BBMP ಡಿಸಿಎಫ್‌ ವಿರುದ್ಧ 15 % ಕಮಿಷನ್‌ ಆರೋಪ-ಡಿಸಿಎಂಗೆ ದೂರು.

18 ಲಕ್ಷ ಬಿಲ್‌ ಗೆ 16 ಪರ್ಸೇಂಟ್‌ ಕಮಿಷನ್‌ ಕೇಳಿದ್ರಂತೆ ಡಿಸಿಎಫ್‌ ಸ್ವಾಮಿ..! ಮಾಡದ ಕೆಲಸಕ್ಕೆ ಬೋಗಸ್‌ ಬಿಲ್‌ ಮಾಡಿಕೊಂಡು ಬಂದಿದ್ರಂತೆ ಶ್ರೀನಿವಾಸ್..!?‌ ಬೆಂಗಳೂರು:ಬಿಬಿಎಂಪಿ ಅರಣ್ಯ ಘಟಕದಲ್ಲಿ ಕಮಿಷನ್‌ ಸುದ್ದಿ ಸದ್ದು ಮಾಡಿದೆ. ಮಳೆಗಾಲದಲ್ಲಿ ಮಾಡಿದ ಕೆಲಸದ ಬಿಲ್‌ ಕೇಳಲು ಹೋದರೆ ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ. ಎಲ್‌.ಜಿ. ಸ್ವಾಮಿ ಅವರು ಶೇಕಡಾ 15 ರಷ್ಟು ಕಿಕ್‌ ಬ್ಯಾಕ್‌ ಕೇಳುತ್ತಿದ್ದಾರೆ ಎಂದು ಅರಣ್ಯ ಗುತ್ತಿಗೆದಾರ ಶ್ರೀನಿವಾಸ್‌ ಆಪಾದಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ದೂರು ನೀಡಿದ್ದಾರೆ. … Read more

“ವೈದೇಹಿ ಆಸ್ಪತ್ರೆ” ಆಸ್ತಿ ತೆರಿಗೆ ಕಡತ ಗೌಪ್ಯ ಪ್ರಕರಣ: ಕಂದಾಯಾಧಿಕಾರಿ ಬಸವಾಚಾರಿಗಿಂತ ಮುನ್ನ ಕಡತ ಮುಚ್ಚಿಟ್ಟಿದ್ರಂತೆ AC ಬಸವರಾಜ ಮಗಿ..!?

2024ರ ಅಂತ್ಯದಲ್ಲಿ ಕಂದಾಯಾಧಿಕಾರಿಯಾಗಿ ಬಸವಾಚಾರಿ ಚಾರ್ಜ್ …ಅದಕ್ಕೂ  ಮುನ್ನ ಆ ಹುದ್ದೆಯಲ್ಲಿದ್ದವರು ಬಸವರಾಜ ಮಗಿ ಅಂತೆ..ತನಿಖೆಯಲ್ಲಿ ದೃಢ.. ಬೆಂಗಳೂರು:50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡತವನ್ನು ಬಚ್ಚಿಟ್ಟು ಕರ್ತವ್ಯಲೋಪ ಎಸಗಿದ ವೈಟ್ ಫೀಲ್ಡ್ ಕಂದಾಯಾಧಿಕಾರಿ ಬಸವಾಚಾರಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮನಿಷ್ ಮೌದ್ಗಿಲ್ ಅವರು ಪತ್ತೆ ಮಾಡಿದ ಈ ಪ್ರಕರಣದಲ್ಲಿ ಕಡತವನ್ನು ಬಚ್ಚಿಟ್ಟಿದ್ದು ಬಸವಾಚಾರಿ ಮಾತ್ರವಲ್ಲ ಅವರ ಸ್ಥಾನದಲ್ಲಿ ಹಿಂದೆ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಅಧಿಕಾರಿಯು ಭಾಗಿಯಾಗಿರುವುದು ಗೊತ್ತಾಗಿದೆ.ಈ ಹಿನ್ನಲೆಯಲ್ಲಿ ಬಸವಾಚಾರಿ … Read more

EXCLUSIVE: IAS ಮನಿಷ್ ಮೌದ್ಗಿಲ್ ಬಲೆಗೆ ಬಿದ್ದ BBMP ಬೃಹತ್ ತಿಮಿಂಗಲ rOಬಸವಾಚಾರಿ..

50 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ವೈದೇಹಿ ಆಸ್ಪತ್ರೆ ಕಡತವನ್ನೇ 1 ವರ್ಷದಿಂದ ಬಚ್ಚಿಟ್ಟುಕೊಂಡಿದ್ದ ಖತರ್ನಾಕ್ ಕಂದಾಯಾಧಿಕಾರಿ ಬಸವಾಚಾರಿ..!! ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬೊಕ್ಕಸ ತುಂಬೊಕ್ಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮನಿಷ್ ಮೌದ್ಗಿಲ್ ಅಹಿರ್ನಿಷಿ ಪ್ರಯತ್ನ ಮಾಡ್ತಿದಾರೆ.ಇದರಿಂದ ಪಾಲಿಕೆ ಬೊಕ್ಕಸಕ್ಕೆ ಸಾವಿರಾರು ಕೋಟಿ ಸಂದಾಯವಾಯಿತು. ಮನಿಷ್ ಮೌದ್ಗಿಲ್ ಅವರ ಕಾರ್ಯಕ್ಷಮತೆಯಿಂದ ಪಾಲಿಕೆ ಇತಿಹಾಸದಲ್ಲೇ ಸಂಗ್ರಹವಾಗದಷ್ಟು ಆಸ್ತಿ ತೆರಿಗೆ   ಬೊಕ್ಕಸ ಸೇರಿತು.ದಶಕಗಳಿಂದಲೂ ಎಮ್ಮೆ ಚರ್ಮ ದಂತಾಗಿದ್ದ ಕಂದಾಯ ವಿಭಾಗದ ಅಧಿಕಾರಿಗಳು ಮೈ ಕೊಡವಿ ನಿಲ್ಲುವಂತೆ … Read more

ಲೋಕಾರ್ಪಣೆಯಾಗುತ್ತಿರುವ “ಪ್ರಜಾ-ಸಮಯ ಟಿವಿ”ಗೆ ಆಲ್‌ ದಿ ಬೆಸ್ಟ್‌ ..ಜತೆಗೆ ಒಂದಷ್ಟು ಆತ್ಮೀಯ ಸಲಹೆ- ಬುದ್ಧಿ ಮಾತು..

ಬೆಂಗಳೂರು: ಕಾಂಗ್ರೆಸ್ ಶಾಸಕರೊಬ್ಬರ ಮಾಲೀಕತ್ವದ ಪ್ರಜಾ ಟಿವಿ(prajaa tv) ರಾತ್ರೊರಾತ್ರಿ “ಮಾದ್ಯಮ ಉದ್ಯಮಿ” ವಿಜಯ್ ತಾತಾ(vijay tata) ಮಡಿಲಿಗೆ ಬಿದ್ದ ಮೇಲೆ ಅವರದೇ ಮಾಲೀಕತ್ವದ ಮತ್ತೊಂದು ಸುದ್ದಿ ವಾಹಿನಿ ಸಮಯ ಟಿವಿ ಜತೆ ಹೊಸ ರೂಪದಲ್ಲಿ ಲೋಕಾರ್ಪಣೆಯಾಗಲು ಮುಹೂರ್ತ ಫಿಕ್ಸ್ ಆಗಿದೆ. ಇದೇ ಗುರುವಾರ ಅಂದರೆ ಮಾರ್ಚ್ 6 ರಂದು ಹೊಸ ರೂಪ-ವಿನ್ಯಾಸದಲ್ಲಿ ಚಾನೆಲ್ ರೀ ಲಾಂಚ್ ಆಗುತ್ತಿದೆ. ಚಾನೆಲ್ ಆಡಳಿತ ಮಂಡಳಿಯೇ ಘೋಷಿಸಿಕೊಂಡಿರುವಂತೆ, ಮೇಕ್ರಿ ಬಸ್ ನಿಲ್ದಾಣ,4ನೇ ಮಹಡಿ, ಬಿಇಎಲ್ ಆರ್ ಡ್ರೈವ್, ಮೇಕ್ರಿ ಸರ್ಕಲ್ … Read more

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬೆಂಗಳೂರು:ಎಲ್ಲವೂ  ಅಂದಾಜಿಸುತ್ತಿರುವ  ರೀತಿಯೇ ಆದಲ್ಲಿ….ಹಾಕಲಾಗುತ್ತಿರುವ ಲೆಕ್ಕಾಚಾರಗಳ ಪ್ರಕಾರವೆ ನಡೆದರೆ…ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೊಂದು ದೊಡ್ಡ ಸ್ಪೋಟಕ ಸುದ್ದಿಯಾಗೋದರಲ್ಲಿ ಅನುಮಾನವೇ ಇಲ್ಲ..ಏಕಂದ್ರೆ ಸುದ್ದಿಯ ಸ್ವರೂಪವೇ ಅಷ್ಟೊಂದು ಅಚ್ಚರಿ-ಗಾಬರಿ-ಸಂಶಯದ ಅಂಶಗಳನ್ನು ಒಳಗೊಂಡಿದೆ.ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗಬಹುದು..ಆಗಿದೆ ಕೂಡ ಎನ್ನುವಂತ ಸನ್ನಿವೇಶದಲ್ಲಿ ಅಂದಾಜಿಸುತ್ತಿರುವ ರೀತಿಯಲ್ಲಿಯೇ ಎಲ್ಲಾ ನಡೆದರೂ ಅಚ್ಚರಿ ಪಡಬೇಕಿಲ್ಲವೇನೋ..?   ರಾಜಕೀಯವೇ ಹೀಗೆ…ಹಾಗೆ…ಯಾವ್ ಸನ್ನಿವೇಶದಲ್ಲಿ ಏನ್ ಆಗ್ತದೆನ್ನುವುದನ್ನು ಊಹಿಸಲಿಕ್ಕೆ ಆಗೊಲ್ಲ..ಹೀಗೆಯೇ ಆಗುತ್ತೆ ಎಂದು ಖಚಿತವಾಗಿ ಹೇಳಲಿಕ್ಕೂ ಬರೊಲ್ಲ..ಇಲ್ಲಿ ಎಲ್ಲವೂ ಆಕ್ಷಿಡೆಂಡಲ್.. ಅನಿರೀಕ್ಷಿತ..ಆದರೆ ಆಗೋದೆಲ್ಲದರ ಹಿಂದೆ ಪೂರ್ವಭಾವಿ ಸಿದ್ಧತೆ ಇದ್ದೇ ಇರುತ್ತದೆ.ಅದು … Read more

ಬದಲಾಯ್ತಾ “ಪ್ರಜಾ ಟಿವಿ” ಕನ್ನಡ ಆಡಳಿತ..!? ಮಾದ್ಯಮ ಉದ್ಯಮಿ “ವಿಜಯತಾತಾ” ತೆಕ್ಕೆಗೆ ಜಾರಿತಾ..?

ಬೆಂಗಳೂರು:ಇದು ಕನ್ನಡ ಮಾದ್ಯಮ ಲೋಕದಲ್ಲಿ ನಡೆದಿರುವ ಮತ್ತೊಂದು ಬೆಳವಣಿಗೆ.ಕನ್ನಡ ಸುದ್ದಿ ವಾಹಿನಿಗಳ ಪೈಕಿ ಅನೇಕ ವರ್ಷಗಳಿಂದ  ಮುಂಚೂಣಿಯಲ್ಲಿದ್ದ ಕನ್ನಡದ ಸುದ್ದಿ ವಾಹಿನಿಗಳಲ್ಲಿ ಒಂದಾದ ಪ್ರಜಾ ಟಿವಿ ಕನ್ನಡದ ಮಾಲಿಕತ್ವ ಬದಲಾಗಿರುವ ಸುದ್ದಿ ಹೊರಬಿದ್ದಿದೆ.ಪ್ರಸ್ತುತ ಮಾಲೀಕತ್ವದಿಂದ ಬೇರೊಬ್ಬರ ತೆಕ್ಕೆಗೆ ಮಗ್ಗಲು ಬದಲಿಸಿದೆ ಎನ್ನುವ ಮಾತು ಕೇಳಿಬರುತ್ತಿದೆ. ಹೊಸ ಮಾಲೀಕತ್ವದಲ್ಲಿ ಪ್ರಜಾ ಟಿವಿ ಹೊಸ ರೂಪ-ಹೊಸ ವಿನ್ಯಾಸದಲ್ಲಿ ಹೊರಹೊಮ್ಮಲಿದೆ ಎನ್ನುವ ಮಾತು ಸಿಕ್ಕಾಪಟ್ಡೆ ಸುದ್ದಿ ಮಾಡುತ್ತಿದೆ. ಸರಿಸುಮಾರು ಒಂದು ದಶಕಕ್ಕಿಂತಲೂ ಹೆಚ್ಚಿನ  ಸಮಯದಿಂದಲೂ ಸುದ್ದಿ ಪ್ರಸಾರದಲ್ಲಿ ಮಂಚೂಣಿಯಲ್ಲಿತ್ತು ಪ್ರಜಾ ಟಿವಿ.ಸುದ್ದಿ … Read more

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

ಬೆಂಗಳೂರು: ಇದು ಎಷ್ಟರ ಮಟ್ಟಿಗೆ ಸತ್ಯವೋ..ಸುಳ್ಳೋ ಗೊತ್ತಿಲ್ಲ.ಆದರೆ ರಾಜಕೀಯ ಪಡ ಸಾಲೆಯಲ್ಲಿ ಇಂತದ್ದೊಂದು ಮಾತು ತುಂಬಾ ಗಂಭೀರವಾಗಿ ಕೇಳಿಬರುತ್ತಿದೆ. ಬಣಜಗಳ ದಿಂದ ದಿಕ್ಕೆಟ್ಟು ಹೋಗಿರುವ ಬಿಜೆಪಿ ಪಕ್ಷವನ್ನು ಹಳಿಗೆ ತರೊಕ್ಕೆ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ ಎನ್ನುವ ಪರಿಸ್ತಿತಿ ನಿಜಕ್ಕೂ ಇದೆಯೇ..? ಆ ಪತ್ರಿಕಾ ದಿಗ್ಗಜರನ್ನೇ ಕರೆತಂದು ಸರಿ ಮಾಡ ಬೇಕೆನಿಸುವ ವಿಚಾರ ಏಕೆ ಬಂದಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡಲಾರಂಭಿಸಿವೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಎನ್ನುವುದಕ್ಕಿಂತ ಏನೂ ಸರಿಯಿಲ್ಲ ಎನ್ನುವಂಥ ಪರಿಸ್ತಿತಿಯಿದೆ.ಬಣ ಜಗಳ ಸರಿ … Read more

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

*****ಆಯಕಟ್ಟಿನ ಹುದ್ದೆ  ಭರವಸೆ ಈಡೇರಿಸುವ ಭರಾಟೆಯಲ್ಲಿ  ನಿಯಮ ಗಾಳಿಗೆ ತೂರಿತಾ ಸಿದ್ದರಾಮಯ್ಯ ಸರ್ಕಾರ.. *****ಅಧ್ಯಕ್ಷರಾಗಲು ಬೇಕಿರುವುದು ಬಿಇ( ಪರಿಸರ ವಿಜ್ನಾನ)-ನರೇಂದ್ರಸ್ವಾಮಿ ಓದಿರುವುದು ಬಿ.ಇ( ಸಿವಿಲ್) ಅಂತೆ.. ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಾದಿಯ ವಾಸ್ತುವೇ ಸರಿ ಇಲ್ಲ ಎನಿಸುತ್ತದೆ.ಯಾರೇ ಹೊಸದಾಗಿ ಅಧ್ಯಕ್ಷರಾಗಿ ಬಂದರೂ ಅವರ ಸುತ್ತ ವಿವಾದ ಸುತ್ತಿಕೊಳ್ಳುತ್ತಲೇ ಇರುತ್ತದೆ.ಹೊಸ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಶಾಸಕ ಎಂ.ನರೇಂದ್ರಸ್ವಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದ ಬೆನ್ನಲ್ಲೇ ಎದುರಾಗಿರುವ ಗೊಂದದ  ಹಿನ್ನಲೆಯಲ್ಲಿ ಇಂತದ್ದೊಂದು ಪ್ರಶ್ನೆ ಕಾಡುವುದು ಸಹಜ..ಆದರೆ ಇದು … Read more

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ  ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ  ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ ನ್ಯೂಸ್ ಸಚಿವರಿಗೆ ಹಾಕುತ್ತಿರುವ ನೇರ ಪ್ರಶ್ನೆ.. ಏಕಂದ್ರೆ ದೊಡ್ಡ ಬಳ್ಳಾಪುರದ  ದೊಡ್ಡಬೆಳವಂಗಲ ಗ್ರಾಮದ ಹುಲಿಕುಂಟೆಯ ಸರ್ವೆ ನಂಬರ್ 150ರಲ್ಲಿ ಖಾಸಗಿ ಬಿಲ್ಡರ್ಸ್ ಗಳ ಲಾಭಿಗೆ ಒಳಗಾಗಿ ಖಾತೆ ವರ್ಗಾವಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಹಾಗೂ ತಹಸಿಲ್ದಾರ್ ವಿಭಾ ರಾಠೋಡ್  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು … Read more

“ವಿಸ್ತಾರ” ಪುನರಾಂಭಕ್ಕೆ ದೊಡ್ಡ ಹಿನ್ನಡೆ..!! “ಚಾನೆಲ್” ಮಾಲೀಕತ್ವದ ಕಂಪೆನಿಯ ಸ್ವತ್ತುಗಳು ಜಪ್ತಿ..!?

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ವಿಸ್ತಾರ ನ್ಯೂಸ್ ಚಾನೆಲ್ ನ ನಿರ್ದೇಶಕರಲ್ಲಿ ಒಬ್ಬರೆನ್ನಲಾಗಿದ್ದ ಹರಿಪ್ರಕಾಶ್ ಕೋಣೆಮನೆ ವಿರುದ್ಧ ಮಾಹಿತಿ ಮತ್ತು  ಪ್ರಸಾರ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿದೆ ಎಂದು ಮಾದ್ಯಮಗಳು ವರದಿ ಮಾಡಿವೆ.ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಪಾಲುದಾರರೂ ಆಗಿರುವ ಮೈಸೂರು ಮರ್ಕಂಟೈಲ್  ಕಂಪೆನಿಯ  ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಡಾ.ಎಚ್.ಎಸ್ ಶೆಟ್ಟಿ ಅವರು ದೂರು ನೀಡಿದ್ದಾರೆನ್ನಲಾಗಿದ್ದು,ಅನುಮತಿ ಇಲ್ಲದೆ ಕಂಪೆನಿಯ ಷೇರುಗಳನ್ನು ಹಸ್ತಾಂತರಿಸಿದ್ದಾರೆನ್ನುವುದು ಕೋಣೆಮನೆ ಮೇಲೆ ಕೇಳಿಬಂದಿರುವ ಆಪಾದನೆ. ಅನುಮತಿ ಇಲ್ಲದೆ ಷೇರುಗಳನ್ನು ಇನ್ನೊಬ್ಬರಿಗೆ ಮಾರಬಾರದೆನ್ನುವುದು ಕಂಪೆನಿ ರೂಲ್ಸ್.ಆದರೆ … Read more