಪ್!

‘ಖಾಲಿ ಚೊಂಬು’ ಕೊಟ್ಟ ಕಾಂಗ್ರೆಸ್: ಬಜೆಟ್ ದಿನದಂದು ಬಿಜೆಪಿ ನಾಯಕರ ಪ್ರತಿಭಟನೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ!

ಅಬಕಾರಿ ನೀತಿಯಲ್ಲಿ ಬದಲಾವಣೆ: ಮದ್ಯಪ್ರಿಯರಿಗೆ ಹೊಸ ನಿಯಮ, ಸರ್ಕಾರದ ಬೊಕ್ಕಸಕ್ಕೆ ₹45,000 ಕೋಟಿ ಗುರಿ!

Scroll to Top