advertise here

Search

ಕೆಂಗೇರಿ ಕೆರೆಪಾಲಾಗಿದ್ದ ಅಣ್ಣ-ತಂಗಿ ಶವ ಪತ್ತೆ: ಪೌರಕಾರ್ಮಿಕ ತಾಯಿಯ ಆಕ್ರಂದನ!


ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿದ್ದ ಅಣ್ಣ-ತಂಗಿಯ ಶವವನ್ನು ಮಂಗಳವಾರ ಸಂಜೆ ಹೊರತೆಗೆಯಲಾಗಿದ್ದು, ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿರುವ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.

ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು.

ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ರಬ್ಬರ್ ಬೋಟ್ ನೊಂದಿಗೆ ಶೋಧ ಕಾರ್ಯ ನಡೆಸಿತ್ತು.

ಭಾರೀ ಮಳೆ ಮತ್ತು ಕತ್ತಲು ಕವಿದ ಕಾರಣ ಶೋಧ ಕಾರ್ಯ ಮುಂದೂಡಲಾಗಿದ್ದು, ಇಡೀ ದಿನ ಶೋಧ ನಡೆಸಿದ ನಂತರ ಇಬ್ಬರ ಶವ ಪತ್ತೆಯಾಗಿದೆ.

ALSO READ :  ground report.ಮತ್ತೆ ನೆನಪಾದ ಪುಲ್ವಾಮ: ಮಡುಗಟ್ಟಿದ್ದ ಆಕ್ರೋಶ ಅದುಮಿಟ್ಟು ಕೊಂಡೇ "ಪುಲ್ವಾಮ"ದಲ್ಲಿ ವರದಿ ಮಾಡಿದ್ದ ಕನ್ನಡದ ಏಕೈಕ ರಿಪೋರ್ಟರ್.

ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಸೋದರಿ ಧನಲಕ್ಷ್ಮೀ ಜೊತೆ ವಾಸವಾಗಿದ್ದು, ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆಸಿದ್ದರು.

ಜ್ಞಾನಭಾರತಿ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಕೆಂಗೇರಿ ಪೊಲೀಸ್ ಸಿಬ್ಬಂದಿ, ಸಿವಿಲ್ ಡಿಫೆನ್ಸ್​ ಸೇರಿದಂತೆ ಸುಮಾರು 15 ಜನರ ತಂಡ ಶೋಧ ಕಾರ್ಯ ನಡೆಸಿ ಎರಡು ಮೃತದೇಹಗಳನ್ನು ಪತ್ತೆ ಮಾಡಿದೆ.


Political News

ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ: ದಾವಣಗೆರೆ ಟಿಕೆಟ್ ಫೈಟ್ ಈಗ ಹೈಕಮಾಂಡ್ ಅಂಗಳಕ್ಕೆ!

ಅಮೆರಿಕಾ–ಇರಾನ್ ಯುದ್ಧದ ಭೀತಿ: ಶಾಂತಿ ಒಪ್ಪಂದಕ್ಕೆ ಟ್ರಂಪ್ ನಕಾರ, ಇರಾನ್ ತೈಲ ಕೇಂದ್ರಗಳೇ ಟಾರ್ಗೆಟ್!

ಹುಳಿಯಾರು ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ!

ದಾವಣಗೆರೆ ದಕ್ಷಿಣ ಉಪಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ!

ಜಿಬಿಎ ಟೌನ್‌ ಪ್ಲ್ಯಾನಿಂಗ್‌ನಲ್ಲಿ ‘ಪರ್ಸಂಟೇಜ್‌’ ಪರ್ವ; ಡಿಸಿಎಂ ಹೆಸರಲ್ಲೇ ಅಧಿಕಾರಿಗಳ ಲೂಟಿ ದರ್ಬಾರ್‌!

ವರ್ಗಾವಣೆ ದಂಧೆಗೆ ಹೈಕೋರ್ಟ್ ಬ್ರೇಕ್! “ಸಿಎಂಗೆ ಇದಕ್ಕಿಂತ ದೊಡ್ಡ ಕೆಲಸಗಳಿವೆ” ಎಂದ ನ್ಯಾಯಪೀಠ

ಉಪಚುನಾವಣೆ ಸಮರ: ಯುಗಾದಿ ಹಬ್ಬದಂದೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಭಿನ್ನಮತಕ್ಕೆ ಸಿಎಂ ‘ಬ್ರೇಕ್’; ಸಂಧಾನ ಸಭೆ ಯಶಸ್ವಿ!

Scroll to Top