advertise here

Search

ಅಫ್ಘಾನಿಸ್ತಾನದ ಜನವಸತಿ ಪ್ರದೇಶಗಳ ಮೇಲೆ ಪಾಕಿಸ್ತಾನ ವಾಯುಪಡೆ ದಾಳಿ 

pakistan air force airstrike

ಕಾಬೂಲ್: ಅಂತರಾಷ್ಟ್ರೀಯ ಗಡಿನಿಯಮಗಳನ್ನು ಗಾಳಿಗೆ ತೂರಿದ ಪಾಕಿಸ್ತಾನ, ಕಳೆದ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ವಾಯುನೆಲೆಗಳ ಮೂಲಕ ಭೀಕರ ದಾಳಿ ನಡೆಸಿದೆ. ಪಾಕಿಸ್ತಾನ ವಾಯುಪಡೆಯ ಜೆಎಫ್-17 (JF-17) ಮತ್ತು ಎಫ್-16 (F-16) ಯುದ್ಧ ವಿಮಾನಗಳು ನಡೆಸಿದ ಈ ಬಾಂಬ್ ದಾಳಿಯಲ್ಲಿ 400ಕ್ಕೂ ಹೆಚ್ಚು ಅಮಾಯಕ ನಾಗರಿಕರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ನಡುರಾತ್ರಿಯಲ್ಲಿ ಮುಗಿಲು ಮುಟ್ಟಿದ ಕಿರುಚಾಟ

ಸೋಮವಾರ ರಾತ್ರಿ ಸುಮಾರು 9:30ರ ಸುಮಾರಿಗೆ ಕಾಬೂಲ್ ನಗರದ ಮೇಲೆ ಏಕಾಏಕಿ ಎರಗಿದ ಪಾಕಿಸ್ತಾನಿ ಯುದ್ಧ ವಿಮಾನಗಳು ಜನವಸತಿ ಪ್ರದೇಶಗಳನ್ನೇ ಗುರಿಯಾಗಿಸಿಕೊಂಡಿವೆ. ಕಾಬೂಲ್ ವಿಮಾನ ನಿಲ್ದಾಣದ ಸಮೀಪವಿರುವ ಹಳೆಯ ನ್ಯಾಟೋ (NATO) ನೆಲೆಯಲ್ಲಿದ್ದ 2,000 ಹಾಸಿಗೆಗಳ ಬೃಹತ್ ಸರ್ಕಾರಿ ಆಸ್ಪತ್ರೆಯ ಮೇಲೆ ಬಾಂಬ್ ಹಾಕಲಾಗಿದ್ದು, ರೋಗಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ.

ಆಯಕಟ್ಟಿನ ಪ್ರದೇಶಗಳ ಮೇಲೆ ದಾಳಿ

ದಾಳಿಯ ತೀವ್ರತೆ ಎಷ್ಟಿತ್ತೆಂದರೆ, ಕಾಬೂಲ್‌ನ ಅತಿ ಸುರಕ್ಷಿತ ವಲಯಗಳೂ ಇದರಿಂದ ತಪ್ಪಿಸಿಕೊಂಡಿಲ್ಲ.

ALSO READ :  ಬಿಗ್ ಬಾಸ್ ಸೆಟ್ ಗೆ ಮರಳಿದ ಸಲ್ಮಾನ್ ಖಾನ್: 60 ಸಿಬ್ಬಂದಿಯ ಬಿಗಿ ಭದ್ರತೆ

*ಆಫ್ಘನ್ ಅಧ್ಯಕ್ಷೀಯ ಭವನದ ಸುತ್ತಮುತ್ತಲಿನ ವಸತಿ ಪ್ರದೇಶಗಳು ಧ್ವಂಸವಾಗಿವೆ.

*ರಕ್ಷಣಾ ಸಚಿವಾಲಯದ ಪಕ್ಕದ ಬಡಾವಣೆಗಳ ಮೇಲೆ ಬಾಂಬ್ ಸುರಿಮಳೆಗರೆಯಲಾಗಿದೆ.

*ಅಫ್ಘಾನಿಸ್ತಾನದ ಗುಪ್ತಚರ ಸಂಸ್ಥೆ ಜಿಡಿಐ ಪ್ರಧಾನ ಕಚೇರಿಯ ಸಮೀಪವಿರುವ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ | ಜೋಗಿಯಿಂದ ‘ಕೆಡಿ’ತನಕ್ಕೆ ಜಾರಿದರೇ ಪ್ರೇಮ್? ‘ಸರ್ಸೆ’ ಹಾಡಿನ ಅಶ್ಲೀಲತೆಗೆ ಕನ್ನಡಿಗರ ಧಿಕ್ಕಾರ!

ನೂರಾರು ನಾಗರಿಕರ ಸಾವು

ಪ್ರಾಥಮಿಕ ವರದಿಗಳ ಪ್ರಕಾರ, ಈ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನೂರಾರು ನಾಗರಿಕರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಕಾಬೂಲ್‌ನ ಆಸ್ಪತ್ರೆಗಳು ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿವೆ. ಪಾಕಿಸ್ತಾನದ ಈ ಆಕ್ರಮಣಕಾರಿ ನಡೆಯು ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಅಧೋಗತಿಗೆ ತಳ್ಳಿದ್ದು, ಗಡಿಯಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.

ಪಾಕಿಸ್ತಾನದ ಈ ಕೃತ್ಯವನ್ನು ಅಂತರಾಷ್ಟ್ರೀಯ ಸಮುದಾಯ ತೀವ್ರವಾಗಿ ಖಂಡಿಸಿದ್ದು, ಇದು ಸಾರ್ವಭೌಮ ರಾಷ್ಟ್ರದ ಮೇಲಿನ ಅತಿಕ್ರಮಣ ಎಂದು ಕಿಡಿಕಾರಿದೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top