ಬದಲಾಯ್ತಾ “ಪ್ರಜಾ ಟಿವಿ” ಕನ್ನಡ ಆಡಳಿತ..!? ಮಾದ್ಯಮ ಉದ್ಯಮಿ “ವಿಜಯತಾತಾ” ತೆಕ್ಕೆಗೆ ಜಾರಿತಾ..?

ಬೆಂಗಳೂರು:ಇದು ಕನ್ನಡ ಮಾದ್ಯಮ ಲೋಕದಲ್ಲಿ ನಡೆದಿರುವ ಮತ್ತೊಂದು ಬೆಳವಣಿಗೆ.ಕನ್ನಡ ಸುದ್ದಿ ವಾಹಿನಿಗಳ ಪೈಕಿ ಅನೇಕ ವರ್ಷಗಳಿಂದ  ಮುಂಚೂಣಿಯಲ್ಲಿದ್ದ ಕನ್ನಡದ ಸುದ್ದಿ ವಾಹಿನಿಗಳಲ್ಲಿ ಒಂದಾದ ಪ್ರಜಾ ಟಿವಿ ಕನ್ನಡದ ಮಾಲಿಕತ್ವ ಬದಲಾಗಿರುವ ಸುದ್ದಿ ಹೊರಬಿದ್ದಿದೆ.ಪ್ರಸ್ತುತ ಮಾಲೀಕತ್ವದಿಂದ ಬೇರೊಬ್ಬರ ತೆಕ್ಕೆಗೆ ಮಗ್ಗಲು ಬದಲಿಸಿದೆ ಎನ್ನುವ ಮಾತು ಕೇಳಿಬರುತ್ತಿದೆ. ಹೊಸ ಮಾಲೀಕತ್ವದಲ್ಲಿ ಪ್ರಜಾ ಟಿವಿ ಹೊಸ ರೂಪ-ಹೊಸ ವಿನ್ಯಾಸದಲ್ಲಿ ಹೊರಹೊಮ್ಮಲಿದೆ ಎನ್ನುವ ಮಾತು ಸಿಕ್ಕಾಪಟ್ಡೆ ಸುದ್ದಿ ಮಾಡುತ್ತಿದೆ. ಸರಿಸುಮಾರು ಒಂದು ದಶಕಕ್ಕಿಂತಲೂ ಹೆಚ್ಚಿನ  ಸಮಯದಿಂದಲೂ ಸುದ್ದಿ ಪ್ರಸಾರದಲ್ಲಿ ಮಂಚೂಣಿಯಲ್ಲಿತ್ತು ಪ್ರಜಾ ಟಿವಿ.ಸುದ್ದಿ … Read more

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

ಬೆಂಗಳೂರು: ಇದು ಎಷ್ಟರ ಮಟ್ಟಿಗೆ ಸತ್ಯವೋ..ಸುಳ್ಳೋ ಗೊತ್ತಿಲ್ಲ.ಆದರೆ ರಾಜಕೀಯ ಪಡ ಸಾಲೆಯಲ್ಲಿ ಇಂತದ್ದೊಂದು ಮಾತು ತುಂಬಾ ಗಂಭೀರವಾಗಿ ಕೇಳಿಬರುತ್ತಿದೆ. ಬಣಜಗಳ ದಿಂದ ದಿಕ್ಕೆಟ್ಟು ಹೋಗಿರುವ ಬಿಜೆಪಿ ಪಕ್ಷವನ್ನು ಹಳಿಗೆ ತರೊಕ್ಕೆ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ ಎನ್ನುವ ಪರಿಸ್ತಿತಿ ನಿಜಕ್ಕೂ ಇದೆಯೇ..? ಆ ಪತ್ರಿಕಾ ದಿಗ್ಗಜರನ್ನೇ ಕರೆತಂದು ಸರಿ ಮಾಡ ಬೇಕೆನಿಸುವ ವಿಚಾರ ಏಕೆ ಬಂದಿದೆ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡಲಾರಂಭಿಸಿವೆ. ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಎನ್ನುವುದಕ್ಕಿಂತ ಏನೂ ಸರಿಯಿಲ್ಲ ಎನ್ನುವಂಥ ಪರಿಸ್ತಿತಿಯಿದೆ.ಬಣ ಜಗಳ ಸರಿ … Read more

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

*****ಆಯಕಟ್ಟಿನ ಹುದ್ದೆ  ಭರವಸೆ ಈಡೇರಿಸುವ ಭರಾಟೆಯಲ್ಲಿ  ನಿಯಮ ಗಾಳಿಗೆ ತೂರಿತಾ ಸಿದ್ದರಾಮಯ್ಯ ಸರ್ಕಾರ.. *****ಅಧ್ಯಕ್ಷರಾಗಲು ಬೇಕಿರುವುದು ಬಿಇ( ಪರಿಸರ ವಿಜ್ನಾನ)-ನರೇಂದ್ರಸ್ವಾಮಿ ಓದಿರುವುದು ಬಿ.ಇ( ಸಿವಿಲ್) ಅಂತೆ.. ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಾದಿಯ ವಾಸ್ತುವೇ ಸರಿ ಇಲ್ಲ ಎನಿಸುತ್ತದೆ.ಯಾರೇ ಹೊಸದಾಗಿ ಅಧ್ಯಕ್ಷರಾಗಿ ಬಂದರೂ ಅವರ ಸುತ್ತ ವಿವಾದ ಸುತ್ತಿಕೊಳ್ಳುತ್ತಲೇ ಇರುತ್ತದೆ.ಹೊಸ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಶಾಸಕ ಎಂ.ನರೇಂದ್ರಸ್ವಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದ ಬೆನ್ನಲ್ಲೇ ಎದುರಾಗಿರುವ ಗೊಂದದ  ಹಿನ್ನಲೆಯಲ್ಲಿ ಇಂತದ್ದೊಂದು ಪ್ರಶ್ನೆ ಕಾಡುವುದು ಸಹಜ..ಆದರೆ ಇದು … Read more

ಅಕ್ರಮ ಖಾತಾ ವರ್ಗಾವಣೆ ಆರೋಪಕ್ಕೆ ತುತ್ತಾದ AC ದುರ್ಗಶ್ರೀ,ತಹಸೀಲ್ದಾರ್ ವಿಭಾ ರಾಠೋಡ್ ವಿರುದ್ಧ ಮತ್ತೆರೆಡು ದೂರು…ಸಾಕ್ಷ್ಯವಿದ್ರೂ ಕ್ರಮ ಕೈಗೊಳ್ಳದೆ ಸಚಿವ ಕೃಷ್ಣ ಭೈರೇಗೌಡ ಮೌನ..?!

ಬೆಂಗಳೂರು(ದೊಡ್ಡಬಳ್ಳಾಪುರ): ಕ್ರಮ ಕೈಗೊಳ್ಳಲು ಸಾಕ್ಷ್ಯಗಳನ್ನು ಕೇಳುತ್ತಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡರ ಮುಂದೆ ಈಗ  ಎಲ್ಲಾ ಸಾಕ್ಷ್ಯಗಳಿವೆ..ಆದರೆ ನಿರ್ದಾಕ್ಷಿಣ್ಯ  ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ..? ಇದು ಕನ್ನಡ ಫ್ಲ್ಯಾಶ್ ನ್ಯೂಸ್ ಸಚಿವರಿಗೆ ಹಾಕುತ್ತಿರುವ ನೇರ ಪ್ರಶ್ನೆ.. ಏಕಂದ್ರೆ ದೊಡ್ಡ ಬಳ್ಳಾಪುರದ  ದೊಡ್ಡಬೆಳವಂಗಲ ಗ್ರಾಮದ ಹುಲಿಕುಂಟೆಯ ಸರ್ವೆ ನಂಬರ್ 150ರಲ್ಲಿ ಖಾಸಗಿ ಬಿಲ್ಡರ್ಸ್ ಗಳ ಲಾಭಿಗೆ ಒಳಗಾಗಿ ಖಾತೆ ವರ್ಗಾವಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಹಾಗೂ ತಹಸಿಲ್ದಾರ್ ವಿಭಾ ರಾಠೋಡ್  ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳು … Read more

“ವಿಸ್ತಾರ” ಪುನರಾಂಭಕ್ಕೆ ದೊಡ್ಡ ಹಿನ್ನಡೆ..!! “ಚಾನೆಲ್” ಮಾಲೀಕತ್ವದ ಕಂಪೆನಿಯ ಸ್ವತ್ತುಗಳು ಜಪ್ತಿ..!?

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ವಿಸ್ತಾರ ನ್ಯೂಸ್ ಚಾನೆಲ್ ನ ನಿರ್ದೇಶಕರಲ್ಲಿ ಒಬ್ಬರೆನ್ನಲಾಗಿದ್ದ ಹರಿಪ್ರಕಾಶ್ ಕೋಣೆಮನೆ ವಿರುದ್ಧ ಮಾಹಿತಿ ಮತ್ತು  ಪ್ರಸಾರ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿದೆ ಎಂದು ಮಾದ್ಯಮಗಳು ವರದಿ ಮಾಡಿವೆ.ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಪಾಲುದಾರರೂ ಆಗಿರುವ ಮೈಸೂರು ಮರ್ಕಂಟೈಲ್  ಕಂಪೆನಿಯ  ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಡಾ.ಎಚ್.ಎಸ್ ಶೆಟ್ಟಿ ಅವರು ದೂರು ನೀಡಿದ್ದಾರೆನ್ನಲಾಗಿದ್ದು,ಅನುಮತಿ ಇಲ್ಲದೆ ಕಂಪೆನಿಯ ಷೇರುಗಳನ್ನು ಹಸ್ತಾಂತರಿಸಿದ್ದಾರೆನ್ನುವುದು ಕೋಣೆಮನೆ ಮೇಲೆ ಕೇಳಿಬಂದಿರುವ ಆಪಾದನೆ. ಅನುಮತಿ ಇಲ್ಲದೆ ಷೇರುಗಳನ್ನು ಇನ್ನೊಬ್ಬರಿಗೆ ಮಾರಬಾರದೆನ್ನುವುದು ಕಂಪೆನಿ ರೂಲ್ಸ್.ಆದರೆ … Read more

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಯಾಂಪಸ್ ನಲ್ಲಿ ಇವತ್ತು ಒಂದೇ ವಿಷಯದ ಬಗ್ಗೆ ಚರ್ಚೆ..ಅದು ಪ್ರಧಾನ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಕಚೇರಿ ಮೇಲೆ ನಡೆದ ಇ.ಡಿ ರೇಡ್.. ಬಹುಷಃ  ಬಿಬಿಎಂಪಿಯಲ್ಲೇ ಪ್ರಹ್ಲಾದ್ ಅವರಷ್ಟು ಪ್ರಭಾವಶಾಲಿ ಅಧಿಕಾರಿ ಇನ್ನೊಬ್ಬನಿರಲಾರರೇನೋ..?!.ಅಂಥಾ ಅಧಿಕಾರಿಗೇನೆ ಇ.ಡಿ ತೋಡಿದ ಖೆಡ್ಡಾಕ್ಕೆ ಕೇವಲ ಬಿಬಿಎಂಪಿಯಷ್ಟೇ ಅಲ್ಲ, ಸರ್ಕಾರವೇ ಒಂದ್ ಕ್ಷಣ ಅದುರೋಗಿದೆ.ಏಕಂದ್ರೆ ಎಲ್ಲರಿಗು ಗೊತ್ತಿರುವಂತೆ ಪ್ರಹ್ಲಾದ್  ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅತ್ಯಾಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದ ಅಧಿಕಾರಿ. ನಿಮಗೆ ಗೊತ್ತಿರಲಿ ಅಂಥಾ ಹೇಳುತ್ತೇವೆ ಕೇಳಿ, … Read more

ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಹೇಳಿ ಸಚಿವ ಕೃಷ್ಣಭೈರೇಗೌಡ ಅವರೇ, ದೊಡ್ಡಬಳ್ಳಾಪುರ AC ದುರ್ಗಶ್ರೀ, ತಹಸಿಲ್ದಾರ್  ವಿಭಾ ವಿದ್ಯಾ ರಾಥೋಡ್  ವಿರುದ್ಧ ಕ್ರಮ ಕೈಗೊಳ್ಳಲು ಇದಕ್ಕಿಂತ ಸಾಕ್ಷ್ಯಬೇಕಾ?!   ದೊಡ್ಡಬಳ್ಳಾಪುರ: ಯಾರೇ ಅಧಿಕಾರಿಗೆ ಆಗಲಿ,ಯಾವುದೇ ಹೊಸ ಸ್ಥಳಕ್ಕೆ ಬಂದು,ಹೊಸ ಜವಾಬ್ದಾರಿ ವಹಿಸಿಕೊಂಡರೂ ಅಲ್ಲಿನ ವಾತಾವರಣಕ್ಕೆ ಒಗ್ಗಿ ಹೋಗಲು,ಕೆಲಸ ಅರ್ಥ ಮಾಡಿಕೊಳ್ಳಲು ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ.ಆದರೆ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಎಸಿ ಆಗಿ ಬಂದ ದುರ್ಗಶ್ರೀ ಅವರ ವಿಷಯದಲ್ಲಿ ಆಗಿದ್ದೇ ಸಂಪೂರ್ಣ ಉಲ್ಟಾ.ತಾಲುಕು ಕಚೇರಿ ಮೂಲಗಳ ಪ್ರಕಾರವೆ ಕಚೇರಿಗೆ ಬಂದು ತುಂಬಾ ಸಮಯವೇನು ಆಗದಿದ್ದರೂ ದುರ್ಗಶ್ರೀ ಮೇಡಮ್ … Read more

EXCLUSIVE..ತೆಲಂಗಾಣದ ನಂತರ ಉತ್ತರ ಪ್ರದೇಶ-ಆಂದ್ರಪ್ರದೇಶಗಳಲ್ಲೂ “ಶಕ್ತಿ” ಯೋಜನೆ ಅನುಷ್ಟಾನ..!

ಜನವರಿ ಮೊದಲ ವಾರದಲ್ಲಿ ಆಂದ್ರಪ್ರದೇಶ ಮತ್ತು ಫೆಬ್ರವರಿ 2ನೇ ವಾರದಲ್ಲಿ ಉತ್ತರ ಪ್ರದೇಶ ರಾಜ್ಯಗಳ ನಿಯೋಗ ಕರ್ನಾಟಕಕ್ಕೆ ಭೇಟಿ ಸಾಧ್ಯತೆ ಬೆಂಗಳೂರು/ತೆಲಂಗಾಣ: ಕರ್ನಾಟಕ(KARNATAKA)ವನ್ನು ಅನೇಕ ವಿಚಾರಗಳಲ್ಲಿ ಕೆಟ್ಟದಾಗಿ ಬಿಂಬಿಸುವ ಪ್ರವೃತ್ತಿ ರಾಜಕೀಯದಲ್ಲಿ ನಡೆಯುತ್ತಲೇ ಬಂದಿದೆ.ಕರ್ನಾಟಕದಲ್ಲಿ ಜಾರಿಗೊಳಿಸಲಾದ “ಉಚಿತ”ಗಳಿಂದ ರಾಜ್ಯ ಬರ್ಬಾದ್ ಆಗಿದೆ.ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಂಬಿಸಿ ಅದನ್ನು  ಚುನಾವಣೆ ವೇಳೆ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸೇರಿದಂತೆ ಅನೇಕ ವಿಪಕ್ಷಗಳು ಚುನಾವಣಾ ಅಸ್ತ್ರವನ್ನಾಗಿಸಿಕೊಂಡಿದ್ದವು.ಆದರೆ ತೆಲಂಗಾಣ(TELANGANA) ದಲ್ಲಿ ಕಾಂಗ್ರೆಸ್(CONGRESS) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಘೋಷಿಸಿದ್ದ ಭರವಸೆಗಳನ್ನು  ಜಾರಿ ಮಾಡಿದ ಬೆನ್ನಲ್ಲೇ … Read more