BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

ಬೆಂಗಳೂರು: ಬಿಡಿಎ ನಲ್ಲಿ ಭಾರೀ ಸದ್ದು ಮಾಡಿದ್ದ 524 ಕೋಟಿ ಅಕ್ರಮದ ತನಿಖೆಗೆ ಕೊನೆಗೂ ಸಮಿತಿ ರಚನೆಯಾಗಿದೆ. ಎಂಜಿನಿಯರಿಂಗ್ ಮೆಂಬರ್ ಶಾಂತರಾಜಣ್ಣ,ಅಭಿಯಂತರರರಾದ ಅಶೋಕ್,ಅಶೋಕ್ ಭಾಗಿ ಹಾಗೂ ಪರಶುರಾಮಪ್ಪ ಅವರ ವಿರುದ್ಧ ಕೇಳಿಬಂದಿದ್ದ ಆಪಾದನೆಗೆ ಸಂಬಂಧಿಸಿದಂತೆ ಕಮಿಷನರ್ ಕ್ಯಾಪ್ಟನ್ ಮಣಿವಣ್ಣನ್ ತನಿಖಾ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ನಿಯಾಜ್ ಅಹಮದ್ ಅವರನ್ನೊಳಗೊಂಡ ಸಮಿತಿ 8 ವಾರದೊಳಗೆ ತನಿಖಾ ವರದಿಯನ್ನು ತಮಗೆ ಸಲ್ಲಿಸುವಂತೆ ಉಪಕಾರ್ಯದರ್ಶಿಗಳು ಸೂಚಿಸಿದ್ದಾರೆ.ಸಾಮಾಜಿಕ ಕಾರ್ಯಕರ್ತ ಶರತ್  ಬಾಬು  ಅವರ ಹೋರಾಟಕ್ಕೆ ಈ ಮೂಲಕ ಆರಂಭಿಕ … Read more

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

ಸುವರ್ಣ ನ್ಯೂಸ್(SUVARNA KANNADA NEWS CHANNEL), ಕನ್ನಡದ ಪ್ರತಿಷ್ಟಿತ ನ್ಯೂಸ್ ಚಾನೆಲ್( KANNADA NEWS CHANNELS) ಗಳಲ್ಲೊಂದು.ಆದರೆ ಎಷ್ಟೇ ಶ್ರಮ ಪಟ್ಟರೂ,ಏನೆಲ್ಲಾ ಸಾಹಸ ಮಾಡಿದ್ರೂ,..ಸುದ್ದಿ ಕ್ಷೇತ್ರದಲ್ಲಿ ಘಟಾನುಘಟಿಗಳೆನಿಸಿಕೊಳ್ಳುವ ಪತ್ರಕರ್ತರಿದ್ದರೂ ನಂಬರ್ ಒನ್ ಸ್ಥಾನ ಇಂದಿಗೂ ಅದಕ್ಕೆ  ಗಗನಕುಸುಮ. ಮಾದ್ಯಮ ಲೋಕದ ದಿಗ್ಗಜ ರಾಜೀವ್ ಚಂದ್ರಶೇಖರ್( RAJIV CHANDRASHEKAR) ಮಾಲೀಕತ್ವದ  ಏಷ್ಯಾ ನೆಟ್ (ASIANET NETWORK) ನೆಟ್ವರ್ಕ್ ಚಾನೆಲ್ ಸುಧಾರಣೆ, ಬೆಳವಣಿಗೆಗೆ ಕೋಟಿಗಳನ್ನು ಸುರಿದ್ರೂ ಟಿಆರ್ ಪಿ ( TRP-TELE RATING POINT)ವಿಷಯದಲ್ಲಿ ಟಿವಿ-9(TV9 KANNADA), ಪಬ್ಲಿಕ್ ಟಿವಿ( … Read more

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

ಸಚಿವ್ರೇ..!ನಿಮ್ಮೆ ಕಾಳಜಿ ಇದ್ರೆ ಮೊದಲು ಹಾಗೆ ಮಾಡಿ… ಬೆಂಗಳೂರು: ಅಪಘಾತಗಳ ಕಾರಣಕ್ಕೆ BMTC (bengaluru metopolitan transport corporatio)ಗೆ ಮೊದಲೆಲ್ಲಾ “ಕಿಲ್ಲರ್‌” ಎನ್ನುವ ಕಳಂಕ ಮೆಟ್ಟಿಕೊಳ್ತಿತ್ತು..ಅದನ್ನು ಸರಿಪಡಿಸುವ ಸಾಕಷ್ಟು ಕೆಲಸಗಳನ್ನು ನಿಗಮದ ಮಾಡಿದ ಕಾರಣಕ್ಕೇನೋ ಗೊತ್ತಿಲ್ಲ, ಅಪಘಾತಗಳ ಸಂಖ್ಯೆ ಕಡ್ಮೆಯಾಯ್ತು..ಸಾಯೋರ ಪ್ರಮಾಣ ವೂ ಕ್ಷೀಣಿಸ್ತು.ಆದರೆ ಕೆಲ ವರ್ಷಗಳ ಈಚೆಗೆ ನಡೀತಿರೋ ಅಪಘಾತಗಳು-ಅದಕ್ಕೆ ಕಾರಣವಾಗ್ತಿರುವ ಸಂಗತಿಗಳನ್ನು ಗಮನಿಸಿದ್ರೆ ಆತಂಕವಾಗುತ್ತೆ..ಕಿಲ್ಲರ್‌ ಎನ್ನುವ ಹಣೆಪಟ್ಟಿ ಮತ್ತೆ ಅಂಟಿಸಿಕೊಳ್ಳೊಕ್ಕೆ ನಿಗಮನೇ ಪ್ರಯತ್ನಿಸ್ತಿದೆಯಾ ಎನ್ನುವ ಶಂಕೆ ಕಾಡ್ತಿದೆ.ಇದಕ್ಕೆ ಕಾರಣ ಇವಿ ಬಸ್‌ ಗಳಿಂದಾಗುತ್ತಿರುವ ಅಪಘಾತ … Read more

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ವಿಕ್ಟೋರಿಯಾ ಆಸ್ಪತ್ರೆ “ನೆಫ್ರೋ ಯುರಾಲಜಿ” ಡೈರೆಕ್ಟರ್ ಡಾ.ಶಿವಲಿಂಗಯ್ಯ ಕರ್ಮಕಾಂಡ ಬಯಲಿಗೆಳೆದಿದ್ದಕ್ಕೆ ವರ್ಗಾವಣೆ ಬಹುಮಾನ..! ಬೆಂಗಳೂರು: ರಾಜ್ಯದ ಅಡಳಿತ ನಿಜಕ್ಕೂ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳ ಬರ ಎದುರಿಸುತ್ತಿದೆ ..ಅದರಲ್ಲೂ ಆಯಕಟ್ಟಿನ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ “ಐಎಎಸ್-ಕೆಎಎಸ್” ನಂತ ಅಧಿಕಾರಿಗಳಲ್ಲಿ ಬಹುತೇಕ ರು ಭ್ರಷ್ಟರಾಗಿರುವ ಸಂಕಷ್ಟದ ಸನ್ನಿವೇಶದಲ್ಲಿ ಬೆರಳೆಣಿಕೆಯ ಅಧಿಕಾರಿಗಳು ನಮ್ಮ ನಡುವಿದ್ದಾರೆ ನ್ನು ವುದು ಸಮಾಧಾನದ ಸಂಗತಿ.ಆದರೆ ದುರಂತದ ಸಂಗತಿ ಏನಪ್ಪಾ ಅಂದ್ರೆ ಇಂಥಾ ಬೆರಳೆಣಿಕೆಯ ಅಧಿಕಾ ರಿಗಳಿಗೂ ಕೂಡ ಕೆಲಸ ಮಾಡಲಿಕ್ಕಾಗದಂಥ ಉಸಿರುಗಟ್ಟಿಸುವ ವಾತಾವರಣವನ್ನು ನಿರ್ಮಿಸ … Read more

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಉತ್ಸಾಹಿ ಅಧ್ಯಕ್ಷ ನಿಕೇತ್ ಮೌರ್ಯ, ಹತ್ತರ ಸಾಲಿನಲ್ಲಿ ಹನ್ನೊಂದನೆಯ ಅಧ್ಯಕ್ಷ ರಾಗುಳಿಯದಿದ್ರೆ ಸಾಕು..! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಕಾಂಗ್ರೆಸ್ ನ ಯುವ ನಾಯಕ,ಪ್ರಖರ ವಾಗ್ಮಿ,ಅತ್ಯುತ್ತಮ ಸಂಘಟನೆಕಾರ ನಿಕೇತ್ ರಾಜ್ ಮೌರ್ಯ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಬಿಎಂಟಿಸಿ ಅತ್ಯಂತ ಸಂಕಷ್ಟದಲ್ಲಿರುವ ಸನ್ನಿವೇಶದಲ್ಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಅವರಿಗೆ ಶುಭಾಷಯ ಕೋರುತ್ತಾ ನೂತನ ಅಧ್ಯಕ್ಷ ನಿಕೇತ್ ಅವರ ಮುಂದೆ ಇರುವ ದಂಡಿ ಸವಾಲುಗಳ ಮೇಲೆ ಕನ್ನಡ ಫ್ಲ್ಯಾಶ್ ನ್ಯೂಸ್ ಬೆಳಕು ಚೆಲ್ಲುತ್ತದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿಯೋಜನೆಯಿಂದ ನಿಗಮಕ್ಕೆ … Read more

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

ಬೆಂಗಳೂರು:ಇದು ನಿಜಕ್ಕೂ ಅನ್ಯಾಯದ ಹಾಗೂ ಅಮಾನವೀಯತೆಯ ಕೆಲಸವೇ ಸರಿ..ಯಾವ ಒಂದು ಯೋಜನೆ ನಿರ್ದಿಷ್ಟ ಸಮುದಾಯಕ್ಕೆ, ಅದರ ಬಳಕೆಗೆ , ಕಲ್ಯಾಣಕ್ಕೆ ಒದಗಿಬರ ಬೇಕಿತ್ತೋ… ಅದನ್ನೇ ಕಾಣೆಯಾಗುವಂತೆ ಮಾಡಲಾಗುತ್ತದೆ ಎಂದ್ರೆ ಅದು ಹಣದ ದುರುಪಯೋಗವಲ್ಲದೇ,ಯೋಜನೆಯೊಂದರ ಲಾಭ-ಪ್ರಯೋಜನದಿಂದ ಆ ಸಮುದಾಯವನ್ನು ವಂಚಿಸಿದಂತೆ ಅಲ್ಲವೇ..? ಅಂತದ್ದೊಂದು ಕೆಲಸ ಹಿಂದಿನ ಬಿಬಿಎಂಪಿ ಹಾಗೂ ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಂದ ನಡೆದಿದೆ..ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಇಡೀ ವ್ಯವಸ್ಥೆಯನ್ನು ಸರಿ ಮಾಡಲು ಹೊರಟಂತಿರುವ ಐಎಎಸ್ ಅಧಿಕಾರಿ ಕೆ.ವಿ ರಾಜೇಂದ್ರನ್ … Read more

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

-ಬೆಲ್ಲಕ್ಕೆ ನೊಣಗಳಂತೆ ಚಂದ್ರುವನ್ನು ಮುತ್ತಿಕೊಳ್ಳುತ್ತಿದ್ದ ಆ ಸಾರಿಗೆ ಸಿಬ್ಬಂದಿ ಎಲ್ಲೋದರು.? -ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆ ತೆತ್ತರಾ ಚಂದ್ರು-ಕಚೇರಿ ಬಾಡಿಗೆ ಕಟ್ಟಲಿಕ್ಕೂ ಪರದಾಡುತ್ತಿದ್ದಾರಾ..? -ನಾಯಕತ್ವದ ಗುಣಗಳಿಗೆ ತಿಲಾಂಜಲಿ ಇಟ್ಟು,ಸಾಮೂಹಿಕ ನಾಯಕತ್ವ ಮರೆತು ಸರ್ವಾಧಿಕಾರಿಯಂತಾಗಿದ್ದಕ್ಕೆ ಆಪ್ತರೇ ಕೊಟ್ಟ ಶಿಕ್ಷೆನಾ ಇದು..?! ಇಂಥಾ ಸ್ಥಿತಿ ಯಾವೊಬ್ಬ ವ್ಯಕ್ತಿಗೂ ಬರಬಾರದು..ಅದರಲ್ಲೂ ಅತೀ ಕಡಿಮೆ ಅವಧಿಯಲ್ಲಿ ರಾತ್ರೋ ರಾತ್ರಿ ದೊಡ್ಡ ಲೀಡರ್‌ ಆಗಿ ಬೆಳೆದು ಹೆಸರು ಮಾಡಿ, ಶ್ರಮಿಕ ಸಮುದಾಯದ ಪ್ರೀತಿಗೆ ಪಾತ್ರವಾಗಿ, ತನ್ನ ಮಾತಿಗೆ ತಲೆ ಬಾಗುವ ಮಟ್ಟದಲ್ಲಿ ಅವರ ಮನಸಿನಲ್ಲಿ ಉಳಿದುಕೊಂಡಿದ್ದ … Read more

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಪಿಓಪಿ ಗಣಪತಿಗಳ ಮಾರಾಟ ರಾಜಧಾನಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವುದನ್ನು ಗಮನಿಸಿದಾಗ  ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂದೆನ ಎನ್ನುವ ಗಾಧೆ ನೆನಪಾಗುತ್ತದೆ.

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ಸಾರಿಗೆ ಹೋರಾಟಗಳ ಇತಿಹಾಸದಲ್ಲಿ ಕರಾಳ ಅಧ್ಯಾಯ- ವೇತನ ಪರಿಷ್ಕರಣೆಯೂ ಇಲ್ಲ:ಬೇಡಿಕೆ ಡಿಕೆಗಳ ಈಡೇರಿಕೆನೂ ಇಲ್ಲ..ಪರಸ್ಪರರ ಮೇಲೆ ದೂರು-ಸಂಘಟನೆಗಳಲ್ಲಿನ ಒಡಕಿಗೆ ಸಿಎಂ ಅಚ್ಚರಿ..ಮಾತುಕತೆ ವೈಫಲ್ಯಕ್ಕೆ ಸಂಘಟನೆಗಳ ನಡುವಿನ ಬಿರುಕು-ಭಿನ್ನಾಭಿಪ್ರಾಯ-ಸಂಘರ್ಷವೇ ಕಾರಣವಾಗಿದ್ದು ದುರಂತ-ದೌರ್ಭಾಗ್ಯಪೂರ್ಣ. ಬೆಂಗಳೂರು: ಸಾರಿಗೆ ಮುಷ್ಕರ ನಡೆಯೋದಾಗ್ಲಿ, ನಡೆದರೂ ಹೆಚ್ಚಿನ ಸಂಖ್ಯೆಯ ಸಾರಿಗೆ ಸಿಬ್ಬಂದಿ ಅದರಲ್ಲಿ ಪಾಲ್ಗೊಳ್ಳುವುದಾಗಲಿ ಬಹುತೇಕ ಡೌಟ್‌ ಎನಿಸ್ತದೆ.ಮುರಿದುಬಿದ್ದ ಮಾತುಕತೆ, ಹೈಕೋರ್ಟ್ ನ ಕಟ್ಟಪ್ಪಣೆ ಕೂಡ ಇದಕ್ಕೆ ಪ್ರಮುಖ.ಅದೆಲ್ಲವನ್ನು ಮೀರಿ  ಮಾತುಕತೆಯ ವೈಫಲ್ಯಕ್ಕೆ ಕಾರಣವಾಯಿತೆನ್ನಲಾದ ಸಂಗತಿಗಳು  ಸಾರಿಗೆ ಹೋರಾಟದ ಇತಿಹಾಸದಲ್ಲಿ ಅತ್ಯಂತ ಕೆಟ್ಟದಾಗಿ ನೆನಪಿಸಿಕೊಳ್ಳಬೇಕಾದ ಕ್ಷಣಗಳಾಗಿ … Read more

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

ಬೆಂಗಳೂರು:ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶಿಸಿದೆ. ಸಾರಿಗೆ ಮುಷ್ಕರ ಸಂಬಂಧ  ಇಂದು ನಡೆದ ವಿಚಾರಣೆ ವೇಳೆ  ಕೋರ್ಟ್ ಈ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೆ ಎಸ್ ಮುದಗಲ್ ಮತ್ತು ಎಂಜಿಎಸ್ ಕಮಲ್ ರ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ. ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ವಾದ  ಮಂಡಿಸಿದ್ರೆ.  ಸರ್ಕಾರದ ಪರ ನಿಲೋಫರ್ ಅಕ್ಬರ್ ವಾದ ಮಂಡಿಸಿದರು. ಕೊರೊನಾ‌ ಸಂಧರ್ಭದಲ್ಲಿ ಸರ್ಕಾರ ಹಲವು ಸಿಬ್ಬಂದಿಯನ್ನ ವಜಾಗೊಳಿಸಿದೆ..ಬಹುತೇಕರನ್ನ ಪುನಃ ಸೇವೆಗೆ ಮರು ನೇಮಕ ಮಾಡಿಲ್ಲ.. ಹೀಗಾಗಿ ಬಾಕಿ … Read more