advertise here

Search

ಮಹಿಳೆಯರಿಗೆ “ಶಕ್ತಿ” ಪ್ರಯಾಣ ಇನ್ನೂ ಅನಾಯಾಸ.. “ಆಧಾರ್” ಓರಿಜಿನಲ್ಲೇ ಬೇಕೆಂತಿಲ್ಲ… ಮೊಬೈಲ್‌ ನಲ್ಲಿ‌ ತೋರಿಸಿದ್ರೂ ಪರ್ವಾಗಿಲ್ಲ..


ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನು ಮತ್ತಷ್ಟು ಸ್ಮಾರ್ಟ್..ಸರಳ..ಪರಿಣಾಮಕಾರಿ ಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದಂತಿದೆ. ಪ್ರಯಾಣ ಮಾಡೊಕ್ಕೆ ಮಹಿಳೆಯರು ಒರಿಜಿನಲ್‌ ಆದ ದಾಖಲೆಯನ್ನೇ ತೋರಿಸಬೇಕೆಂದು ಸಾರಿಗೆ ಸಿಬ್ಬಂದಿ ಹಠ ಮಾಡುತ್ತಿದ್ದಾರೆನ್ನುವ ವ್ಯಾಪಕ ದೂರುಗಳ ಹಿನ್ನಲೆಯಲ್ಲಿ ಇನ್ಮುಂದೆ ದಾಖಲೆಗಳು ಕೈಲಿದ್ದರೆ ಮಾತ್ರ ದಾಖಲೆಗಳಲ್ಲ, ಮೊಬೈಲ್‌ ನಲ್ಲಿದ್ದರೂ ಅವನ್ನು ಪರಿಗಣಿಸಬೇಕೆಂದು ಅಧೀಕೃತವಾಗಿ ಆದೇಶ ಹೊರಡಿಸಿದ್ದಾರೆ.ಇದು ಮಹಿಳಾ ಪ್ರಯಾಣಿಕರಿಗಷ್ಟೇ ಅಲ್ಲ, ಕಂಡಕ್ಟರ್ಸ್‌ ಗೂ ಅನುಕೂಲವಾಗಲಿದೆ.

ಶಕ್ತಿ ಯೋಜನೆಯ ಸದುಪಯೋಗ ಎಲ್ಲರಿಗೂ ಸಿಗಬೇಕು.ಯೋಜನೆ ಫಲಾನುಭವಿಗಳಿಗೆ ಎಲ್ಲಿಯೂ ಅಸಮಾಧಾನ-ಅತೃಪ್ತಿ ಆಗಬಾರದು.ಸರ್ಕಾರದ ಬಗ್ಗೆ ಅಪಸ್ವರ ತೆಗೆಯಬಾರದು ಎಂಬ ಕಾರಣಕ್ಕೆ ಸರ್ಕಾರ ಏನೆಲ್ಲಾ ದಾಖಲೆಗಳು ಉಚಿತ ಪ್ರಯಾಣಕ್ಕೆ ಬೇಕೆನ್ನುವುದನ್ನು 11-11-2023 ರಂದೇ ತಿಳಿಸಿತ್ತು.ಅದಾದ ಹೊರತಾಗ್ಯೂ ಅನೇಕ ಬಸ್‌ ಗಳಲ್ಲಿ ದಾಖಲೆಗಳ ವಿಚಾರದಲ್ಲಿ ಸಾರಿಗೆ ಸಿಬ್ಬಂದಿ ಮತ್ತು ಮಹಿಳಾ ಪ್ರಯಾಣಿಕರ ನಡುವೆ ವಾಗ್ವಾದ ನಡೆಯುತ್ತಲೇ ಇತ್ತು.ಈ ಬಗ್ಗೆ ಈ ಕ್ಷಣಕ್ಕೂ ಅನೇಕ ದೂರುಗಳು ಕೇಳಿಬರುತ್ತಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ.

ಈ ಹಿನ್ನಲೆಯಲ್ಲೇ ಮತ್ತೊಮ್ಮೆ ಸರ್ಕಾರ ಹಾಗೂ ಸಾರಿಗೆ ನಿಗಮಗಳು ಸುತ್ತೋಲೆಯಲ್ಲಿರುವ ಸಂಗತಿಗಳನ್ನು ಪುನರ್‌ ಉಚ್ಚರಿಸುವ ಕೆಲಸಕ್ಕೆ ಮುಂದಾಗಿದ್ದು ಮಹಿಳಾ ಪ್ರಯಾಣಿಕರು ತಮ್ಮ ಮೊಬೈಲ್‌ ನ ಡಿಜಿ ಲಾಕರ್‌ ಫೋಲ್ಡರ್‌ ನಲ್ಲಿ ಮೂಲ ದಾಖಲೆಗಳನ್ನು ಇಟ್ಟುಕೊಂಡು ಕಂಡಕ್ಟರ್‌ ಗೆ ತೋರಿಸಿದ್ರೆ ಅಷ್ಟೇ ಸಾಕು..ಆ ವಿಚಾರದಲ್ಲಿ ಕಂಡಕ್ಟರ್‌ ಕೂಡ ತಗಾದೆ ತೆಗೆಯುವಂತಿಲ್ಲ ಎನ್ನುವುದನ್ನು ಮತ್ತೊಮ್ಮೆ ಸ್ಟಷ್ಟಪಡಿಸಿದೆ.

ALSO READ :  ತುಮಕೂರು DC ಶ್ರೀನಿವಾಸ್‌ ರನ್ನು ಸಮರ್ಥಿಸಿಕೊಳ್ಳುವುದೆಂದರೆ "ಅಸತ್ಯ-ಅನ್ಯಾಯ" ಬೆಂಬಲಿಸಿದಂತಲ್ವಾ..!?..ಅವರೇ "ಸರಿ" ಎನ್ನುವವರು,ಅವರಷ್ಟೇ ತಪ್ಪಿತಸ್ಥರಲ್ವಾ..!?.

ಆದ್ದರಿಂದ ಇನ್ಮುಂದೆ ಕಂಡಕ್ಟರ್‌ ಗಳು ಕೂಡ ಒರಿಜಿನಲ್‌ ಆದ ದಾಖಲೆಗಳನ್ನೇ ತೋರಿಸಬೇಕೆಂದು ಮಹಿಳಾ ಪ್ರಯಾಣಿಕರನ್ನು ಒತ್ತಾಯಿಸುವಂತಿಲ್ಲ.ಟಿಕೆಟ್‌ ಇಶ್ಯೂ ಮಾಡುವ ಸನ್ನಿವೇಶದಲ್ಲಿ ಮಹಿಳಾ ಪ್ರಯಾಣಿಕರು ಅದನ್ನು ಪ್ರದರ್ಸಿಸಿದರೆ ಸಾಕು ಎನ್ನುವ ಸನ್ನಿವೇಶ ನಿರ್ಮಾಣವಾಗಿದೆ.ಮಹಿಳೆಯರು ಕೂಡ ತಮಗೆ ಸಹಕಾರ ಕೊಟ್ಟರೆ ಯಾವುದೇ ಗೊಂದಲ ಸೃಷ್ಟಿಯಾಗೊಲ್ಲ ಎನ್ನುವುದು ಕೂಡ ಕಂಡಕ್ಟರ್‌ ಸಮುದಾಯದ ಅಭಿಪ್ರಾಯ.ಇದೆಲ್ಲಕ್ಕಿಂತ ಹೆಚ್ಚಾಗಿ ಚೆಕ್ಕಿಂಗ್‌ ನೆವದಲ್ಲಿ ಕಿಕ್ಕಿರಿದ ಬಸ್‌ ಗಳನ್ನು ಹತ್ತಿ ಎಲ್ಲಿಲ್ಲದ ಟಾರ್ಚರ್‌ ಕೊಡುವ ತನಿಖಾ ಸಿಬ್ಬಂದಿಯ ಕಾಟಕ್ಕೊಂದು ಮುಕ್ತಿ ದೊರಕಿಸಿಕೊಡಿ ಎನ್ನುವ ಸಾರಿಗೆ ಸಿಬ್ಬಂದಿಯ ನೋವಿಗೆ ಸರ್ಕಾರ ಸ್ಪಂದಿಸಬೇಕಿದೆ.


Political News

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್

Exclusive: ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ? ಏನ್ ಮಾಡುತ್ತಿದ್ದೀರಾ ಶಿಕ್ಷಣ ಸಚಿವರೇ!?

BMTC ಸಿಬ್ಬಂದಿಯಿಂದಲೇ ಬಸ್ ಕ್ಲೀನಿಂಗ್.. ಸ್ವಚ್ಛತೆಗೆಂದೇ ಕೊಟ್ಟ ಟೆಂಡರ್ ಹಣ ಎಲ್ಲೋಯ್ತು!?

Sahyadri science College alumni meet: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಮಹಾಸಮಾಗಮಕ್ಕೆ ಮುಹೂರ್ತ ಫಿಕ್ಸ್

Puneeth rajkumar award: ನ್ಯೂಸ್ ಚಾನೆಲ್‌ಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 12 ಕ್ಯಾಮೆರಾಮನ್ ಮಿತ್ರರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ

Scroll to Top