ಪೋಡಿ ಇಲ್ಲ,ಪ್ರತ್ಯೇಕ ಸರ್ವೆ ಸ್ಕೆಚ್ ಆಗಿಲ್ಲ-ಸರ್ವೆ ನಂಬರ್ ಕೊಟ್ಟಿಲ್ಲ, GPA ಮೇಲೆ ಖಾಸಗಿ ಬಿಲ್ಡರ್ಸ್ ಗೆ ಎಸಿ, ತಹಸೀಲ್ದಾರ್ ರಿಂದ ಖಾತಾ ವರ್ಗಾವಣೆ.!

ಹೇಳಿ ಸಚಿವ ಕೃಷ್ಣಭೈರೇಗೌಡ ಅವರೇ, ದೊಡ್ಡಬಳ್ಳಾಪುರ AC ದುರ್ಗಶ್ರೀ, ತಹಸಿಲ್ದಾರ್  ವಿಭಾ ವಿದ್ಯಾ ರಾಥೋಡ್  ವಿರುದ್ಧ ಕ್ರಮ ಕೈಗೊಳ್ಳಲು ಇದಕ್ಕಿಂತ ಸಾಕ್ಷ್ಯಬೇಕಾ?!   ದೊಡ್ಡಬಳ್ಳಾಪುರ: ಯಾರೇ ಅಧಿಕಾರಿಗೆ ಆಗಲಿ,ಯಾವುದೇ ಹೊಸ ಸ್ಥಳಕ್ಕೆ ಬಂದು,ಹೊಸ ಜವಾಬ್ದಾರಿ ವಹಿಸಿಕೊಂಡರೂ ಅಲ್ಲಿನ ವಾತಾವರಣಕ್ಕೆ ಒಗ್ಗಿ ಹೋಗಲು,ಕೆಲಸ ಅರ್ಥ ಮಾಡಿಕೊಳ್ಳಲು ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ.ಆದರೆ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಎಸಿ ಆಗಿ ಬಂದ ದುರ್ಗಶ್ರೀ ಅವರ ವಿಷಯದಲ್ಲಿ ಆಗಿದ್ದೇ ಸಂಪೂರ್ಣ ಉಲ್ಟಾ.ತಾಲುಕು ಕಚೇರಿ ಮೂಲಗಳ ಪ್ರಕಾರವೆ ಕಚೇರಿಗೆ ಬಂದು ತುಂಬಾ ಸಮಯವೇನು ಆಗದಿದ್ದರೂ ದುರ್ಗಶ್ರೀ ಮೇಡಮ್ … Read more

EXCLUSIVE..ತೆಲಂಗಾಣದ ನಂತರ ಉತ್ತರ ಪ್ರದೇಶ-ಆಂದ್ರಪ್ರದೇಶಗಳಲ್ಲೂ “ಶಕ್ತಿ” ಯೋಜನೆ ಅನುಷ್ಟಾನ..!

ಜನವರಿ ಮೊದಲ ವಾರದಲ್ಲಿ ಆಂದ್ರಪ್ರದೇಶ ಮತ್ತು ಫೆಬ್ರವರಿ 2ನೇ ವಾರದಲ್ಲಿ ಉತ್ತರ ಪ್ರದೇಶ ರಾಜ್ಯಗಳ ನಿಯೋಗ ಕರ್ನಾಟಕಕ್ಕೆ ಭೇಟಿ ಸಾಧ್ಯತೆ ಬೆಂಗಳೂರು/ತೆಲಂಗಾಣ: ಕರ್ನಾಟಕ(KARNATAKA)ವನ್ನು ಅನೇಕ ವಿಚಾರಗಳಲ್ಲಿ ಕೆಟ್ಟದಾಗಿ ಬಿಂಬಿಸುವ ಪ್ರವೃತ್ತಿ ರಾಜಕೀಯದಲ್ಲಿ ನಡೆಯುತ್ತಲೇ ಬಂದಿದೆ.ಕರ್ನಾಟಕದಲ್ಲಿ ಜಾರಿಗೊಳಿಸಲಾದ “ಉಚಿತ”ಗಳಿಂದ ರಾಜ್ಯ ಬರ್ಬಾದ್ ಆಗಿದೆ.ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಂಬಿಸಿ ಅದನ್ನು  ಚುನಾವಣೆ ವೇಳೆ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸೇರಿದಂತೆ ಅನೇಕ ವಿಪಕ್ಷಗಳು ಚುನಾವಣಾ ಅಸ್ತ್ರವನ್ನಾಗಿಸಿಕೊಂಡಿದ್ದವು.ಆದರೆ ತೆಲಂಗಾಣ(TELANGANA) ದಲ್ಲಿ ಕಾಂಗ್ರೆಸ್(CONGRESS) ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಘೋಷಿಸಿದ್ದ ಭರವಸೆಗಳನ್ನು  ಜಾರಿ ಮಾಡಿದ ಬೆನ್ನಲ್ಲೇ … Read more

Deepavali bumper: KSRTC ಗೆ 18 ಕೋಟಿ ಗಳಿಕೆ, ಒಂದೇ ದಿನ ಸಾರ್ವಕಾಲಿಕ ದಾಖಲೆಯ ಟಿಕೆಟ್ ಬುಕ್ಕಿಂಗ್

ಬೆಂಗಳೂರು: ನಷ್ಟದ ಹೊರೆಗೆ ಸಿಲುಕಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KARNATAKA STATE ROAD TRANSPORT CORPORATION) ಗೆ ದೀಪಾವಳಿ ಹಬ್ಬ(DEEPAWALI FESTIAVL) ಸ್ವಲ್ಪ ಮಟ್ಟದ ಚೇತರಿಕೆ ನೀಡಿದೆ.ಇತ್ತೀಚಿನ ವರ್ಷಗಳಲ್ಲಿ ದಾಖಲೆ ಪ್ರಮಾಣದ ಎನ್ನಬಹುದಾದ(ಆದರೆ ಸಾರ್ವಕಾಲಿಕ ದಾಖಲೆಯಲ್ಲ) ಗಳಿಕೆಯನ್ನು ಕೆಎಸ್ ಆರ್ ಟಿಸಿ ಮಾಡಿದೆ. ಗಳಿಕೆಯಲ್ಲಷ್ಟೇ ಅಲ್ಲ, ಪ್ರಯಾಣಿಕರ ಸಂಖ್ಯೆ ಮತ್ತು ಅವತಾರ್ ನಲ್ಲಿ ಟಿಕೆಟ್ ಬುಕ್ಕಿಂಗ್ ನಲ್ಲೂ ಹೊಸ ವಿಕ್ರಮವನ್ನೇ ಸಾಧಿಸಿದೆ. ದೀಪಾವಳಿ ಹಬ್ಬದಾಚರಣೆಯ ಹಿಂದೆ ಮುಂದಿನ ದಿನಗಳಲ್ಲಿ ಸಹಜವಾಗಿಯೇ ಸಾಲು ಸಾಲು ರಜೆಗಳು ಬರುವುದರಿಂದ … Read more

Rajyotsava awards 2024: ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ಹೇಮಾ ಚೌಧರಿ, ಅರುಣ್ ಯೋಗಿರಾಜ್ ಸೇರಿ 69 ಸಾಧಕರಿಗೆ ಪ್ರಶಸ್ತಿಯ ಗರಿ

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ನಟಿ ಹೇಮಾ ಚೌಧರಿ, ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಶಿಲ್ಪಿ ಅರುಣ್ ಯೋಗಿರಾಜ್, ಪ್ರೊ. ಟಿ.ವಿ. ರಾಮಚಂದ್ರ ಅವರಿಗೆ ಪ್ರಶಸ್ತಿ                     ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯ ಹಿನ್ನಲೆಯಲ್ಲಿ 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ … Read more

BMTC ಸಿಬ್ಬಂದಿ ಪಾಲಿಗೆ ಕತ್ತಲಾದ ದೀಪಾವಳಿ, KSRTC ಸಿಬ್ಬಂದಿಗೆ ಫುಲ್ ಸ್ಯಾಲರಿ!

ಬೆಂಗಳೂರು: ಎಲ್ಲಾ ನಿಗಮಗಳ ಸಾರಿಗೆ ಸಿಬ್ಬಂದಿಯನ್ನೂ ಒಂದೇ ರೀತಿ ಸರ್ಕಾರ ಟ್ರೀಟ್ ಮಾಡಬೇಕಾಗುತ್ತದೆ.ಅದು ಸ್ವಾಭಾವಿಕ ಅಷ್ಟೇ ಅಲ್ಲ ಸಾಮಾಜಿಕ ನ್ಯಾಯ ಕೂಡ ಹೌದು..ಆದ್ರೆ ಪರಸ್ಪರರು ಹಿಡಿಶಾಪ ಹಾಕಿಕೊಳ್ಳುವ ,ಬೈಯ್ದಾಡಿಕೊಳ್ಳುವ,ಆರೋಪ-ಪ್ರತ್ಯಾರೋಪಗಳಲ್ಲಿ ಸಂಘರ್ಷಕ್ಕಿಳಿಯುವ ಮಟ್ಟಕ್ಕೆ  ನಿಗಮಗಳ ಸಿಬ್ಬಂದಿಯ ನಡುವೆ ತಂದಿಟ್ಟು ತಮಾಷೆ ನೋಡುವ ಕೆಲಸವನ್ನು ಸರ್ಕಾರ ಮಾಡಿದ್ರೆ ಹೇಗೆ..? ಅದನ್ನು ಸಹಿಸಿಕೊಳ್ಳಲಿಕ್ಕೆ ಆಗುತ್ತಾ..? ಖಂಡಿತಾ ಇಲ್ಲ. ಕೆಎಸ್ ಆರ್ ಟಿಸಿ(KSRTC) ಹಾಗೂ ಬಿಎಂಟಿಸಿ (BMTC) ಸಿಬ್ಬಂದಿ ಪರಿಸ್ತಿತಿ ಹಾಗೆಯೇ ಆಗಿದೆ.ಇದಕ್ಕೆಲ್ಲಾ ಕಾರಣ  ಬೆಳಕಿನ ಹಬ್ಬ ದೀಪಾವಳಿ(DEEPAVALI FESTIAVAL) ಆಚರಣೆಗೆ ಪೂರಕವಾಗಿ … Read more