advertise here

Search

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ


ಬೆಂಗಳೂರು:ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶಿಸಿದೆ. ಸಾರಿಗೆ ಮುಷ್ಕರ ಸಂಬಂಧ  ಇಂದು ನಡೆದ ವಿಚಾರಣೆ ವೇಳೆ  ಕೋರ್ಟ್ ಈ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೆ ಎಸ್ ಮುದಗಲ್ ಮತ್ತು ಎಂಜಿಎಸ್ ಕಮಲ್ ರ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ. ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ವಾದ  ಮಂಡಿಸಿದ್ರೆ.  ಸರ್ಕಾರದ ಪರ ನಿಲೋಫರ್ ಅಕ್ಬರ್ ವಾದ ಮಂಡಿಸಿದರು.

ಕೊರೊನಾ‌ ಸಂಧರ್ಭದಲ್ಲಿ ಸರ್ಕಾರ ಹಲವು ಸಿಬ್ಬಂದಿಯನ್ನ ವಜಾಗೊಳಿಸಿದೆ..ಬಹುತೇಕರನ್ನ ಪುನಃ ಸೇವೆಗೆ ಮರು ನೇಮಕ ಮಾಡಿಲ್ಲ.. ಹೀಗಾಗಿ ಬಾಕಿ ವೇತನ‌ ನೀಡುವ ಪ್ರಶ್ನೆ ಬರಲ್ಲ..ಇದು ಅರ್ಜಿದಾರರ ಪ್ರಾಮಾಣಿಕತೆಗೆ ಸಂಬಂಧಿಸಿದ ವಿಚಾರ.. ಅರ್ಜಿದಾರರ ಕಳಕಳಿಯನ್ನ ನೀವು ನೋಡಬೇಕು.. ಸರ್ಕಾರ ಇನ್ನೊಬ್ಬರ ಹೆಗಲ ಮೇಲೆ ಇಟ್ಟು ಶೂಟ್ ಮಾಡಲಾಗದು.. ಜುಲೈ 15ರಂದು ಪ್ರತಿಭಟನಾಕಾರರು ನೊಟೀಸ್ ನೀಡಿದ್ದಾರೆ.. ಈ ಹೊತ್ತಿಗಾಗಲೇ ನೀವು ಕ್ರಮ ಕೈಗೊಳ್ಳಬೇಕಿತ್ತು..ಸರ್ಕಾರಕ್ಕೆ ವಿಭಾಗೀಯ ಪೀಠ ಪ್ರಶ್ನೆ.. ಕೈಗಾರಿಕಾ ನ್ಯಾಯ ಮಂಡಳಿಯಲ್ಲಿ ಸಂಧಾನ ಸಭೆ ನಡೆದಿತ್ತು.. ಹಣಕಾಸು ನೆರವಿನ ವಿಚಾರದ ಬಗ್ಗೆ ಸರ್ಕಾರದ ಸಲಹೆ ಕೇಳಬೇಕು ಎಂದು ತಿಳಿಸಲಾಗಿತ್ತು..ಮುಖ್ಯಮಂತ್ರಿಗಳು ಬೆಳಗ್ಗೆಯಿಂದ ನಿರಂತರವಾಗಿ ಸಭೆ ನಡೆಸ್ತಿದ್ದಾರೆ ಎಂದು  ಸಾರಿಗೆ ಪರ ವಕೀಲರು ವಾದ ಮಂಡಿಸಿದರು

ALSO READ :  ತಮಿಳುನಾಡು ಮತದಾರರ ಪಟ್ಟಿಯಲ್ಲಿ ಭಾರಿ ಕಡಿತ; 74 ಲಕ್ಷ ಮತದಾರರ ಹೆಸರು ನಾಪತ್ತೆ!

ವಜಾಗೊಳಿಸಿದ್ದ ಬಹುತೇಕ ಸಿಬ್ಬಂದಿಯನ್ನ ಮರು ನೇಮಕ ಮಾಡಲಾಗಿದೆ..ವೇತನ ಪರಿಷ್ಕರಣೆ ಕೇಳ್ತಿದ್ದಾರೆ, ಇದು ಸಾಧ್ಯವೇ ಇಲ್ಲಾ.. ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ನಡೆಯುತ್ತೆ.. 2020ರಲ್ಲಿ ವೇತನ ಪರಿಷ್ಕರಣೆ ಆಗಿತ್ತು.. ಕೋವಿಡ್ ಕಾರಣದಿಂದ ನಂತರ ವೇತನ ಪರಿಷ್ಕರಣೆ ಆಗಿಲ್ಲ.. ಮುಖ್ಯಮಂತ್ರಿಗಳ ಜೊತೆ ಸಭೆ ನಡೆಯುತ್ತಿದೆ.. ಸಂಘಟನೆಗಳು ಸಾರಿಗೆ ಸೇವೆ ಮುಷ್ಕರಕ್ಕೆ ಅವಕಾಶ ಮಾಡಿಕೊಡಬಾರದು.. ಅಗತ್ಯ ಸೇವೆಯನ್ನ ಸಾಮಾನ್ಯ ಜನ ಬಳಸುತ್ತಾರೆ.. ಅವರಿಗೆ ಹಾನಿಯಾಗಬಾರದು ಎಂದು ವಾದಿಸಿದರು.

ಈ ಹಿನ್ನಲೆಯಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ ಒಂದು ದಿನ ಮಾತ್ರ ಮುಷ್ಕರ ಮುಂದೂಡುವಂತೆ ಆದೇಶಿಸಿತು.ಆದರೆ ಎರಡು‌ ದಿನ ಮುಂದೂಡುವಂತೆ ಸಾರಿಗೆ ಇಲಾಖೆ ಪರ ವಕೀಲರು ಮನವಿ ಮಾಡಿದ್ರೂ, ಸಿಎಂ ಸಭೆ ಹಿನ್ನಲೆಯಲ್ಲಿ ಒಂದು ದಿನ ವಿಚಾರಣೆ ಮುಂದೂಡಲಾಗ್ತಿದೆ ಎಂದು ಅಭಿಪ್ರಾಯಿಸಿತು.


Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top