ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಬೆಂಗಳೂರಿನಲ್ಲಿದ್ದ ಹಳೆಯ ಮುಖಗಳ ಜಾಗಕ್ಕೆ ಬಹುತೇಕ ಬೆಂಗಳೂರಿನ ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ ಐಪಿಎಸ್ ಗಳನ್ನು ನಿಯೋಜನೆ ಮಾಡಿದೆ. ಈ ವರ್ಗಾವಣೆಗೆ ಮುಖ್ಯ ಕಾರಣವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಎನ್ನಲಾಗ್ತಿದೆ.



ಬೆಂಗಳೂರಿನ ವಿವಿಧೆಡೆ ಆಯಕಟ್ಟಿನ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡವರ ವಿವರಗಳು ಇಂತಿದೆ.

ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಲ್ಲಿ ಡಿಐಜಿ ಆಗಿದ್ದ ಎಂ.ಎನ್. ಅನುಚೇತ್, ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ಹೆಸರು ವರ್ಗಾವಣೆ ಪಟ್ಟಿಯಲ್ಲಿದೆ.
ಅನೂಪ್ ಶೆಟ್ಟಿ ಅವರನ್ನು ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, (ಸಂಚಾರ), ವೈಟ್ ಫೀಲ್ಡ್ ಡಿಸಿಪಿಯಾಗಿ ಪರಶುರಾಮ್ , ಸೈದಲು ಅಡಾವತ್ ಅವರನ್ನು ಸಿಐಡಿ ಎಸ್ಪಿಯಾಗಿ ನಿಯೋಜನೆ ಮಾಡಲಾಗಿದೆ.
ಕಾರ್ತಿಕ್ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ
ಅಕ್ಷಯ್ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ
ಅಜಯ್ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ
ಪರಶುರಾಮ್ – ಡಿಸಿಪಿ, ವೈಟ್ ಫೀಲ್ಡ್ ವಿಭಾಗ
ಅನೂಪ್ ಶೆಟ್ಟಿ – ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ
ಶಿವಪ್ರಕಾಶ್ ದೇವರಾಜು – ಲೋಕಾಯುಕ್ತ ಎಸ್ಪಿ, ಬೆಂಗಳೂರು
ಜಯಪ್ರಕಾಶ್ – ಬೆಂಗಳೂರು ಉತ್ತರ ಸಂಚಾರ ವಿಭಾಗ, ಡಿಸಿಪಿ
ಎಂ.ನಾರಾಯಣ್ – ಎಲೆಕ್ಟ್ರಾನಿಕ್ ಸಿಟಿ ವಿಭಾಗ, ಡಿಸಿಪಿ
ಅನಿತಾ.ಬಿ ಹದ್ದಣ್ಣನವರ್ – ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ
ಸೈದಲು ಅಡಾವತ್ – ಸಿಐಡಿ, ಎಸ್ಪಿ
ಬಾಬಾ ಸಾಬ್ ನ್ಯಾಮಗೌಡ – ಬೆಂಗಳೂರು ಉತ್ತರ ವಿಭಾಗ, ಡಿಸಿಪಿ
ನಾಗೇಶ್ – ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ
ಶ್ರೀಹರಿ ಬಾಬು – ಬೆಂಗಳೂರು ಸಿಸಿಬಿ ಡಿಸಿಪಿ
ಸೌಮ್ಯಲತಾ – ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ
ಎಂ.ಎನ್.ಅನುಚೇತ್ – ಡಿಐಜಿ ನೇಮಕಾತಿ ವಿಭಾಗ
ವರ್ತಿಕಾ ಕಟಿಯಾರ್ – ಬಳ್ಳಾರಿ ವಲಯ, ಡಿಐಜಿ
ಶಾಂತರಾಜು – ಎಸ್ಪಿ, ಗುಪ್ತಚರ ಇಲಾಖೆ
ಸಿರಿಗೌರಿ – ಎಸ್ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ
ಸುಮನ್.ಡಿ ಪೆನ್ನೆಕರ್ – ಡಿಸಿಪಿ, ಇಂಟಲಿಜೆನ್ಸ್
ಸಿಮಿ ಮರೀಯ ಜಾರ್ಜ್ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ
ವೈ.ಅಮರನಾಥ್ – ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಕೆಎಸ್ಆರ್ಪಿ
ಯಶೋಧ ವಂಟಗೋಡಿ – ಎಸ್ಪಿ, ಹಾವೇರಿ
ಗುಂಜನ್ ಅರ್ಯಾ – ಎಸ್ಪಿ, ಧಾರವಾಡ
ಎಂ.ಗೋಪಾಲ್ – ಜಂಟಿ ನಿರ್ದೇಶಕ, ಎಫ್ಎಸ್ಎಲ್ ಬೆಂಗಳೂರು
ಸಿದ್ಧಾರ್ಥ ಗೋಯಲ್ – ಎಸ್ಪಿ, ಬಾಗಲಕೋಟೆ
ರೋಹನ್ ಜಗದೀಶ್ – ಎಸ್ಪಿ, ಗದಗ
ಶಿವಾಂಶು ರಜಪೂತ – ಎಸ್ಪಿ, ಕೆಜಿಎಫ್
ಜಿತೇಂದ್ರ ಕುಮಾರ್ – ಡಿಸಿಪಿ ಕಾನೂನು ಸುವ್ಯವಸ್ಥೆ, ಮಂಗಳೂರು ನಗರ
ಎಂ.ಎನ್.ದೀಪನ್ – ಎಸ್ಪಿ, ಉತ್ತರ ಕನ್ನಡ
ಜಾಹ್ನವಿ ಎಸ್. – ಎಸ್ಪಿ, ವಿಜಯನಗರ
ಚಂದ್ರಗುಪ್ತ – ಐಜಿಪಿ, ಈಶಾನ್ಯ ಕಲಬುರಗಿ
ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ – ಡಿಐಜಿ, ಬೆಂಗಳೂರು ಪೊಲೀಸ್ ಹೆಡ್ಕ್ವಾರ್ಟರ್ಸ್
ಕಾರ್ತಿಕ್ ರೆಡ್ಡಿ – ಡಿಐಜಿ, ಜಂಟಿ ಆಯುಕ್ತರು, ಬೆಂಗಳೂರು ಸಂಚಾರ ಪೊಲೀಸ್