advertise here

Search

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್


ಬೆಂಗಳೂರು: ನ್ಯೂಸ್ ಚಾನೆಲ್ ಗಳ ಪರದೆ ಮೇಲೆ ನಿರೂಪಕರು,ರಿಪೋರ್ಟರ್ಸ್ ಗಳು ಚೆನ್ನಾಗಿ ಕಾಣುವುದರಲ್ಲಿ ತೆರೆ ಹಿಂದೆ ಕೆಲಸ ಮಾಡುವ ಮೇಕಪ್ ಮ್ಯಾನ್ ಗಳ ಪಾತ್ರ ನಿರ್ಣಾಯಕವಾಗಿರುತ್ತೆ.ತೆರೆ ಮೇಲೆ ಬಂದವರು ಸುದ್ದಿಯಾಗುತ್ತಾರೆ.ಆದರೆ ತೆರೆ ಹಿಂದೆ ಕೆಲಸ ಮಾಡಿದವರು ಪ್ರಚಲಿತಕ್ಕೆ ಬರುವುದೇ ಇಲ್ಲ.ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳಿಂದಲೂ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಎನ್ನುವ ಮಿತಭಾಷಿ,ನಿರುಪದ್ರವಿ,ಅಜಾತಶತೃ ಯುವಕ ಸಣ್ಣ ವಯಸ್ಸಿನಲ್ಲೇ ಶಾಶ್ವತವಾಗಿ ನೇಪಥ್ಯಕ್ಕೆ ಸರಿದಿದ್ದಾನೆ.

ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಹಿರಿಯ ಮೇಕಪ್ ಮ್ಯಾನ್ ಆಗಿದ್ದ ಚೇತನ್ ಗೆ 27 ವರ್ಷ ವಯಸ್ಸಾಗಿತ್ತು. ಬಿಟಿವಿ ನ್ಯೂಸ್ ಚಾನೆಲ್ ಶುರುವಾದಾಗಿನಿಂದಲೂ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಮಿತಭಾಷಿ.ಯಾರೊಂದಿಗೂ ಮಾತನಾಡದೆ ತನ್ನ ಪಾಡಿಗಿದ್ದುಕೊಂಡು ಕೆಲಸ ಮಾಡುತ್ತಿದ್ದ ನಿರುಪದ್ರವಿ. ತಾನಾಯಿತು ತನ್ನ ಕೆಲಸವಾಯಿತೆನ್ನುವ ನಿರ್ಲಿಪ್ತ ಭಾವನೆಯಲ್ಲಿದ್ದ ಚೇತನ್ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ.ಬೆರೆಯುತ್ತಿರಲಿಲ್ಲ ಎಂದು ಆತನ ಒಡನಾಡಿಗಳು ತಿಳಿಸಿದ್ದಾರೆ.

ALSO READ :  ದಿ-ಫೈಲ್ ಮಹಾಂತೇಶ್ ವಿರುದ್ದ ಬೇಹುಗಾರಿಕೆ…!?

ಇತ್ತೀಚೆಗೆ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಚೇತನ್ ಕಳೆದ ನಾಲ್ಕೈದು ದಿನಗಳಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಆಸ್ಪತ್ರೆಗೆ ದಾಖಲಾದ ದಿನದಿಂದಲೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ವೈದ್ಯರ ಆರೈಕೆ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಚೇತನ್ ದಿಡೀರ್ ಸಾವಿಗೆ ಬಿಟಿವಿ ಬಳಗ ದಿಗ್ಬ್ರಾಂತಿ ವ್ಯಕ್ತಪಡಿಸಿದೆ.ಸಣ್ಣ ವಯಸ್ಸಿನಲ್ಲೇ ಅಸುನೀಗಿದ ಚೇತನ್ ಕುಟುಂಬಕ್ಕೆ ಆತನ ಅಗಲಿಕೆ ನೋವನ್ನು ಭರಿಸುವಂಥ ಶಕ್ತಿಯನ್ನು ನೀಡಲಿ.ಆತನ ಸಾವಿಗೆ ಕನ್ನಡ ಫ್ಲ್ಯಾಶ್ ನ್ಯೂಸ್ ಸಂತಾಪ ಸೂಚಿಸುತ್ತದೆ.


Political News

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

Scroll to Top