“ಅವಮಾನ”ದಿಂದಲೇ “ರಿಪಬ್ಲಿಕ್ ಕನ್ನಡ”ದಿಂದ ಸ್ಟಾರ್ ಆಂಕರ್ ಜಯಪ್ರಕಾಶ್ ಶೆಟ್ಟಿ ಹೊರನಡೆದ್ರಾ.?!

ಹಿರಿಯ ಹಾಗು ಅನುಭವಿ ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ಅವರನ್ನು ಇಷ್ಟೊಂದು ನಿಕೃಷ್ಟವಾಗಿ ನಡೆಸಿಕೊಂಡಿದ್ದು ಎಷ್ಟು ಸರಿ.?! ಓದುವ ಮುನ್ನ ಸ್ಷಪ್ಟನೆಗಾಗಿ : ಸುದ್ದಿಮನೆಯಲ್ಲಿ ನಡೆಯುವ ಘಟನೆಗಳ ಬಗ್ಗೆ ಇಲ್ಲದ ತಗಾದೆ ನಿಮಗೇಕೆ…ಹಾಗೆಯೇ ರಿಪಬ್ಲಿಕ್ ಕನ್ನಡದಲ್ಲಿ ನಡೆದಿದೆ ಎನ್ನಲಾದ ಈ ಘಟನೆಗೆ ಅಂತದ್ದ್ಯಾವ ಮಹತ್ವ ಕೊಡಬೇಕಿದೆ ಎಂದು ಅನೇಕರು ಪ್ರಶ್ನೆ ಮಾಡಬಹುದು.ಮುಖ್ಯವಾಗಿ ರಿಪಬ್ಲಿಕ್ ಕನ್ನಡದ ಮ್ಯಾನೇಜ್ಮೆಂಟ್ ಇದರ ಬಗ್ಗೆ ಆಕ್ಷೇಪ ಎತ್ತಬಹುದು.ಆದರೆ ಮಾದ್ಯಮ ಕ್ಷೇತ್ರದಲ್ಲಿ ಏನೇ ವ್ಯತ್ಯಾಸವಾದ್ರೂ ಯಾರಿಗೇನೇ ಅನ್ಯಾಯವಾದ್ರೂ ಅದನ್ನು ಕನ್ನಡ ಫ್ಲ್ಯಾಶ್ ನ್ಯೂಸ್ ಪ್ರಕಟಿಸುವುದಲ್ಲದೇ ಅದನ್ನು … Read more

ಬೆಂಗಳೂರು ವೀಡಿಯೋ ಜರ್ನಲಿಸ್ಟ್ ಗಳ ಫೋಟೋಗ್ರಫಿ ಜಾಕೆಟ್ ಅನಾವರಣ..

ಬೆಂಗಳೂರು: ಎಲ್ಲಾ ಹವಾಮಾನಗಳಲ್ಲೂ ಕ್ರಿಯಾಶೀಲವಾಗಿ ಕೆಲಸ ಮಾಡುವ ನಮ್ಮ ವೀಡಿಯೋ ಜರ್ನಲಿಸ್ಟ್ ( ಮುಂಚೆಯೆಲ್ಲಾ ಕ್ಯಾಮೆರಾಮನ್ ಗಳನ್ನು ಈ ರೀತಿ ಗೌರವಯುತವಾಗಿ ಕರೆಯುತ್ತಿರಲಿಲ್ಲ) ಗಳಿಗೆ ರಿಪೋರ್ಟರ್ ಗಳ ಹೋಲಿಕೆಯಲ್ಲಿ ಸೌಲಭ್ಯ-ಸವಲತ್ತು-ಸಹಕಾರ-ನೆರವು ಸಿಗೋದು ತೀರಾ ಕಡಿಮೆ.ಆದರೂ ಈ ಬೇಸರ-ಅಸಮಾಧಾನ-ನೋವನ್ನೆಲ್ಲಾ ಮರೆತು ಸಂಸ್ಥೆ ವಹಿಸಿದ ಕೆಲಸ ಹಾಗೂ ಫೀಲ್ಡ್ ನಲ್ಲಿ ರಿಪೋರ್ಟರ್ ಹೇಳಿದ ಅಸೈನ್ಮೆಂಟನ್ನು ಶೂಟ್ ಮಾಡಿಕೊಡುವ ಕೆಲಸ ಮಾಡುತ್ತಾ ಬಂದಿದ್ದಾರೆ.ರಿಪೋರ್ಟರ್ ಗಳಂತೆ ತಮಗೂ ಎಲ್ಲಾ ರೀತಿಯ ಸ್ಥಾನಮಾನ ಸಿಗಬೇಕೆನ್ನುವ ಮಹದಾಸೆ ಕ್ಯಾಮೆರಾಮನ್ ಗಳಿಗೆ ಇದ್ದರೂ ಅನೇಕ ಕಾರಣಗಳಿಂದ ಅದು … Read more

ground report.ಮತ್ತೆ ನೆನಪಾದ ಪುಲ್ವಾಮ: ಮಡುಗಟ್ಟಿದ್ದ ಆಕ್ರೋಶ ಅದುಮಿಟ್ಟು ಕೊಂಡೇ “ಪುಲ್ವಾಮ”ದಲ್ಲಿ ವರದಿ ಮಾಡಿದ್ದ ಕನ್ನಡದ ಏಕೈಕ ರಿಪೋರ್ಟರ್.

ಕಾಶ್ಮೀರ:ಪೆಹಲ್ಗಾಮ್(pehalgam) ನಲ್ಲಿ ಪಾಕಿ ಉಗ್ರರು(pakistan terrorist) ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ (operation sindhoora) ಕಾರ್ಯಾಚರಣೆ ಪಾಕಿಸ್ತಾನದ  ಅಸಲಿಯತ್ತನ್ನು ಬಟಾಬಯಲು ಮಾಡಿದೆ.ಯುದ್ಧ ತಯಾರಿಯ ಝಲಕ್ ಕೊಟ್ಟು, ಅದೇ ಮಂಪರಿನಲ್ಲಿ ನಿದ್ರೆಗೆ ಜಾರಿದ್ದ ಪಾಕಿಸ್ತಾನವನ್ನು ಅವರ ನೆಲಕ್ಕೆ ನುಗ್ಗಿ ಉಗ್ರರನ್ನು ಹೊಡೆದುರುಳಿಸಿದ ಸೈನಿಕರ ವಿರಾವೇಶ ಅವಿಸ್ಮರಣೀಯ ದಾಖಲಾರ್ಹ ಸನ್ನಿವೇಶವಾಗಿ ಇತಿಹಾಸದ ಪುಟ ಸೇರಿದೆ.ಕಾರ್ಯಾಚರಣೆ ಮುಗಿಸುವ ಸೂಚನೆ ನೀಡದಿರುವ ಭಾರತದ ವೀರಾವೇಶ ಗಮನಿಸಿದ್ರೆ ಪಾಕಿಸ್ತಾನವನ್ನು ನಾಮಾವಶೇಷಗೊಳಿಸುವ ಸಾಧ್ಯತೆಗಳು ದಟ್ಟವಾಗುತ್ತಿವೆ.ಕಾರ್ಯಾಚರಣೆಯಲ್ಲಿ ಸಂಭವಿಸಿರಬಹುದಾದ ನಿಷ್ಪಾಪಿ-ಅಮಾಯಕ ನಾಗರಿಕರ ಸಾವುನೋವುಗಳಿಗೆ ವಿಷಾದ-ಸಂತಾಪ ಸೂಚಿಸಿರುವ ಭಾರತ, … Read more

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಸಾವನ್ನು ಬೆನ್ನಿಗೆ ಕಟ್ಟಿಕೊಂಡು ವೃತ್ತಿ ನಿಷ್ಟೆಯಿಂದ ಸುದ್ದಿಮಾಡುತ್ತಿರುವ ಮಾದ್ಯಮಯೋಧರು ನಮ್ಮ ಹೆಮ್ಮೆ- ಪತ್ರಿಕಾಯೋಧರಿಗೆ ಹ್ಯಾಟ್ಸಾಫ್.. ಬೆಂಗಳೂರು-ಕಾಶ್ಮೀರ: ಸಧ್ಯ ದೇಶದಲ್ಲೆಲ್ಲಾ ಯುದ್ಧ(war)ದ್ದೇ ಮಾತು.ಸಾಂಪ್ರದಾಯಿಕ ಶತೃರಾಷ್ಟ್ರ ಪಾಕಿಸ್ತಾನ(pakistan)ವನ್ನು ಅದರ ನೆಲದಲ್ಲೇ ನುಗ್ಗಿ ಬಗ್ಗು ಬಡಿಯುತ್ತಿರುವ,ಅದರ ನಡ ಮುರಿ ಯುತ್ತಿರುವ ಭಾರತ(india)ದ ಹೆಮ್ಮೆಯ ಸೇನೆ(armed forces)ಯದ್ದೇ ಸುದ್ದಿ. ಪೆಹಲ್ಗಾಮ್‌ ನ ಭಯೋತ್ಪಾದಕ(terrorist) ದಾಳಿಗೆ ಪ್ರತೀಕಾರವಾಗಿ ಭಾರತ ,ಪಾಕಿಸ್ತಾನವನ್ನು ಆಪರೇಷನ್ ಸಿಂಧೂರ (operation sindhoora) ಹೆಸರಲ್ಲಿ ಸರ್ವನಾಶ ಮಾಡುತ್ತಿರುವಂತದ್ದು ಪ್ರತಿಯೊಬ್ಬ ಭಾರತೀಯ ಹೆಮ್ಮೆ-ಆತ್ಮಾಭಿಮಾನದಿಂದ ಬೀಗಬೇಕಿರುವ ಸಂಗತಿ. ಪಾಪಿ…ಪಾಕಿಸ್ತಾನವನ್ನು ಮಣ್ಣುಮುಕ್ಕಿಸುತ್ತಿರುವ ಈ ಬೆಳವಣಿಗೆಗಳ ಪ್ರತಿಯೊಂದು … Read more

ಇದು ಇಡೀ ರಾಜ್ಯವೇ ಖುಷಿ ಪಡುವ ವಿಚಾರ…ದಿವ್ಯಾ ವಸಂತ ಈಗ “ಸಾಮ್ರಾಟ್‌” ಚಾನೆಲ್‌ “ಚೀಫ್‌-ಎಡಿಟರ್‌”..

ಬೆಂಗಳೂರು: ಇದು,ಇಡೀ ರಾಜ್ಯವೇ ಖುಷಿ ಪಡುವ ವಿಷಯ ಎಂದ್ಹೇಳಿ ರಾತ್ರೋರಾತ್ರಿ ಸುದ್ದಿಯಾದ ಹೆಣ್ಣುಮಗಳು ದಿವ್ಯಾವಸಂತ.ಆದ್ರೆ ನಂತರ ಮಾಡಿಕೊಂಡ ಯಡವಟ್ಟುಗಳು ಆಕೆಯನ್ನು ಯಾವ ಸ್ಥಿತಿಗೆ ತಂದುನಿಲ್ಲಿಸಿತು ಎನ್ನುವುದನ್ನು ತಿಳಿಸಿ ಹೇಳಬೇಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ನೆಗೆಟಿವ್‌ ಆಗಿ ಟ್ರೋಲ್‌ ಆಗಿ ಅದಕ್ಕೆ ಸ್ಪಷ್ಟನೆ ಕೊಡಲು ಕಣ್ಣೀರು ಹಾಕಿದ್ರೂ ಆಕೆಯನ್ನು ಒಪ್ಪಿಕೊಳ್ಳಲು ನಿರಾಕರಿಸುವಂಥ ಸ್ಥಿತಿ ನಿರ್ಮಾಣವಾಗಿದ್ದು ಕೂಡ ಸುಳ್ಳಲ್ಲ.ಸಾಮಾಜಿಕ ಜಾಲತಾಣಗಳಲ್ಲಿ  ಸಿಕ್ಕಾಪಟ್ಟೆ ಆಕ್ಟೀವ್‌ ಆಗಿದ್ದ ಆಕೆ ದಿಡೀರ್‌ ನಾಪತ್ತೆ ಆಗಿಬಿಟ್ಟಿದ್ಲು..ಕಮ್‌ ಬ್ಯಾಕ್‌ ಮಾಡೊಕ್ಕೆ ಒದ್ದಾಡುವಂತಾಗಿತ್ತು.ಇದರ ನಡುವೆಯೇ ಸ್ತ್ರೀ ಎನ್ನುವ ಮಹಿಳಾ … Read more

“ದಿ-ಎಂಡ್” …ತಮನ್ನಾ -ವಿಜಯ್ ವರ್ಮಾ ಪ್ರೇಮ ಸಂಬಂಧ..! ಉಳಿದಿರೋದು ‘ಸ್ನೇಹ ಮಾತ್ರವಂತೆ..!

ಬಾಲಿವುಡ್ ನಲ್ಲಿ ಸಧ್ಯ ತಮ್ಮ ವಿಚಾರಗಳಿಂದ ಹೆಚ್ಚು ಸುದ್ದಿಯಲ್ಲಿದ್ದ ಜೋಡಿ ಎಂದರೆ ಅದು  ಮಿಲ್ಕಿ ಬ್ಯೂಟಿ  ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ.ಇಬ್ಬರ ನಡುವಿದ್ದ ಬೆಸುಗೆ ಗಮನಿಸಿದ್ದವರು ಮದುವೆಯಾಗಲಿದ್ದಾರೆ ಎಂದೇ ಹೇಳುತ್ತಿದ್ದರು.ಇನ್ನು ಕೆಲವರಂತೂ ಈ ಜೋಡಿ ನೋಡಿ ಹೊಟ್ಟೆ ಉರಿದುಕೊಂಡಿದ್ದು ಉಂಟು.ಆದರೆ ಇದೀಗ ಬಾಲಿವುಡ್ ಅಂಗಳದಿಂದ ಹೊರಬಿದ್ದಿರುವ ಸುದ್ದಿ ಎಲ್ಲರನ್ನು ಶಾಕ್ ಗೀಡು ಮಾಡಿದೆ. ತಮನ್ನಾ-ವಿಜಯ್ ತಮ್ಮ ಸಂಬಂಧವನ್ನು ಕೊನೆಗಾಣಿಸಿಕೊಂಡಿದ್ದಾರೆ.ಅವರಿಬ್ಬರು ಇನ್ಮುಂದೆ ಪ್ರೇಮಿಗಳಲ್ಲ..ಕೇವಲ ಸ್ನೇಹಿತರು ಎಂದು ಅವರೇ ಡಿಕ್ಲೇರ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ ನ ಕೆಲವು ಸುದ್ದಿ … Read more

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಶುರುವಾಯ್ತಾ ನಿರಂಜನ್ ದರ್ಬಾರ್..!

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಅಧ್ಯಕ್ಷರಾಗುತ್ತಿದ್ದಂತೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದವರಂತೆ ತಮ್ಮ ಅತ್ಯಾಪ್ತ ನಿವೃತ್ತಿ ಅಧಿಕಾರಿಗೆ ಆಯಕಟ್ಟಿನ ಹುದ್ದೆ ದಯಪಾಲಿಸಿದ ಅಧ್ಯಕ್ಷ ನರೇಂದ್ರಸ್ವಾಮಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವುದು ತಿಳಿದೇ ಇದೆ.ಯಾವ ರೀತಿ ನಿಯಮಗಳನ್ನು ಅಧ್ಯಕ್ಷರು ಗಾಳಿಗೆ ತೂರಿದ್ದಾರೆ ಎನ್ನುವುದನ್ನು ಕನ್ನಡ ಫ್ಲ್ಯಾಶ್ ನ್ಯೂಸ್ ಎಳೆಎಳೆಯಾಗಿ ಬಿಚ್ಚಿಟ್ಟಿತ್ತು ಕೂಡ. ಮಾಡಿರೋ ತಪ್ಪನ್ನು ಸರಿಪಡಿಸಿಕೊಳ್ಳುತ್ತಾರಾ ಎಂದು ಕಾದರೂ ಯಾವುದು ಬದಲಾದಂಗೆ ಕಾಣುತ್ತಿಲ್ಲ.ಅಧ್ಯಕ್ಷರ ತಾಂತ್ರಿಕ ಸಲಹೆಗಾರ ಡಾ.ನಿರಂಜನ್ ಅವರು ಮಂಡಳಿಯಲ್ಲಿ ಅಂದಾದರ್ಬಾರ್ ಶುರುಮಾಡಿದ್ದಾರೆನ್ನುವ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ … Read more

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 830 ವಾಣಿಜ್ಯ ಕಟ್ಟಡಗಳು ಸೀಜ್..

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ  ಮುನೀಶ್ ಮೌದ್ಗಿಲ್ ರವರು ತಿಳಿಸಿದ್ದಾರೆ. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು … Read more

“ವಿಸ್ತಾರ” ಪುನರಾಂಭಕ್ಕೆ ದೊಡ್ಡ ಹಿನ್ನಡೆ..!! “ಚಾನೆಲ್” ಮಾಲೀಕತ್ವದ ಕಂಪೆನಿಯ ಸ್ವತ್ತುಗಳು ಜಪ್ತಿ..!?

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ವಿಸ್ತಾರ ನ್ಯೂಸ್ ಚಾನೆಲ್ ನ ನಿರ್ದೇಶಕರಲ್ಲಿ ಒಬ್ಬರೆನ್ನಲಾಗಿದ್ದ ಹರಿಪ್ರಕಾಶ್ ಕೋಣೆಮನೆ ವಿರುದ್ಧ ಮಾಹಿತಿ ಮತ್ತು  ಪ್ರಸಾರ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿದೆ ಎಂದು ಮಾದ್ಯಮಗಳು ವರದಿ ಮಾಡಿವೆ.ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಪಾಲುದಾರರೂ ಆಗಿರುವ ಮೈಸೂರು ಮರ್ಕಂಟೈಲ್  ಕಂಪೆನಿಯ  ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಡಾ.ಎಚ್.ಎಸ್ ಶೆಟ್ಟಿ ಅವರು ದೂರು ನೀಡಿದ್ದಾರೆನ್ನಲಾಗಿದ್ದು,ಅನುಮತಿ ಇಲ್ಲದೆ ಕಂಪೆನಿಯ ಷೇರುಗಳನ್ನು ಹಸ್ತಾಂತರಿಸಿದ್ದಾರೆನ್ನುವುದು ಕೋಣೆಮನೆ ಮೇಲೆ ಕೇಳಿಬಂದಿರುವ ಆಪಾದನೆ. ಅನುಮತಿ ಇಲ್ಲದೆ ಷೇರುಗಳನ್ನು ಇನ್ನೊಬ್ಬರಿಗೆ ಮಾರಬಾರದೆನ್ನುವುದು ಕಂಪೆನಿ ರೂಲ್ಸ್.ಆದರೆ … Read more

DCM ಆಪ್ತ ಬಿ.ಎಸ್ .ಪ್ರಹ್ಲಾದ್ ಕಚೇರಿ ಮೇಲೆ ಇ.ಡಿ ರೇಡ್ ಗೆ ಬೆಚ್ಚಿಬಿದ್ದ ಭ್ರಷ್ಟರು: ನಿಟ್ಟುಸಿರು ಬಿಟ್ಟ ಸಂತ್ರಸ್ಥ ಅಧಿಕಾರಿ ಸಿಬ್ಬಂದಿ..

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ಯಾಂಪಸ್ ನಲ್ಲಿ ಇವತ್ತು ಒಂದೇ ವಿಷಯದ ಬಗ್ಗೆ ಚರ್ಚೆ..ಅದು ಪ್ರಧಾನ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಕಚೇರಿ ಮೇಲೆ ನಡೆದ ಇ.ಡಿ ರೇಡ್.. ಬಹುಷಃ  ಬಿಬಿಎಂಪಿಯಲ್ಲೇ ಪ್ರಹ್ಲಾದ್ ಅವರಷ್ಟು ಪ್ರಭಾವಶಾಲಿ ಅಧಿಕಾರಿ ಇನ್ನೊಬ್ಬನಿರಲಾರರೇನೋ..?!.ಅಂಥಾ ಅಧಿಕಾರಿಗೇನೆ ಇ.ಡಿ ತೋಡಿದ ಖೆಡ್ಡಾಕ್ಕೆ ಕೇವಲ ಬಿಬಿಎಂಪಿಯಷ್ಟೇ ಅಲ್ಲ, ಸರ್ಕಾರವೇ ಒಂದ್ ಕ್ಷಣ ಅದುರೋಗಿದೆ.ಏಕಂದ್ರೆ ಎಲ್ಲರಿಗು ಗೊತ್ತಿರುವಂತೆ ಪ್ರಹ್ಲಾದ್  ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅತ್ಯಾಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದ ಅಧಿಕಾರಿ. ನಿಮಗೆ ಗೊತ್ತಿರಲಿ ಅಂಥಾ ಹೇಳುತ್ತೇವೆ ಕೇಳಿ, … Read more