advertise here

Search

ಬಣ್ಣಗಳಲ್ಲಿ ಲೀನವಾದ Btv ಮೇಕಪ್‌ಮ್ಯಾನ್‌ ಚೇತನ್


ಬೆಂಗಳೂರು: ನ್ಯೂಸ್ ಚಾನೆಲ್ ಗಳ ಪರದೆ ಮೇಲೆ ನಿರೂಪಕರು,ರಿಪೋರ್ಟರ್ಸ್ ಗಳು ಚೆನ್ನಾಗಿ ಕಾಣುವುದರಲ್ಲಿ ತೆರೆ ಹಿಂದೆ ಕೆಲಸ ಮಾಡುವ ಮೇಕಪ್ ಮ್ಯಾನ್ ಗಳ ಪಾತ್ರ ನಿರ್ಣಾಯಕವಾಗಿರುತ್ತೆ.ತೆರೆ ಮೇಲೆ ಬಂದವರು ಸುದ್ದಿಯಾಗುತ್ತಾರೆ.ಆದರೆ ತೆರೆ ಹಿಂದೆ ಕೆಲಸ ಮಾಡಿದವರು ಪ್ರಚಲಿತಕ್ಕೆ ಬರುವುದೇ ಇಲ್ಲ.ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳಿಂದಲೂ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಎನ್ನುವ ಮಿತಭಾಷಿ,ನಿರುಪದ್ರವಿ,ಅಜಾತಶತೃ ಯುವಕ ಸಣ್ಣ ವಯಸ್ಸಿನಲ್ಲೇ ಶಾಶ್ವತವಾಗಿ ನೇಪಥ್ಯಕ್ಕೆ ಸರಿದಿದ್ದಾನೆ.

ಬಿಟಿವಿ ನ್ಯೂಸ್ ಚಾನೆಲ್ ನಲ್ಲಿ ಹಿರಿಯ ಮೇಕಪ್ ಮ್ಯಾನ್ ಆಗಿದ್ದ ಚೇತನ್ ಗೆ 27 ವರ್ಷ ವಯಸ್ಸಾಗಿತ್ತು. ಬಿಟಿವಿ ನ್ಯೂಸ್ ಚಾನೆಲ್ ಶುರುವಾದಾಗಿನಿಂದಲೂ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಮಿತಭಾಷಿ.ಯಾರೊಂದಿಗೂ ಮಾತನಾಡದೆ ತನ್ನ ಪಾಡಿಗಿದ್ದುಕೊಂಡು ಕೆಲಸ ಮಾಡುತ್ತಿದ್ದ ನಿರುಪದ್ರವಿ. ತಾನಾಯಿತು ತನ್ನ ಕೆಲಸವಾಯಿತೆನ್ನುವ ನಿರ್ಲಿಪ್ತ ಭಾವನೆಯಲ್ಲಿದ್ದ ಚೇತನ್ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ.ಬೆರೆಯುತ್ತಿರಲಿಲ್ಲ ಎಂದು ಆತನ ಒಡನಾಡಿಗಳು ತಿಳಿಸಿದ್ದಾರೆ.

ALSO READ :  ದಾವೂದ್ ದಾರಿಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ!

ಇತ್ತೀಚೆಗೆ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಚೇತನ್ ಕಳೆದ ನಾಲ್ಕೈದು ದಿನಗಳಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಆಸ್ಪತ್ರೆಗೆ ದಾಖಲಾದ ದಿನದಿಂದಲೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ವೈದ್ಯರ ಆರೈಕೆ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಚೇತನ್ ದಿಡೀರ್ ಸಾವಿಗೆ ಬಿಟಿವಿ ಬಳಗ ದಿಗ್ಬ್ರಾಂತಿ ವ್ಯಕ್ತಪಡಿಸಿದೆ.ಸಣ್ಣ ವಯಸ್ಸಿನಲ್ಲೇ ಅಸುನೀಗಿದ ಚೇತನ್ ಕುಟುಂಬಕ್ಕೆ ಆತನ ಅಗಲಿಕೆ ನೋವನ್ನು ಭರಿಸುವಂಥ ಶಕ್ತಿಯನ್ನು ನೀಡಲಿ.ಆತನ ಸಾವಿಗೆ ಕನ್ನಡ ಫ್ಲ್ಯಾಶ್ ನ್ಯೂಸ್ ಸಂತಾಪ ಸೂಚಿಸುತ್ತದೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top