advertise here

Search

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್


ಬೆಂಗಳೂರು: ನ್ಯೂಸ್ ಚಾನೆಲ್ ಗಳ ಪರದೆ ಮೇಲೆ ನಿರೂಪಕರು,ರಿಪೋರ್ಟರ್ಸ್ ಗಳು ಚೆನ್ನಾಗಿ ಕಾಣುವುದರಲ್ಲಿ ತೆರೆ ಹಿಂದೆ ಕೆಲಸ ಮಾಡುವ ಮೇಕಪ್ ಮ್ಯಾನ್ ಗಳ ಪಾತ್ರ ನಿರ್ಣಾಯಕವಾಗಿರುತ್ತೆ.ತೆರೆ ಮೇಲೆ ಬಂದವರು ಸುದ್ದಿಯಾಗುತ್ತಾರೆ.ಆದರೆ ತೆರೆ ಹಿಂದೆ ಕೆಲಸ ಮಾಡಿದವರು ಪ್ರಚಲಿತಕ್ಕೆ ಬರುವುದೇ ಇಲ್ಲ.ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳಿಂದಲೂ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಎನ್ನುವ ಮಿತಭಾಷಿ,ನಿರುಪದ್ರವಿ,ಅಜಾತಶತೃ ಯುವಕ ಸಣ್ಣ ವಯಸ್ಸಿನಲ್ಲೇ ಶಾಶ್ವತವಾಗಿ ನೇಪಥ್ಯಕ್ಕೆ ಸರಿದಿದ್ದಾನೆ.

ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಹಿರಿಯ ಮೇಕಪ್ ಮ್ಯಾನ್ ಆಗಿದ್ದ ಚೇತನ್ ಗೆ 27 ವರ್ಷ ವಯಸ್ಸಾಗಿತ್ತು. ಬಿಟಿವಿ ನ್ಯೂಸ್ ಚಾನೆಲ್ ಶುರುವಾದಾಗಿನಿಂದಲೂ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಮಿತಭಾಷಿ.ಯಾರೊಂದಿಗೂ ಮಾತನಾಡದೆ ತನ್ನ ಪಾಡಿಗಿದ್ದುಕೊಂಡು ಕೆಲಸ ಮಾಡುತ್ತಿದ್ದ ನಿರುಪದ್ರವಿ. ತಾನಾಯಿತು ತನ್ನ ಕೆಲಸವಾಯಿತೆನ್ನುವ ನಿರ್ಲಿಪ್ತ ಭಾವನೆಯಲ್ಲಿದ್ದ ಚೇತನ್ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ.ಬೆರೆಯುತ್ತಿರಲಿಲ್ಲ ಎಂದು ಆತನ ಒಡನಾಡಿಗಳು ತಿಳಿಸಿದ್ದಾರೆ.

ALSO READ :  ವನಿತೆಯರ ಟಿ-20 ವಿಶ್ವಕಪ್: 8 ಕ್ಯಾಚ್ ಬಿಟ್ಟು ಸೋತ ಪಾಕಿಸ್ತಾನ, ಹೊರಬಿದ್ದ ಭಾರತ!

ಇತ್ತೀಚೆಗೆ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಚೇತನ್ ಕಳೆದ ನಾಲ್ಕೈದು ದಿನಗಳಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಆಸ್ಪತ್ರೆಗೆ ದಾಖಲಾದ ದಿನದಿಂದಲೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ವೈದ್ಯರ ಆರೈಕೆ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಚೇತನ್ ದಿಡೀರ್ ಸಾವಿಗೆ ಬಿಟಿವಿ ಬಳಗ ದಿಗ್ಬ್ರಾಂತಿ ವ್ಯಕ್ತಪಡಿಸಿದೆ.ಸಣ್ಣ ವಯಸ್ಸಿನಲ್ಲೇ ಅಸುನೀಗಿದ ಚೇತನ್ ಕುಟುಂಬಕ್ಕೆ ಆತನ ಅಗಲಿಕೆ ನೋವನ್ನು ಭರಿಸುವಂಥ ಶಕ್ತಿಯನ್ನು ನೀಡಲಿ.ಆತನ ಸಾವಿಗೆ ಕನ್ನಡ ಫ್ಲ್ಯಾಶ್ ನ್ಯೂಸ್ ಸಂತಾಪ ಸೂಚಿಸುತ್ತದೆ.


Political News

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

Sahyadri science College alumni meet: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಮಹಾಸಮಾಗಮಕ್ಕೆ ಮುಹೂರ್ತ ಫಿಕ್ಸ್

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

Scroll to Top