“ಬಿಕ್ಲ ಶಿವು” ಮರ್ಡರ್‌-MLA ಭೈರತಿ ಬಸವರಾಜ್‌ ರಾಜಕೀಯ ಭವಿಷ್ಯ ಅತಂತ್ರ.!?

ದಿನಾಂಕ: 15-07-2025 ಸ್ಥಳ:ಕೆ.ಆರ್‌ ಪುರಂ ಸಮಯ: ರಾತ್ರಿ 08:10 ರಾಜಧಾನಿ ಬೆಂಗಳೂರಿನ ಕೆ.ಆರ್‌ ಪುರಂ ಕ್ಷೇತ್ರದ  ವ್ಯಾಪ್ತಿಯಲ್ಲಿ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲ ಶಿವು  ಎನ್ನುವ ರೌಡಿ ಶೀಟರ್‌ ಹೆಣ ಬಿದ್ದಿತ್ತು. ಸಹಜವಾಗಿ ರೌಡಿಗಳ ಹೆಣ ಬಿದ್ರೆ ಗೊತ್ತಲ್ಲ, ಹಳೇ  ರೈವಲ್ರಿ ಯಿಂದಲೇ ಅಂತದ್ದೊಂದು ಪ್ರತೀಕಾರದ ಕೊಲೆ ಆಗಿರಬಹುದೆಂದು ಮಾತನಾಡಿ ಸುಮ್ಮನಾಗ್ತೇವೆ. ಆರಂಭದಲ್ಲಿ ನಿನ್ನೆ ರಾತ್ರಿಯ ಕೇಸ್‌ ಕೂಡ ಹಾಗೆಯೇ ಎನ್ನಿಸಿತ್ತು.ಆದರೆ ಆನಂತರದಲ್ಲಿ ಹೆಣವಾದವನ ತಾಯಿ ಕೊಟ್ಟ ಕಂಪ್ಲೆಂಟ್‌ ಇದೆಯೆಲ್ಲಾ ಅದು ಇಡೀ ಪ್ರಕರಣಕ್ಕೊಂದು ಬಿಗ್‌ ಟ್ವಿಸ್ಟ್.‌ ಇಂಪಾರ್ಟೆನ್ಸ್‌ … Read more

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದಲ್ಲಿರುವ “ಕೈ“ಮುಖಂಡ ರೆಹಮಾನ್ ಖಾನ್ ಮಾಲೀಕತ್ವದ ಪ್ರತಿಷ್ಟಿತ ಡೆಲ್ಲಿ ಪಬ್ಲಿಕ್ ಸ್ಕೂಲ್ ಅಕ್ರಮನಾ..?! ಬೆಂಗಳೂರು:ಈ ನೆಲದಲ್ಲಿನ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿ ಅಪ್ಲೈ ಆಗಬೇಕು ಅಲ್ವಾ…? ಪ್ರತಿಷ್ಟಿತರು,ಬಲಾಢ್ಯರಿಗೊಂದು ಜನಸಾಮಾನ್ಯರಿಗೇ ಇನ್ನೊಂದು ಎನ್ನುವಂತ ಗೊಂದಲಕಾರಿ ವ್ಯವಸ್ಥೆ ಏನಾದ್ರೂ ಜಾರಿಯಲ್ಲಿದೆಯೇ..? ಇಂತದ್ದೊಂದು ಅನುಮಾನ ಸಹಜವಾಗಿ ಕಾಡೊಕ್ಕೆ ಕಾರಣ, ಎಲ್ಲಾ ನಿಯಮಗಳ ಮಾಹಿತಿ-ಅರಿವು ಇದ್ದ ಹೊರತಾಗ್ಯೂ ಕಾಂಗ್ರೆಸ್‌ ನ ಪ್ರಭಾವಿ ಮುಖಂಡನ ಮನೆತನ ಶೈಕ್ಷಣಿಕ ಅಕ್ರಮ ನಡೆಸಿರೋದು… ಅಂದ್ಹಾಗೆ ಇಂತದ್ದೊಂದು ಆಪಾದನೆ ಕೇಳಿಬಂದಿರೋದು ಕಾಂಗ್ರೆಸ್‌ ನ ಪ್ರಭಾವಿ ಮುಸ್ಲಿಂ … Read more

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬೆಂಗಳೂರು:ಎಲ್ಲವೂ  ಅಂದಾಜಿಸುತ್ತಿರುವ  ರೀತಿಯೇ ಆದಲ್ಲಿ….ಹಾಕಲಾಗುತ್ತಿರುವ ಲೆಕ್ಕಾಚಾರಗಳ ಪ್ರಕಾರವೆ ನಡೆದರೆ…ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೊಂದು ದೊಡ್ಡ ಸ್ಪೋಟಕ ಸುದ್ದಿಯಾಗೋದರಲ್ಲಿ ಅನುಮಾನವೇ ಇಲ್ಲ..ಏಕಂದ್ರೆ ಸುದ್ದಿಯ ಸ್ವರೂಪವೇ ಅಷ್ಟೊಂದು ಅಚ್ಚರಿ-ಗಾಬರಿ-ಸಂಶಯದ ಅಂಶಗಳನ್ನು ಒಳಗೊಂಡಿದೆ.ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು..ಆಗಿದೆ ಕೂಡ ಎನ್ನುವಂತ ಸನ್ನಿವೇಶದಲ್ಲಿ ಅಂದಾಜಿಸುತ್ತಿರುವ ರೀತಿಯಲ್ಲಿಯೇ ಎಲ್ಲಾ ನಡೆದರೂ ಅಚ್ಚರಿ ಪಡಬೇಕಿಲ್ಲವೇನೋ..?   ರಾಜಕೀಯವೇ ಹೀಗೆ…ಹಾಗೆ…ಯಾವ್ ಸನ್ನಿವೇಶದಲ್ಲಿ ಏನ್ ಆಗ್ತದೆನ್ನುವುದನ್ನು ಊಹಿಸಲಿಕ್ಕೆ ಆಗೊಲ್ಲ..ಹೀಗೆಯೇ ಆಗುತ್ತೆ ಎಂದು ಖಚಿತವಾಗಿ ಹೇಳಲಿಕ್ಕೂ ಬರೊಲ್ಲ..ಇಲ್ಲಿ ಎಲ್ಲವೂ ಆಕ್ಷಿಡೆಂಡಲ್.. ಅನಿರೀಕ್ಷಿತ..ಆದರೆ ಆಗೋದೆಲ್ಲದರ ಹಿಂದೆ ಪೂರ್ವಭಾವಿ ಸಿದ್ಧತೆ ಇದ್ದೇ ಇರುತ್ತದೆ.ಅದು … Read more

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ಹೈಕಮಾಂಡ್ ಗೆ  ಪಕ್ಷದ ಇತಿಹಾಸದಲ್ಲೇ ಹಿಂದೆಂದು ಇಷ್ಟೊಂದು ಕಷ್ಟಕರವಾಗಿರಲಿಲ್ಲವೇನೋ ಅನ್ನಿಸುತ್ತೆ.ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲಕ್ಕೆ ಸಿಲುಕಿಕೊಂಡಿದೆ.ಯತ್ನಾಳ್ ಬಣದ ಬೇಡಿಕೆಯಂತೆ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಿಸಬೇಕೋ, ಬಿವೈ ವಿಜಯೇಂದ್ರ ಅವರನ್ನೇ ಮುಂದುವರೆಸಬೇಕೋ ಎನ್ನುವ ಪ್ರಶ್ನೆ ತೀವ್ರವಾಗಿ ಕಾಡಲಾರಂಭಿಸಿದೆ.ಇದೆಲ್ಲದರ ನಡುವೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಎಲ್ಲವನ್ನು ಸರಿದೂಗಿಸಬಲ್ಲ ಕೆಪಾಸಿಟಿ ಇರುವ ಲೀಡರ್ಸ್ ಗಳು ಯಾರೆನ್ನುವ ಪ್ರಶ್ನೆಗೆ ಹೈಕಮಾಂಡ್ ಬಳಿ ಇರುವ ಕೆಲವೇ ಕೆಲವು ಹೆಸರುಗಳಲ್ಲಿ ಸಿ.ಟಿ ರವಿ,ಅರವಿಂದ ಬೆಲ್ಲದ್ ಮುಂಚೂಣಿಯಲ್ಲಿವೆ … Read more

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

ಬೆಂಗಳೂರು: ಇದು ಎಷ್ಟರ ಮಟ್ಟಿಗೆ ಸತ್ಯವೋ..ಸುಳ್ಳೋ ಗೊತ್ತಿಲ್ಲ.ಆದರೆ ರಾಜಕೀಯ ಪಡ ಸಾಲೆಯಲ್ಲಿ ಇಂತದ್ದೊಂದು ಮಾತು ತುಂಬಾ ಗಂಭೀರವಾಗಿ ಕೇಳಿಬರುತ್ತಿದೆ. ಬಣಜಗಳ ದಿಂದ ದಿಕ್ಕೆಟ್ಟು ಹೋಗಿರುವ ಬಿಜೆಪಿ ಪಕ್ಷವನ್ನು ಹಳಿಗೆ ತರೊಕ್ಕೆ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ ಎನ್ನುವ ಪರಿಸ್ತಿತಿ ನಿಜಕ್ಕೂ ಇದೆಯೇ..? ಆ ಪತ್ರಿಕಾ ದಿಗ್ಗಜರನ್ನೇ ಕರೆತಂದು ಸರಿ ಮಾಡ ಬೇಕೆನಿಸುವ ವಿಚಾರ ಏಕೆ ಬಂದಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡಲಾರಂಭಿಸಿವೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಎನ್ನುವುದಕ್ಕಿಂತ ಏನೂ ಸರಿಯಿಲ್ಲ ಎನ್ನುವಂಥ ಪರಿಸ್ತಿತಿಯಿದೆ.ಬಣ ಜಗಳ ಸರಿ … Read more

ಚೆನ್ನಪಟ್ಟಣ ಉಪಸಮರ-2024: ಸಿ.ಪಿ ಯೋಗೇಶ್ವರ್ ಎದುರು ಕಣಕ್ಕಿಳಿಯಲು ನಿಖಿಲ್ ಹಿಂದೇಟು..?! ಲೆಕ್ಕಾಚಾರ ಕೆಳಗಾಗಿ ಸೋತರೆ “ಐರನ್ ಲೆಗ್” ಕಳಂಕ ಹೊತ್ತುಕೊಳ್ಳುವ ಆತಂಕ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಿಗದಿಯಾಗಿರುವ ಡೆಡ್ ಲೈನ್ ಮುಗಿಯೊಕ್ಕೆ  ಕೆಲ ಗಂಟೆಗಳಷ್ಟೇ ಬಾಕಿ ಇದೆ.ಆದ್ರೂ ಅಖಾಡದಲ್ಲಿ ಏನಾಗಲಿದೆ ಎನ್ನೋದು ಗೊತ್ತಾಗುತ್ತಲೇ ಇಲ್ಲ.ಎಲ್ಲವೂ ಅಚ್ಚರಿ-ನಿಗೂಢದಂತೆ ಕಾಣಿಸುತ್ತದೆ.ನಿನ್ನೆಯವರೆಗೂ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ಸಿ.ಪಿ ಯೋಗೇಶ್ವರ್ ನಿನ್ನೆ ರಾತ್ರಿ ಕೈ ಸೇರುವ ಮುನ್ಸೂಚನೆ ನೀಡಿ ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ನೇತೃತ್ವದಲ್ಲಿ ಕೈ ಸೇರಿದ್ದಾಗಿದೆ.ಕಾಂಗ್ರೆಸ್ ನಿಂದಲೇ ಸ್ಪರ್ದಿಸ್ತಾರೆನ್ನುವ ಮಾತುಗಳು ಬಲವಾಗಿವೆ.ಆದರೆ ಕಡೇ ಕ್ಷಣದಲ್ಲಿ ಏನಾಗುತ್ತದೋ ಗೊತ್ತಾಗುತ್ತಿಲ್ಲ. ಸ್ಪರ್ದೆ ಮಾಡೋದಿದ್ರೆ ಅದು ಕೇವಲ ಬಿಜೆಪಿಯಿಂದ … Read more

CHENNAPATNA BYELECTION, POLITICAL EXCLUSIVE..: ಚನ್ನಪಟ್ಟಣಕ್ಕೆ “ಹೃದಯವಂತ” ಸಂಸದ ಡಾ.ಮಂಜುನಾಥ್ ಪತ್ನಿ ಅನುಸೂಯ “ಮೈತ್ರಿ” ಅಭ್ಯರ್ಥಿ..?!

ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೂಡಿಸಿರುವಷ್ಟು ಕುತೂಹಲವನ್ನು ಬಹುಷಃ ಇನ್ನ್ಯಾವ ಕ್ಷೇತ್ರಗಳ ಉಪ ಚುನಾವಣೆ ಹಿಡಿದಿಟ್ಟುಕೊಂಡಿಲ್ಲ ಎಂದೆನಿಸುತ್ತದೆ. ಎರಡು ಕ್ಷೇತ್ರಗಳಲ್ಲಿನ  ಪ್ರತ್ಯೇಕ ಪಕ್ಷಗಳ  ಅಭ್ಯರ್ಥಿಗಳು ಯಾರೆನ್ನುವುದು ಬಹುತೇಕ ನಿಕ್ಕಿಯಾಗಿದ್ರೂ ಚನ್ನಪಟ್ಟಣ ವಿಚಾರದಲ್ಲಿ ಎದುರಾಳಿ ಪಕ್ಷಗಳು ತಮ್ಮ ಅಭ್ಯರ್ಥಿಗಳು ಯಾರೆನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.. ಮೊದಲು ನೀವು ಘೋಷಣೆ ಮಾಡಿ ಎಂದು ಕಾಂಗ್ರೆಸ್ ಕುಳಿತಿದ್ರೆ ಜೆಡಿಎಸ್-ಬಿಜೆಪಿ ಮೈತ್ರಿ ಮೊದಲು ನೀವು ಮಾಡಿ ಎಂದು ಸವಾಲಾಕಿ ಕೂತಂತಿದೆ.ಇದೆಲ್ಲದರ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ … Read more

POLITICAL EXCLUSIVE..”ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ..?

ಬೆಂಗಳೂರು:ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದೆ..ಮಗ್ಗಲು ಬದಲಿಸುತ್ತಿದೆ.ದಸರಾ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂಬ ಭವಿಷ್ಯವಾಣಿ ಬಗ್ಗೆನೇ ಎಲ್ಲರ ಕುತೂಹಲ ನೆಟ್ಟಿದೆ.ಆ ಕ್ಷಿಪ್ರ ರಾಜಕೀಯ ಬೆಳವಣಿಗೆ ಏನು ಎನ್ನುವ ಕುತೂಹಲದ ಬಗ್ಗೆ ಎಲ್ಲರೂ ತಲೆಕೆಡಿಸಿಕೊಂಡಿ ರುವಾಗಲೆ ಮತ್ತೊಂದು ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ದಸರಾ ಬಳಿಕ ರಾಜ್ಯ ರಾಜಕಾರಣ ಮತ್ತೊಂದು ಮಗ್ಗಲು ಬದಲಿಸಲಿದೆ ಎನ್ನುವ  ಭವಿಷ್ಯ ವಾಣಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ..? ಅಥವಾ ಬಲವಂತವಾಗಿ ಅವರಿಂದ ಕೊಡಿಸಲಾಗುತ್ತಾ ಎನ್ನುವುದರತ್ತಲೇ … Read more

ಮಾದ್ಯಮಗಳಿಗೆ ವಿಧಾನಸೌಧಕ್ಕೆ ನೋ ಎಂಟ್ರಿ..? ಮಂತ್ರಿಮಹೋದಯರ ಭದ್ರತೆಗೆ ಧಕ್ಕೆಯಾಗುವ ನೆವ..?!ಎಸಿಪಿ ಯಿಂದ ಆಡಳಿತ ಸುಧಾರಣಾ ಇಲಾಖೆಗೆ ಪತ್ರ..?!

ಕರೆದಾಗ ಬರಬೇಕಂತೆ…ಹೇಳಿದ್ದಲ್ಲಿ ಬೈಟ್ ತಗೋಬೇಕಂತೆ..ಹಿಂದೆಮುಂದೆ ಅಡ್ಡಾಡುವಂತಿಲ್ವಂತೆ..ಹೇಳಿದಷ್ಟನ್ನೇ ಕೇಳ್ಕೊಂಡು ಹೋಗ್ಬೇಕಂತೆ..ಏನಿದು ಇದೆಲ್ಲಾ..?! ಬೆಂಗಳೂರು: ಕುಣಿಯಲಿಕ್ಕಾಗದವಳು ನೆಲ ಡೊಂಕು ಎಂದಳಂತೆ ಎನ್ನುವಂತಾಗಿದೆ ರಾಜ್ಯ ಸರ್ಕಾರದ ಧೋರಣೆ. ತನ್ನಲ್ಲಿರುವ ಹುಳುಕುಗಳನ್ನು ಸರಿ ಮಾಡಲು ಸಾಧ್ಯವಾಗದೆ ಮಾದ್ಯಮಗಳ ಮೇಲೆ ನಿರ್ಬಂದ-ನಿಯಂತ್ರಣ ಹೇರೊಕ್ಕೆ ಮುಂದಾಗಿದೆ ಎನ್ನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುವ ರೀತಿಯಲ್ಲಿ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಮಾದ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುವ ಎಲ್ಲಾ ಸಾಧ್ಯತೆ ಕಂಡುಬಂದಿದೆ.ಮಾದ್ಯಮಗಳಿಂದ ಮಂತ್ರಿ ಮಹೋದಯರ ಸುರಕ್ಷತೆ-ಭದ್ರತೆಗೆ ಧಕ್ಕೆ ಆಗುತ್ತಿದೆ. ಸಚಿವಾಲಯದ ಕೆಲಸ ಕಾರ್ಯಗಳಿಗೆ ತೀವ್ರತರದ ತೊಂದರೆ ಆಗುತ್ತಿದೆ ಎನ್ನುವ … Read more

ಯಶವಂತಪುರ ಬೈ ಎಲೆಕ್ಷನ್‌ ಕನ್ಫರ್ಮ್….? S.T.ಸೋಮಶೇಖರ್‌ ಪಕ್ಕಾ..ಆದ್ರೆ ಎದುರಾಳಿ ಮೈತ್ರಿ ಅಭ್ಯರ್ಥಿ ಯಾರು…? ಜವರಾಯಿಗೌಡ/ನಿಖಿಲ್‌ ಕುಮಾರಸ್ವಾಮಿನಾ..?!

*3 ಬಾರಿ ಸೋತರೂ ಮತ್ತೊಂದು ಗೆಲುವಿನ ಅವಕಾಶದ ನಿರೀಕ್ಷೆಯಲ್ಲಿ ಜವರಾಯಿಗೌಡ.. *ಜವರಾಯಿಗೌಡರನ್ನೇ ಅಭ್ಯರ್ಥಿಯನ್ನಾಗಿಸಿ ದಳಪತಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ..? *ಜವರಾಯಿಗೌಡರಿಗಿಂತ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದ್ದೇವೆ ಎಂದು ಶಾಕ್‌ ಕೊಡ್ತಾರಾ..? *ಬಿಜೆಪಿ ಜವರಾಯಿಗೌಡ ಅವರನ್ನೇ ತಮ್ಮ ಮೈತ್ರಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳುತ್ತಾ..? *ದಳಪತಿಗಳು ಕೈ ಕೊಟ್ರ ಜವರಾಯಿಗೌಡ ನಿಲುವೇನು..? ಬೇರೆ ಅಭ್ಯರ್ಥಿಯನ್ನು ಒಪ್ಪಿಕೊಳ್ತಾರಾ..? ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರು ಪಕ್ಷದ ಸಿದ್ದಾಂತಕ್ಕೆ ವಿರುದ್ಧವಾಗಿ ಮತ ಚಲಾಯಿಸುತ್ತಿದ್ದಂತೆ ಆಯಾ ಕ್ಷೇತ್ರ ಗಳಲ್ಲಿ ಬೈ ಎಲೆಕ್ಷನ್ ಆಗೋದು ಪಕ್ಕಾ … Read more