advertise here

Search

ಕೋರ್ಟ್ ಕೆಲಸದ ಹೆಸರಲ್ಲಿ 25 ಕೋಟಿ ಲೂಟಿ ಮಾಡಿದ್ದ ದಂಪತಿ ಸಿಸಿಬಿ ಬಲೆಗೆ!

ccb arrests couple

ಸರಕಾರಿ ಕೆಲಸದ ಆಸೆಯಲ್ಲಿದ್ದ ನಿರುದ್ಯೋಗಿಗಳಿಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದ ಅಮಾಯಕರಿಗೆ ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಲೂಟಿ ಮಾಡಿದ್ದ ದಂಪತಿಯನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರು ಮೂಲದ ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಈ ಜೋಡಿಯ ವಂಚನೆಯ ಜಾಲ ಎಷ್ಟು ವಿಸ್ತಾರವಾಗಿತ್ತೆಂದರೆ, ಸುಮಾರು 500ಕ್ಕೂ ಹೆಚ್ಚು ಜನರು ಇವರ ಮಾತು ನಂಬಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು ಈಗ ಬೀದಿಗೆ ಬಿದ್ದಿದ್ದಾರೆ.

ಆರೋಪಿ ಜೈಸನ್ ಮತ್ತು ಲವೀನಾ ದಂಪತಿ ಹೈಕೋರ್ಟ್ ಮತ್ತು ಸಿವಿಲ್ ಕೋರ್ಟ್‌ಗಳಲ್ಲಿ ತಮಗೆ ಉನ್ನತ ಅಧಿಕಾರಿಗಳ ಪರಿಚಯವಿದೆ ಎಂದು ಸುಳ್ಳು ಹೇಳುತ್ತಿದ್ದರು. ವಿಶೇಷವಾಗಿ ಕೋರ್ಟ್‌ನ ‘ಡಿ’ ಗ್ರೂಪ್ (Group-D) ಕೆಲಸಗಳನ್ನು ಸುಲಭವಾಗಿ ಕೊಡಿಸುವುದಾಗಿ ಆಮಿಷವೊಡ್ಡುತ್ತಿದ್ದರು. ಖಾಸಗಿ ಕಂಪನಿಗಳಲ್ಲಿ ದುಡಿಯುವ ಯುವಕ-ಯುವತಿಯರನ್ನು ಈ ಜೋಡಿ ಟಾರ್ಗೆಟ್ ಮಾಡುತ್ತಿತ್ತು. “ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಭದ್ರತೆ ಇರುವುದಿಲ್ಲ, ಆದರೆ ಕೋರ್ಟ್ ಕೆಲಸ ಸಿಕ್ರೆ ಜೀವನ ಸೆಟಲ್ ಆಗುತ್ತೆ” ಎಂಬ ನಂಬಿಕೆಯನ್ನು ಜನರಲ್ಲಿ ಬಿತ್ತುತ್ತಿದ್ದರು.

ಒಬ್ಬೊಬ್ಬರಿಂದ 25 ಲಕ್ಷದವರೆಗೆ ವಸೂಲಿ:

ಪ್ರಾಥಮಿಕ ತನಿಖೆಯ ಪ್ರಕಾರ, ಈ ದಂಪತಿ ಒಬ್ಬೊಬ್ಬರಿಂದ ಕನಿಷ್ಠ 10 ಲಕ್ಷ ರೂಪಾಯಿಯಿಂದ ಗರಿಷ್ಠ 25 ಲಕ್ಷ ರೂಪಾಯಿಯವರೆಗೆ ಹಣ ವಸೂಲಿ ಮಾಡಿದ್ದಾರೆ. ಹಣ ಕೊಟ್ಟವರಿಗೆ ನಂಬಿಕೆ ಬರುವಂತೆ ಮಾಡಲು ನಕಲಿ ನೇಮಕಾತಿ ಪತ್ರಗಳನ್ನು (Fake Appointment Letters) ಸಹ ನೀಡುತ್ತಿದ್ದರು ಎನ್ನಲಾಗಿದೆ. ಕೆಲಸದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳು ತಿಂಗಳುಗಳ ಕಾಲ ಕಾದರೂ ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಲು ಹೋದರೆ, ಬೆದರಿಕೆ ಹಾಕುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ALSO READ :  ಲಕ್ಕುಂಡಿ ನಿಧಿ ರಹಸ್ಯ ಬಯಲು: ಚಿನ್ನದ ಬಿಸ್ಕಿಟ್ ಹೆಸರಲ್ಲಿ 'ಚಾಕಲೇಟ್' ಆಟ! ಮೌಲ್ವಿ ಅರೆಸ್ಟ್

ಸಿಸಿಬಿ ಬಲೆಗೆ ಬಿದ್ದಿದ್ದು ಹೇಗೆ?

ವಂಚನೆಗೊಳಗಾದ ಕೆಲವರು ನೀಡಿದ ದೂರುಗಳ ಆಧಾರದ ಮೇಲೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಆರೋಪಿಗಳು ಪದೇ ಪದೇ ತಮ್ಮ ವಾಸದ ಸ್ಥಳ ಮತ್ತು ಫೋನ್ ನಂಬರ್‌ಗಳನ್ನು ಬದಲಾಯಿಸುತ್ತಿದ್ದರು. ಅಂತಿಮವಾಗಿ ತಾಂತ್ರಿಕ ಕಾರ್ಯಾಚರಣೆಯ ಮೂಲಕ ದಂಪತಿಯನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಈ ವಂಚನೆಯ ಜಾಲದಲ್ಲಿ ಕೇವಲ ಈ ಇಬ್ಬರೇ ಇದ್ದಾರೆಯೇ ಅಥವಾ ನ್ಯಾಯಾಲಯದ ಒಳಗಿನ ಯಾರಾದರೂ ಇವರಿಗೆ ಸಾಥ್ ನೀಡಿದ್ದಾರೆಯೇ ಎಂಬ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | “ಕ್ಯಾಮೆರಾಮನ್‌” ಗಳ ಸಾವೆಂದರೆ ಅಷ್ಟೊಂದು “ನಿಕೃಷ್ಟ”ನಾ..?! ಕನಿಷ್ಟ ಸೌಜನ್ಯಕ್ಕೂ “ಸಂತಾಪ-ಸಹಾನುಭೂತಿ” ಬೇಡ್ವಾ..!?

ನಿರುದ್ಯೋಗಿಗಳ ಅಸಹಾಯಕತೆಯೇ ಇವರ ಬಂಡವಾಳ:

ಇಂದಿನ ಕಾಲದಲ್ಲಿ ಸರಕಾರಿ ಕೆಲಸ ಪಡೆಯುವುದು ಒಂದು ದೊಡ್ಡ ಸವಾಲು. ಇದನ್ನೇ ಬಂಡವಾಳ ಮಾಡಿಕೊಳ್ಳುವ ಇಂತಹ ವಂಚಕ ಜಾಲಗಳು ಸಾಮಾಜಿಕ ಜಾಲತಾಣ ಮತ್ತು ಏಜೆಂಟರ ಮೂಲಕ ಅಮಾಯಕರನ್ನು ಸೆಳೆಯುತ್ತಿವೆ. ಯಾವುದೇ ಸರಕಾರಿ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ಅಧಿಕೃತ ವೆಬ್‌ಸೈಟ್‌ಗಳ ಮೂಲಕವೇ ನಡೆಯುತ್ತದೆ. ಯಾರೋ ಪ್ರಭಾವಿಗಳಿದ್ದಾರೆ ಎಂದು ನಂಬಿ ಲಕ್ಷಾಂತರ ರೂಪಾಯಿ ಹಣ ನೀಡುವುದು ಸಂಕಷ್ಟಕ್ಕೆ ಆಹ್ವಾನ ನೀಡಿದಂತೆ.

ಬಂಧಿತ ಆರೋಪಿಗಳಿಂದ ಸದ್ಯಕ್ಕೆ ಹಣದ ಮೂಲ ಮತ್ತು ಆಸ್ತಿಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ವಂಚನೆಗೆ ಒಳಗಾದವರು ಧೈರ್ಯವಾಗಿ ಮುಂದೆ ಬಂದು ದೂರು ನೀಡುವಂತೆ ಸಿಸಿಬಿ ಮನವಿ ಮಾಡಿದೆ.


Political News

ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ: ದಾವಣಗೆರೆ ಟಿಕೆಟ್ ಫೈಟ್ ಈಗ ಹೈಕಮಾಂಡ್ ಅಂಗಳಕ್ಕೆ!

ಅಮೆರಿಕಾ–ಇರಾನ್ ಯುದ್ಧದ ಭೀತಿ: ಶಾಂತಿ ಒಪ್ಪಂದಕ್ಕೆ ಟ್ರಂಪ್ ನಕಾರ, ಇರಾನ್ ತೈಲ ಕೇಂದ್ರಗಳೇ ಟಾರ್ಗೆಟ್!

ಹುಳಿಯಾರು ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ!

ದಾವಣಗೆರೆ ದಕ್ಷಿಣ ಉಪಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ!

ಜಿಬಿಎ ಟೌನ್‌ ಪ್ಲ್ಯಾನಿಂಗ್‌ನಲ್ಲಿ ‘ಪರ್ಸಂಟೇಜ್‌’ ಪರ್ವ; ಡಿಸಿಎಂ ಹೆಸರಲ್ಲೇ ಅಧಿಕಾರಿಗಳ ಲೂಟಿ ದರ್ಬಾರ್‌!

ವರ್ಗಾವಣೆ ದಂಧೆಗೆ ಹೈಕೋರ್ಟ್ ಬ್ರೇಕ್! “ಸಿಎಂಗೆ ಇದಕ್ಕಿಂತ ದೊಡ್ಡ ಕೆಲಸಗಳಿವೆ” ಎಂದ ನ್ಯಾಯಪೀಠ

ಉಪಚುನಾವಣೆ ಸಮರ: ಯುಗಾದಿ ಹಬ್ಬದಂದೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಭಿನ್ನಮತಕ್ಕೆ ಸಿಎಂ ‘ಬ್ರೇಕ್’; ಸಂಧಾನ ಸಭೆ ಯಶಸ್ವಿ!

Scroll to Top