advertise here

Search

ವಿಕ್ಟೋರಿಯಾದಲ್ಲಿ ಸ್ಕ್ಯಾನಿಂಗ್‌ ಭಾಗ್ಯವಿಲ್ಲ! ಬಡ ರೋಗಿಗಳ ಪಾಲಿಗೆ ‘ನರಕ’ವಾದ ಮಹಾ ಆಸ್ಪತ್ರೆ

victoria hospital mri scanning

ಬೆಂಗಳೂರು: ರಾಜಧಾನಿಯ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ, ಸಾವಿರಾರು ಬಡವರ ಪಾಲಿನ ಆಶಾಕಿರಣವಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈಗ ರೋಗಿಗಳ ಆರ್ತನಾದ ಮುಗಿಲು ಮುಟ್ಟಿದೆ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯ ಎಂಆರ್‌ಐ (MRI) ಸ್ಕ್ಯಾನಿಂಗ್ ಯಂತ್ರ ಕೆಟ್ಟು ನಿಂತಿದ್ದು, ಚಿಕಿತ್ಸೆಗಾಗಿ ದೂರದೂರುಗಳಿಂದ ಬಂದ ರೋಗಿಗಳು ದಿಕ್ಕು ತೋಚದಂತಾಗಿದ್ದಾರೆ.

ಬಿಲ್ಡಿಂಗ್‌ನಿಂದ ಬಿಲ್ಡಿಂಗ್‌ಗೆ ಅಲೆದಾಟ: ರೋಗಿಗಳ ಪರದಾಟ

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಅಪಘಾತಕ್ಕೀಡಾದವರು ಮತ್ತು ಶಸ್ತ್ರಚಿಕಿತ್ಸೆಯ ನಿರೀಕ್ಷೆಯಲ್ಲಿರುವ ರೋಗಿಗಳಿಗೆ ಎಂಆರ್‌ಐ ವರದಿ ಅತ್ಯಗತ್ಯ. ಆದರೆ, ಯಂತ್ರ ಸ್ಥಗಿತಗೊಂಡಿರುವುದರಿಂದ ಸ್ಟ್ರೆಚರ್ ಮತ್ತು ವೀಲ್ ಚೇರ್ ಹಿಡಿದುಕೊಂಡು ರೋಗಿಗಳ ಸಂಬಂಧಿಕರು ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ಅಲೆಯುತ್ತಿದ್ದಾರೆ.

ಇದನ್ನೂ ಓದಿ | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸುಲಿಗೆ: ಅಕ್ರಮ ಪ್ರಶ್ನಿಸಿದ ಮಾಧ್ಯಮಗಳ ಮೇಲೆಯೇ ಡಾ. ಗಿರೀಶ್ ರೆಡ್ಡಿ ದರ್ಪ!

ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಅಥವಾ ಕಡಿಮೆ ದರದಲ್ಲಿ ಸಿಗಬೇಕಿದ್ದ ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿರುವುದು ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ವರದಾನವಾಗಿದೆ. ಅನಿವಾರ್ಯವಾಗಿ ರೋಗಿಗಳು ಹೊರಗಿನ ಲ್ಯಾಬ್‌ಗಳಿಗೆ ಹೋಗಿ ಸಾವಿರಾರು ರೂಪಾಯಿ ಕೊಟ್ಟು ಸ್ಕ್ಯಾನಿಂಗ್ ಮಾಡಿಸಿಕೊಳ್ಳುತ್ತಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇಂತಹ ತಾಂತ್ರಿಕ ದೋಷಗಳನ್ನು ಸರಿಪಡಿಸಲು ಆಸ್ಪತ್ರೆ ಆಡಳಿತ ಮಂಡಳಿ ಯಾಕೆ ವಿಳಂಬ ಮಾಡುತ್ತಿದೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ALSO READ :  "ಕಳಂಕಿತ" ಅಧಿಕಾರಿ ನಾಗರಾಜಮೂರ್ತಿ ಬೆನ್ನಿಗೆ ನಿಂತಿರುವುದೇಕೆ BMTC ಆಡಳಿತ..?!

ಆಡಳಿತ ಮಂಡಳಿಯ ನಿರ್ಲಕ್ಷ್ಯವೇ?

ನೂರಾರು ರೋಗಿಗಳು ಪ್ರತಿದಿನ ಬರುವ ಇಂತಹ ದೊಡ್ಡ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರದಂತಹ ಜೀವ ಉಳಿಸುವ ಸೌಲಭ್ಯಗಳು ಕೆಟ್ಟು ಹೋದಾಗ, ಬೇಗ ಅದನ್ನು ಸರಿಪಡಿಸಬೇಕಾದ್ದು ಸರ್ಕಾರದ ಕರ್ತವ್ಯವಾಗಿದೆ. ಆದರೆ ಎರಡು ದಿನ ಕಳೆದರೂ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದಿರುವುದು ಆರೋಗ್ಯ ಇಲಾಖೆಯ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ರೋಗಿಗಳು ಕ್ಯೂ ನಿಂತು ಸುಸ್ತಾಗುತ್ತಿದ್ದರೂ, ಅಧಿಕಾರಿಗಳು ಮಾತ್ರ “ತಾಂತ್ರಿಕ ದೋಷ ಸರಿಪಡಿಸುತ್ತಿದ್ದೇವೆ” ಎಂಬ ಹಳೆಯ ರಾಗವನ್ನೇ ಹಾಡುತ್ತಿದ್ದಾರೆ.


Political News

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?

Scroll to Top