advertise here

Search

ಮಾಗಡಿ ರಸ್ತೆ ಠಾಣೆಯ ಪಿಎಸ್‌ಐ ವಿರುದ್ಧ ಅದೇ ಠಾಣೆಯಲ್ಲಿ ಎಫ್‌ಐಆರ್ ದಾಖಲು!

fir against psi kaushik

ಬೆಂಗಳೂರು: ಕಾನೂನು ಕಾಪಾಡಬೇಕಾದ ಪೊಲೀಸರೇ ಕಾನೂನು ಕೈಗೆತ್ತಿಕೊಂಡರೆ ಜನಸಾಮಾನ್ಯರು ಯಾರ ಬಳಿ ಹೋಗಿ ನ್ಯಾಯ ಕೇಳಬೇಕು? ನ್ಯಾಯಾಲಯ ನೀಡಿದ ಜಾಮೀನು (Bail) ಪ್ರತಿ ಹಿಡಿದು ಠಾಣೆಗೆ ಹೋದ ವ್ಯಕ್ತಿಯ ಮೇಲೆ ಖಾಕಿ ದರ್ಪ ಮೆರೆದಿರುವ ಗಂಭೀರ ಆರೋಪವೊಂದು ಕೇಳಿಬಂದಿದೆ. ಅಚ್ಚರಿಯೆಂದರೆ, ಮಾಗಡಿ ರಸ್ತೆ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ (PSI) ವಿರುದ್ಧ ಅದೇ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅವಿನಾಶ್ ಎಂಬುವವರ ತಾಯಿ ಪ್ರಮಿಳಾ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಲಕ್ಷ್ಮೀ ಎಂಬುವವರು ನೀಡಿದ ದೂರಿನ ಮೇರೆಗೆ, ಚೀಟಿ ಹಣ ವಂಚನೆಗೆ ಸಂಬಂಧಿಸಿದಂತೆ ಪ್ರಮಿಳಾ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಈ ಕೇಸ್‌ನ ತನಿಖೆ ನೆಪದಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬುದು ಆರೋಪ ಕೇಳಿಬಂದಿದೆ.

ಯಾವುದೇ ಪೂರ್ವ ನೊಟೀಸ್ ನೀಡದೆ ಅವಿನಾಶ್ ಅವರ ತಾಯಿ, ಸಹೋದರಿ ಹಾಗೂ ತಂದೆಯನ್ನು ಬಂಧಿಸಿದ್ದಲ್ಲದೆ, ಅವರ ಮೇಲೆ ಹಲ್ಲೆ ಕೂಡ ಮಾಡಲಾಗಿದೆ ಎಂದು ಅವಿನಾಶ್ ಆರೋಪಿಸಿದ್ದಾರೆ.

ಬೇಲ್ ತಂದಿದ್ದಕ್ಕೇ ಕಪಾಳಮೋಕ್ಷ!

ತಮ್ಮ ತಾಯಿ ಮೇಲಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಿನಾಶ್ ಅವರು ನ್ಯಾಯಾಲಯದಿಂದ ಜಾಮೀನು ಪಡೆದು, ಆ ಬೇಲ್ ಪ್ರತಿಯನ್ನು ನೀಡಲು ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ಹೋಗಿದ್ದರು. ಈ ವೇಳೆ ಅಲ್ಲಿ ಹಾಜರಿದ್ದ ಪಿಎಸ್‌ಐ ಕೌಶಿಕ್ ಅವರು ಏಕಾಏಕಿ ರೊಚ್ಚಿಗೆದ್ದಿದ್ದಾರೆ.

ALSO READ :  ಎಕ್ಸೆಲ್ ಕಾಲೇಜಿನಿಂದ ವಿಷವಾಯಿತಾ ಗುರುವಾಯನಕೆರೆ? ಮೀನುಗಳ ಮಾರಣಹೋಮಕ್ಕೆ ಯಾರು ಹೊಣೆ!

“ಬೇಲ್ ತಗೊಂಡು ಬಂದಿದ್ದೀಯಾ?” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪಿಎಸ್‌ಐ ಕೌಶಿಕ್, ಅವಿನಾಶ್ ಅವರ ತಾಯಿ ಮತ್ತು ಸಹೋದರಿಯ ಎದುರಲ್ಲೇ ಅವಿನಾಶ್ ಕೆನ್ನೆಗೆ ಬಲವಾಗಿ ಹೊಡೆದಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, “ಈ ಕೇಸ್‌ಗೆ ಬೇಲ್ ತಗೊಂಡ್ರೆ, ನಿನ್ನ ಮೇಲೆ ಇನ್ನೊಂದು ಕೇಸ್ ಹಾಕ್ತೀನಿ” ಎಂದು ನೇರವಾಗಿ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸುಲಿಗೆ: ಅಕ್ರಮ ಪ್ರಶ್ನಿಸಿದ ಮಾಧ್ಯಮಗಳ ಮೇಲೆಯೇ ಡಾ. ಗಿರೀಶ್ ರೆಡ್ಡಿ ದರ್ಪ!

ಪಿಎಸ್‌ಐ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು!

ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ, ತಮ್ಮ ಮೇಲೆಯೇ ಹಲ್ಲೆ ನಡೆಸಿದ ಪಿಎಸ್‌ಐ ಕೌಶಿಕ್ ಅವರ ವರ್ತನೆಯಿಂದ ಬೇಸತ್ತ ಅವಿನಾಶ್, ಅದೇ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವಿನಾಶ್ ನೀಡಿದ ದೂರಿನ ಅನ್ವಯ, ಇದೀಗ ಪಿಎಸ್‌ಐ ಕೌಶಿಕ್ ಹಾಗೂ ಪ್ರಕರಣದ ದೂರುದಾರರಾದ ಲಕ್ಷ್ಮೀ ಮತ್ತು ನರಸಿಂಹ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಒಂದೇ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಸ್‌ಐ ವಿರುದ್ಧ ಅದೇ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಪೊಲೀಸರ ಮುಂದಿನ ತನಿಖೆ ಯಾವ ತಿರುವು ಪಡೆಯಲಿದೆ ಕಾದು ನೋಡಬೇಕಿದೆ.


Political News

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?

Scroll to Top