ಗುರುಪ್ರಸಾದ್ ಬಗ್ಗೆ ಜಗ್ಗೇಶ್ ಹಾಗೆ ಹೇಳಿದ್ದು ಸರಿನಾ..?!

“ಗುರು ಒಬ್ಬ ವ್ಯಸನಿ….ಆತನಲ್ಲಿ ಸೃಜನಶೀಲತೆಯೇ ಸತ್ತೋಗಿತ್ತು..ನನ್ನಿಂದ ಕೆಟ್ಟ ಸಿನೆಮಾ ಮಾಡಿಸಿದಾತ..ಎಂದು ಹೇಳಿದ್ದ ಜಗ್ಗೇಶ್.”ಸಾವನ್ನು ಯಾರೂ‌ ಸಂಭ್ರಮಿಸಬಾರದು..ಸತ್ತವರ ಬಗ್ಗೆ ಅವರ ನೆಗೆಟಿವ್ಸ್ ಏನೇ ಇರಲಿ ಅದನ್ನು ಪರಾಮರ್ಷೆ ಮಾಡಿ,ಹೀಯಾಳಿಸಬಾರದು ಎನ್ನುತ್ತಾರೆ ಹಿರಿಯರು ಹಾಗೂ ಅನುಭಾವಿಗಳು.. ಅವರ ಮಾತನ್ನು ಪರಿಗಣಿಸುವುದೇ ಆದಲ್ಲಿ,ಜಗ್ಗೇಶ್ ಅವರಂಥ ಹಿರಿಯ ನಟರ ಬಾಯಲ್ಲಿ ಇಂಥಾ ಮಾತುಗಳು ಬರಬಾರದಿತ್ತು..ಹೀಗೆ ನನಗಷ್ಟೇ ಅಲ್ಲ,ನನ್ನಂತ ಎಷ್ಟೋ ಜ‌ನರಿಗೆ ಎನ್ನಿಸಿದರೂ ತಪ್ಪಿಲ್ಲ.. ಕನ್ನಡದ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾದ ಬಗ್ಗೆ ಮೊದಲು ಚಾನೆಲ್ ಗಳು ಮಾತನಾಡಿಸಿದ್ದೇ ನಟ ಜಗ್ಗೇಶ್ ಅವರನ್ನು..ಆರಂಭದಲ್ಲಿ … Read more

BGS ಆಸ್ಪತ್ರೆಗೆ ಕೊಲೆ ಆರೋಪಿ ದರ್ಶನ್‌ ಅಡ್ಮಿಟ್ -ಎಡಗಾಲಿನ ಸ್ಪರ್ಷ ಕುಂಠಿತ, 2 ದಿನ‌ ಚಿಕಿತ್ಸೆ

ಬೆಂಗಳೂರು: 131 ದಿನಗಳ ಬಳಿಕ ಜೈಲ್‌ ನಿಂದ ಬಿಡುಗಡೆಯಾದರೂ ಅದೇಕೋ ನಟ ದರ್ಶನ್‌( ACTOR DARSHAN) ಗೆ ಚಾಲೆಂಜಸ್‌ ಗಳು ತಪ್ಪಿಲ್ಲ ಎನ್ನಿಸುತ್ತದೆ.ಜೈಲ್‌ ನಿಂದ ಬಿಡುಗಡೆಯಾಗಿ ಮಗ ವಿನೀಶ್‌ ( SON VINEESH) ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದನ್ನು ಬಿಟ್ಟರೆ ಕಾನೂನಿನ ಕುಣಿಕೆ ದರ್ಶನ್‌ ನೆಮ್ಮದಿಯಾಗಿ ಇರೊಕ್ಕೆ ಬಿಡ್ತಿಲ್ಲ ಎನ್ನಿಸುತ್ತದೆ.ದರ್ಶನ್‌ ಗೆ ಬೇಲ್‌ ಸಿಕ್ಕಿರುವುದನ್ನು ಸುಪ್ರಿಂ ಕೋರ್ಟ್‌ ನಲ್ಲಿ ಪ್ತಶ್ನಿಸಲು ಪೊಲೀಸ್‌ ಇಲಾಖೆ ನಿರ್ದರಿಸಿದೆ ಎನ್ನುವ ಸುದ್ದಿ ಪಸರ್‌ ಆಗುತ್ತಿದ್ದಂತೆ ದರ್ಶನ್‌ ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರಿನ ಕೆಂಗೇರಿಯಲ್ಲಿರುವ … Read more

Rajyotsava awards 2024: ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ಹೇಮಾ ಚೌಧರಿ, ಅರುಣ್ ಯೋಗಿರಾಜ್ ಸೇರಿ 69 ಸಾಧಕರಿಗೆ ಪ್ರಶಸ್ತಿಯ ಗರಿ

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ನಟಿ ಹೇಮಾ ಚೌಧರಿ, ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಶಿಲ್ಪಿ ಅರುಣ್ ಯೋಗಿರಾಜ್, ಪ್ರೊ. ಟಿ.ವಿ. ರಾಮಚಂದ್ರ ಅವರಿಗೆ ಪ್ರಶಸ್ತಿ                     ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯ ಹಿನ್ನಲೆಯಲ್ಲಿ 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ … Read more

BMTC ಸಿಬ್ಬಂದಿ ಪಾಲಿಗೆ ಕತ್ತಲಾದ ದೀಪಾವಳಿ, KSRTC ಸಿಬ್ಬಂದಿಗೆ ಫುಲ್ ಸ್ಯಾಲರಿ!

ಬೆಂಗಳೂರು: ಎಲ್ಲಾ ನಿಗಮಗಳ ಸಾರಿಗೆ ಸಿಬ್ಬಂದಿಯನ್ನೂ ಒಂದೇ ರೀತಿ ಸರ್ಕಾರ ಟ್ರೀಟ್ ಮಾಡಬೇಕಾಗುತ್ತದೆ.ಅದು ಸ್ವಾಭಾವಿಕ ಅಷ್ಟೇ ಅಲ್ಲ ಸಾಮಾಜಿಕ ನ್ಯಾಯ ಕೂಡ ಹೌದು..ಆದ್ರೆ ಪರಸ್ಪರರು ಹಿಡಿಶಾಪ ಹಾಕಿಕೊಳ್ಳುವ ,ಬೈಯ್ದಾಡಿಕೊಳ್ಳುವ,ಆರೋಪ-ಪ್ರತ್ಯಾರೋಪಗಳಲ್ಲಿ ಸಂಘರ್ಷಕ್ಕಿಳಿಯುವ ಮಟ್ಟಕ್ಕೆ  ನಿಗಮಗಳ ಸಿಬ್ಬಂದಿಯ ನಡುವೆ ತಂದಿಟ್ಟು ತಮಾಷೆ ನೋಡುವ ಕೆಲಸವನ್ನು ಸರ್ಕಾರ ಮಾಡಿದ್ರೆ ಹೇಗೆ..? ಅದನ್ನು ಸಹಿಸಿಕೊಳ್ಳಲಿಕ್ಕೆ ಆಗುತ್ತಾ..? ಖಂಡಿತಾ ಇಲ್ಲ. ಕೆಎಸ್ ಆರ್ ಟಿಸಿ(KSRTC) ಹಾಗೂ ಬಿಎಂಟಿಸಿ (BMTC) ಸಿಬ್ಬಂದಿ ಪರಿಸ್ತಿತಿ ಹಾಗೆಯೇ ಆಗಿದೆ.ಇದಕ್ಕೆಲ್ಲಾ ಕಾರಣ  ಬೆಳಕಿನ ಹಬ್ಬ ದೀಪಾವಳಿ(DEEPAVALI FESTIAVAL) ಆಚರಣೆಗೆ ಪೂರಕವಾಗಿ … Read more

ದಸರಾ ನಂದಿಧ್ವಜದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ? ಜೀವನ್ಮರಣ ಹೋರಾಟದಲ್ಲಿ ಮಹದೇವಣ್ಣ

ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ  ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ ಇಲ್ಲ..ಸಧ್ಯ … Read more

ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ಸರ್ವೆ…1712 ಒತ್ತುವರಿ ಕಟ್ಟಡಗಳಿಗೆ ಕಾದಿದೆ ಡೆಮಾಲಿಷನ್ ಭೀತಿ

              ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ಬಿಬಿಎಂಪಿ ಕೊನೆಯ ವಾರ್ನಿಂಗ್ ನೀಡಿದೆ.ಎಚ್ಚರಿಕೆ ಹೊರತಾಗಿಯೂ ಅಕ್ರಮ ಕಟ್ಟಡ ನಿರ್ಮಿಸುವುದನ್ನು ಮುಂದುವರೆ ಸಿದರೆ ಪರಿಣಾಮ ನೆಟ್ಟಗಿರೊಲ್ಲ ಎನ್ನುವ ಎಚ್ಚರಿಕೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ನೀಡಿದ್ದಾರೆ.ಅಕ್ರಮ ಕಟ್ಟಡಗಳ ಸರ್ವೆಯನ್ನು ಸೋಮವಾರದಿಂದಲೇ ಆರಂಭಿಸಲಾಗುತ್ತಿದ್ದು ಸರ್ವೆ ವೇಳೆ ಕಂಡುಬರುವ ಉಲ್ಲಂಘನೆಗಳನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷಿಸುವ ಕೆಲಸ ಮಾಡುವುದಾಗಿ ತುಷಾರ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ. ಬಾಬುಸಾಬ್ ಪಾಳ್ಯದ ಕಟ್ಟಡ ದುರಂತ ಬರೋಬ್ಬರಿ ಒಂಬತ್ತು ಅಮಾಯಕ-ನಿಷ್ಪಾಪಿ … Read more

ಜೀವ ಬೆದರಿಕೆಯಿದೆ, ರಕ್ಷಣೆ ಕೊಡಿ! ಪೊಲೀಸ್ ಕಮಿಷನರ್‌ಗೆ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮನವಿ

ಬೆಂಗಳೂರು: ನನಗೆ ಜೀವ ಬೆದರಿಕೆ ಇದೆ..ನನಗೆ ಅಭಿಮಾನಿಗಳು ಹೆಚ್ಚಾಗಿರುವಷ್ಟೇ ನನ್ನ ಏಳಿಗೆ-ನೇರವಂತಿಕೆ ಸಹಿಸದೆ ಸಾಕಷ್ಟು ಶತೃಗಳು ಹುಟ್ಟಿಕೊಂಡಿದ್ದಾರೆ.ಹಾಗಾಗಿ ನನಗೆ ಸೂಕ್ತ ಭದ್ರತೆ ಬೇಕು ಎಂದು ಬಿಗ್ ಬಾಸ್ ಸ್ಪರ್ದಿ ಜಗದೀಶ್ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜಗದೀಶ್ ಅವರು, ಅನ್ಯಾಯದ ವಿರುದ್ಧ ಮೊದಲಿಂದಲು ಹೋರಾಡುತ್ತಿರುವವನು ನಾನು..ನನ್ನ ಮೇಲೆ ಸಾಕಷ್ಟು ಹಲ್ಲೆ ಯತ್ನ ನಡೆದಿವೆ.ನನ್ನ ಮೇಲಿನ ದ್ವೇಷಕ್ಕೆ ನನ್ನ ಮಗನ  ಮೇಲೂ ಹಲ್ಲೆ … Read more

ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ: ಮೃತರ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್!

ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿ ಮೃತಪಟ್ಟಿದ್ದ ಅಣ್ಣ-ತಂಗಿಯ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು. ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ … Read more

ಸರ್ಕಾರಿ ಕಚೇರಿಗೆ ಬಂದು ಗಾಂಜಾ ಹೊಡೆಯಲು ಬೆಂಕಿಪೊಟ್ಟಣ ಕೇಳಿದ ವಿದ್ಯಾರ್ಥಿಗಳು!

ಅಬಕಾರಿ ಇಲಾಖೆಯ ಕಚೇರಿಗೆ ತೆರಳಿದ ವಿದ್ಯಾರ್ಥಿಗಳ ಗುಂಪು ಗಾಂಜಾ ತುಂಬಿದ ಬೀಡಿ ಸೇದಲು ಬೆಂಕಿಪೊಟ್ಟಣ ಕೇಳಿದ ಘಟನೆ ವಿದ್ಯಾವಂತರ ನಾಡು ಕೇರಳದಲ್ಲಿ ನಡೆದಿದೆ. ಆದಿಮಲೈ ಜಿಲ್ಲೆಯ ತ್ರಿಶೂರ್ ನ ಶಾಲೆಯ ವಿದ್ಯಾರ್ಥಿಗಳು ಗಾಂಜಾ ಹೊಡೆಯಲು ಕಾಲೇಜಿಗೆ ಚಕ್ಕರ್ ಹೊಡೆದು ತಿರುಗುತ್ತಿದ್ದರು. ಈ ವೇಳೆ ಗಾಂಜಾ ಮತ್ತಿನಲ್ಲಿ ಆಯತಪ್ಪಿ ಅಬಕಾರಿ ಇಲಾಖೆ ಕಚೇರಿಗೆ ಬಂದು ಗಾಂಜಾ ತುಂಬಿದ ಬೀಡಿ ಸೇದಲು ಬೆಂಕಿಪೊಟ್ಟಣ ಕೇಳಿದ್ದಾರೆ. ಗಾಂಜಾ ಮತ್ತಿನಲ್ಲಿ ಯಾವುದೋ ಅಂಗಡಿ ಎಂದು ಭಾವಿಸಿದ ವಿದ್ಯಾರ್ಥಿಗಳು ಅಬಕಾರಿ ಇಲಾಖೆ ಕಚೇರಿಗೆ ಬಂದು … Read more

ವಿಜಯನಗರ: ಕಲುಷಿತ ನೀರು ಸೇವಿಸಿ 5 ಮಂದಿ ಸಾವು, 50 ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ 8 ತಿಂಗಳ ಹಸುಗೂಸು ಸೇರಿ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ನಿವಾಸಿಗಳಾದ ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು 8 ತಿಂಗಳ ಗಂಡು ಮಗು ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವನೆಯಿಂದ ಗ್ರಾಮದ ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ. ಕಳೆದ ವಾರ … Read more