advertise here

Search

ರಾಷ್ಟ್ರವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕ್ಯಾನ್ಸರ್..!?


ಸಾಮಾಜಿಕ ಜಾಲತಾಣಗಳಲ್ಲಿ ಸೂಲಿಬೆಲೆ ಆರೋಗ್ಯದ ಬಗ್ಗೆ ಊಹಾಪೋಹ-ಸ್ಪಷ್ಟನೆ ನೀಡದ ಸೂಲಿಬೆಲೆ

ಬೆಂಗಳೂರು: ತಾತ್ವಿಕ ಭಿನ್ನಾಭಿಪ್ರಾಯ, ಸೈದ್ದಾಂತಿಕ ವೈರುದ್ಧ್ಯಗಳಾಚೆಗೆ ಕರ್ನಾಟಕ ಕಂಡ ಒಬ್ಬ  ಉತ್ತಮ ವಾಗ್ಮಿ ,ಚಿಂತಕ, ರಾಷ್ಟ್ರವಾದಿ ಹೋರಾಟಗಾರ ಎಂದೇ ಬಿಂಬಿಸಿಕೊಂಡಿರುವ  ಚಕ್ರವರ್ತಿ ಸೂಲಿಬೆಲೆ ಆರೋಗ್ಯಕ್ಕೆ ಸಂಬಂಧಪಟ್ಟಂತೆ ದೊಡ್ಡ ಶಾಕಿಂಗ್ ಎನ್ನುವಂತ ಸುದ್ದಿಯೊಂದು ಹರಿದಾಡುತ್ತಿದೆ.

ಚಕ್ರವರ್ತಿ ಸೂಲಿಬೆಲೆ ಆರೋಗ್ಯವನ್ನು ಮಾರಕವಾದ ಮಾರಿ ಆವರಿಸಿಕೊಂಡಿದೆ ಎನ್ನಲಾಗ್ತಿದೆ.ಈ ಮಹಾಮಾರಿಯನ್ನು ಗಂಟಲು ಕ್ಯಾನ್ಸರ್ ಎನ್ನಲಾಗ್ತಿದೆ.ಸಾಮಾಜಿಕ ಕಾರ್ಯಕರ್ತ ಹಾಗೂ ಕನ್ನಡಪರ ಹೋರಾಟಗಾರರಾದ ಭೈರಪ್ಪ ಹರೀಶ್ ಕುಮಾರ್ ಎನ್ನುವವರು ಇದನ್ನು ತಮ್ಮ ಫೇಸ್ ಬುಕ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದಾರೆ.ಅವರು ಈ ಬಗ್ಗೆ ಮಾತನಾಡಿ ದ್ದಾರೆನ್ನಲಾಗಿದ್ದು, ಸೂಲಿಬೆಲೆಗೆ ಕ್ಯಾನ್ಸರ್ ಇರುವ ಬಗ್ಗೆ ಸಾಕಷ್ಟು ಮಾಹಿತಿಗಳು ಬಹಿರಂಗವಾಗುತ್ತಿದ್ದು ನನ್ನ ಮತ್ತು ಅವರ ನಡುವೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ನನ್ನ ಗೆಳೆಯ ಸೂಲಿಬೆಲೆಗೆ ಏನೂ ಆಗದಿರಲಿ ಎಂಬ ಒಳ್ಳೆಯ ಮಾತನ್ನಾಡಿದ್ದಾರಂತೆ.ಅವರ ಹೇಳಿಕೆಯ ಸ್ಟೇಟಸ್ ಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಭೈರಪ್ಪ ಹರೀಶ್ ಕುಮಾರ್ ಬಹಿರಂಗಪಡಿಸಿರುವ ಕ್ಯಾನ್ಸರ್ ವಿಚಾರದ ಬಗ್ಗೆ ಸಾಕಷ್ಟು ಪರ ವಿರೋಧದ ಚರ್ಚೆಗಳು ಕೂಡ ನಡೆಯಲಾರಂಭಿಸಿವೆ. ಕೆಲವರು ಸೂಲಿಬೆಲೆಯ ವ್ಯಕ್ತಿತ್ವ ಹಾಗೂ ಬದುಕನ್ನು ವಿಭಿನ್ನ ರೀತಿಯಲ್ಲಿ ವ್ಯಾಖ್ಯಾನಿಸುವ-ವಿಶ್ಲೇಷಿಸುವ ರೀತಿಯ ಚರ್ಚೆ ನಡೆದಿವೆ.ಭೈರಪ್ಪ ಹರೀಶ್ ಕುಮಾರ್ ಅವರ ಬಗ್ಗೆಯೂ ಕೂಡ ಸೂಲಿಬೆಲೆ ಬೆಂಬಲಿಗರು ಆಕ್ಷೇಪಾರ್ಹವಾದ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಬಗ್ಗೆಯೂ ಕೂಡ  ವರದಿಯಾಗಿದೆ.

ALSO READ :  INSIDE THE TRUTH....ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ...

ಅದೇನೇ ಇರಲಿ, ಸೂಲಿಬೆಲೆ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ರೀತಿಯಲ್ಲಿ ಚರ್ಚೆ ನಡೆಯುತ್ತಿದೆ. ಅಂದ್ಹಾಗೆ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿರುವ ಸುದ್ದಿಯ ಸತ್ಯಾಸತ್ಯತೆ ಬಗ್ಗೆ ಈವರೆಗೂ ಯಾವುದೇ ಸ್ಪಷ್ಟನೆ ದೊರೆತಿಲ್ಲ.ಖುದ್ದು ಸೂಲಿಬೆಲೆ ಅವರೇ ಈ ಬಗ್ಗೆ ಈವರೆಗೂ ಹೇಳಿಕೆ ನೀಡಿಲ್ಲ.ಅವರು ಸ್ಪಷ್ಟನೆ ನೀಡುವವರೆಗೂ ಅವರ ಆರೋಗ್ಯದ ಬಗ್ಗೆ ಇರುವ ಊಹಾಪೋಹಗಳಿಗೆ ತೆರೆ ಬೀಳುವುದಿಲ್ಲ ಎನ್ನಿಸುತ್ತಿದೆ.ಈ ಬಗ್ಗೆ ಶೀಘ್ರವೇ ಸೂಲಿಬೆಲೆ ಇದಕ್ಕೆ ಸ್ಪಷ್ಟನೆ ನೀಡಬೇಕೆಂದು ಸೂಲಿಬೆಲೆ ಅಭಿಮಾನಿಗಳು ಒತ್ತಾಯಿಸಿದ್ದಾರೆ.  

ಕನ್ನಡ ಫ್ಲ್ಯಾಶ್ ನ್ಯೂಸ್ ಕೂಡ ಈ ಬಗ್ಗೆ ಸ್ಪಷ್ಟನೆ ಕೇಳಲು ಸೂಲಿಬೆಲೆ ಅವರ ಆತ್ಮೀಯ ಬಳಗವನ್ನು ಸಂಪರ್ಕಿಸುವ ಪ್ರಯತ್ನ ಮಾಡಿತು.ಬಹುತೇಕ ಇದೆಲ್ಲಾ ಸುಳ್ಳು-ಊಹಾಪೋಹ, ಅವರಿಗೆ ಆಗದವರು ಇಂತದ್ದೊಂದು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.ಅಂಥಾ ವಿಕೃತ ಮನಸ್ಥಿತಿಯವರ ಬಗ್ಗೆ ಏನೂ ಹೇಳಬಾರದು.ಅವರ ಆರೋಗ್ಯ ಚೆನ್ನಾಗಿದೆ.ದೇವರ ದಯೆಯಿಂದ ಅವರು ಆರೋಗ್ಯವಾಗಿದ್ದಾರೆ ಎನ್ನುವ ಉತ್ತರ ದೊರೆಯಿತು.ಕನ್ನಡ ಫ್ಲ್ಯಾಶ್ ನ್ಯೂಸ್ ಕೂಡ ಅವರ ಉತ್ತಮ ಆರೋಗ್ಯಕ್ಕಾಗಿ ಆಶಿಸುತ್ತದೆ.


Political News

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

Scroll to Top