advertise here

Search

ಕೆಂಗೇರಿ ಕೆರೆಪಾಲಾಗಿದ್ದ ಅಣ್ಣ-ತಂಗಿ ಶವ ಪತ್ತೆ: ಪೌರಕಾರ್ಮಿಕ ತಾಯಿಯ ಆಕ್ರಂದನ!


ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿದ್ದ ಅಣ್ಣ-ತಂಗಿಯ ಶವವನ್ನು ಮಂಗಳವಾರ ಸಂಜೆ ಹೊರತೆಗೆಯಲಾಗಿದ್ದು, ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿರುವ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.

ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು.

ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ರಬ್ಬರ್ ಬೋಟ್ ನೊಂದಿಗೆ ಶೋಧ ಕಾರ್ಯ ನಡೆಸಿತ್ತು.

ಭಾರೀ ಮಳೆ ಮತ್ತು ಕತ್ತಲು ಕವಿದ ಕಾರಣ ಶೋಧ ಕಾರ್ಯ ಮುಂದೂಡಲಾಗಿದ್ದು, ಇಡೀ ದಿನ ಶೋಧ ನಡೆಸಿದ ನಂತರ ಇಬ್ಬರ ಶವ ಪತ್ತೆಯಾಗಿದೆ.

ALSO READ :  ಸರಿಯಾಗಿ ಬಟ್ಟೆ ಹಾಕದಿದ್ದರೆ ಆಸಿಡ್ ಹಾಕುವೆ ಎಂದು ಬೆದರಿಸಿದ್ದ ಬೆಂಗಳೂರಿನ ಉದ್ಯೋಗಿ ವಜಾ!

ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಸೋದರಿ ಧನಲಕ್ಷ್ಮೀ ಜೊತೆ ವಾಸವಾಗಿದ್ದು, ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆಸಿದ್ದರು.

ಜ್ಞಾನಭಾರತಿ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಕೆಂಗೇರಿ ಪೊಲೀಸ್ ಸಿಬ್ಬಂದಿ, ಸಿವಿಲ್ ಡಿಫೆನ್ಸ್​ ಸೇರಿದಂತೆ ಸುಮಾರು 15 ಜನರ ತಂಡ ಶೋಧ ಕಾರ್ಯ ನಡೆಸಿ ಎರಡು ಮೃತದೇಹಗಳನ್ನು ಪತ್ತೆ ಮಾಡಿದೆ.


Political News

BBMP ಯುಗಾಂತ್ಯ-ಗ್ರೇಟರ್ ಬೆಂಗಳೂರು ಯುಗಾರಂಭ..GBA ಗೆ ತುಷಾರ ಗಿರಿನಾಥ್ ಬಾಸ್…!

“ಯುದ್ಧಭೂಮಿ”ಯಲ್ಲಿ ಪ್ರಾಣದ ಹಂಗು ತೊರೆದ “ಮಾದ್ಯಮಯೋಧರು”

ಶೈಕ್ಷಣಿಕ ನಿಯಮ ಉಲ್ಲಂಘಿಸಿ “ಡೆಲ್ಲಿ ಪಬ್ಲಿಕ್‌ ಸ್ಕೂಲ್‌” ನಿರ್ಮಾಣ..!?

ಇದೆಂಥಾ ನ್ಯಾಯ.? ಸಂಬಂಧಿಗೇ ಸಾಲ.. ?! ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ “ಸ್ವಜನ ಪಕ್ಷಪಾತ” ಆರೋಪ..?!

ಈ ಸುದ್ದಿ ನಮ್ಮಲ್ಲಿ ಮಾತ್ರ…POLITICAL EXCLUSIVE… ಕಾಂಗ್ರೆಸ್ ಗೆ ಗುಡ್ ಬೈ..! ಬಿಜೆಪಿಗೆ ಜೈ..ಜೈ.. ! 60 ಶಾಸಕರಿಗೆ ಗಾಳ….! 42 ಶಾಸಕರ ಲೀಸ್ಟ್ ರೆಡಿ..! ನವೆಂಬರ್ ಗೆ “ಡಿಕೆಶಿ” ಜಂಪಿಂಗ್ ಪಕ್ಕಾ..!

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

EXCLUSIVE..ಹಿರಿಯ “ಪತ್ರಕರ್ತ ದಿಗ್ಗಜ”ರೊಬ್ಬರಿಗೆ ಬಿಜೆಪಿ ಗಾಳ..!- ಆಯಕಟ್ಟಿನ ಹುದ್ದೆಗೆ ಡಿಮ್ಯಾಂಡ್..!

EXCLUSIVE…ಅಧಿಕಾರ ವಹಿಸಿಕೊಂಡ ದಿನವೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಬಿಗ್ ಶಾಕ್..!

Scroll to Top