advertise here

Search

ಭ್ರಷ್ಟಾಚಾರದ ಮಾಹಿತಿ ‘ಗೌಪ್ಯ’ವಲ್ಲ: ಅಧಿಕಾರಿಗಳ ಆಟಕ್ಕೆ ಹೈಕೋರ್ಟ್ ಬ್ರೇಕ್!

high court judgment rti

ಮಾಹಿತಿ ಹಕ್ಕು ಕಾಯ್ದೆಯಡಿ (RTI) ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿವರಗಳನ್ನು ಕೇಳಿದಾಗ, ಅಧಿಕಾರಿಗಳು ಅದನ್ನು ‘ವೈಯಕ್ತಿಕ ಮಾಹಿತಿ’ ಅಥವಾ ‘ಖಾಸಗಿತನದ ಉಲ್ಲಂಘನೆ’ ಎಂಬ ನೆಪ ಹೇಳಿ ನಿರಾಕರಿಸುವಂತಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಉಚ್ಚ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ರಿಟ್ ಪೆಟಿಷನ್ ಸಂಖ್ಯೆ 17718/2024 (ದಿನಾಂಕ: 26-06-2024) ರ ವಿಚಾರಣೆ ನಡೆಸಿದ ನ್ಯಾಯಾಲಯವು, ಪಾರದರ್ಶಕತೆಯೇ ಪ್ರಜಾಪ್ರಭುತ್ವದ ಜೀವಾಳ ಎಂದು ಸಾರಿದೆ.

ತೀರ್ಪಿನ ಪ್ರಮುಖ ಅಂಶಗಳು:

ಸಾಮಾನ್ಯವಾಗಿ ಅಧಿಕಾರಿಗಳು ಆರ್‌ಟಿಐ ಕಾಯಿದೆಯ ಕಲಂ 8(1)(ಜೆ) ಅಡಿಯಲ್ಲಿ ರಕ್ಷಣೆ ಪಡೆಯಲು ಪ್ರಯತ್ನಿಸುತ್ತಾರೆ. ಅಂದರೆ, ಒಂದು ಮಾಹಿತಿ ನೀಡಿದರೆ ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಎಂದು ಅರ್ಜಿಗಳನ್ನು ತಿರಸ್ಕರಿಸುತ್ತಾರೆ. ಆದರೆ, ನ್ಯಾಯಾಲಯವು “ಯಾವುದೇ ಮಾಹಿತಿಯು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ್ದಾಗಿದ್ದರೆ, ಅಲ್ಲಿ ವೈಯಕ್ತಿಕ ಗೌಪ್ಯತೆಗಿಂತ ಸಾರ್ವಜನಿಕ ಹಿತಾಸಕ್ತಿಯೇ ಮುಖ್ಯವಾಗುತ್ತದೆ” ಎಂದು ಸ್ಪಷ್ಟಪಡಿಸಿದೆ.

ಕಲಂ 24(4)ರ ಮಹತ್ವ: ಮಾಹಿತಿ ಹಕ್ಕು ಅಧಿನಿಯಮದ ಕಲಂ 24 ರ ಅಡಿಯಲ್ಲಿ ಕೆಲವು ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡುವಿಕೆಯಿಂದ ವಿನಾಯಿತಿ ಇದೆ. ಆದರೆ, ಅದೇ ಕಲಂನ ಉಪವಿಭಾಗ (4) ರ ಪ್ರಕಾರ, ಭ್ರಷ್ಟಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಮಾಹಿತಿಗಳು ಯಾವುದೇ ಗೌಪ್ಯತೆಯ ವ್ಯಾಪ್ತಿಗೆ ಬರುವುದಿಲ್ಲ. ತನಿಖೆ ಎದುರಿಸುತ್ತಿರುವ ಅಧಿಕಾರಿಗಳ ವಿವರ, ಲಂಚದ ಆರೋಪಗಳು ಮತ್ತು ಇಲಾಖಾ ವಿಚಾರಣೆಯ ವರದಿಗಳನ್ನು ಸಾರ್ವಜನಿಕರಿಗೆ ನೀಡಲೇಬೇಕು ಎಂಬುದು ಈ ತೀರ್ಪಿನ ಸಾರ.

ALSO READ :  ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

ಸಾರ್ವಜನಿಕರಿಗೆ ಹೇಗೆ ಅನುಕೂಲ?

ಇಷ್ಟು ದಿನ ಭ್ರಷ್ಟ ಅಧಿಕಾರಿಗಳು ತಮ್ಮ ವಿರುದ್ಧದ ತನಿಖಾ ವರದಿಗಳು ಹೊರಬರದಂತೆ ಕಾನೂನಿನ ಸಣ್ಣಪುಟ್ಟ ಲೋಪಗಳನ್ನು ಬಳಸಿಕೊಂಡು ತಡೆಹಿಡಿಯುತ್ತಿದ್ದರು. ಈಗ ಈ ತೀರ್ಪಿನಿಂದಾಗಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ಪಟ್ಟಿ ಮತ್ತು ಅವರ ಮೇಲಿನ ಕ್ರಮಗಳ ವಿವರ ಪಡೆಯುವುದು ಸುಲಭವಾಗಲಿದೆ.

ಇದನ್ನೂ ಓದಿ | ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನೋ ಎಂಟ್ರಿ: ಸಿದ್ದರಾಮಯ್ಯ ಸರ್ಕಾರದ ನಿರ್ಧಾರ ಸರಿಯೇ? 

ತಪ್ಪು ಮಾಡಿದವರು ‘ಗೌಪ್ಯತೆ’ಯನ್ನು ಗುರಾಣಿಯಾಗಿ ಬಳಸಲು ಇನ್ನು ಮುಂದೆ ಸಾಧ್ಯವಿಲ್ಲ. ಒಂದು ವೇಳೆ ಕೆಳಹಂತದ ಅಧಿಕಾರಿಗಳು ಮಾಹಿತಿ ನೀಡಲು ನಿರಾಕರಿಸಿದರೆ, ಸಾರ್ವಜನಿಕರು ಹೈಕೋರ್ಟ್‌ನ ಈ ತೀರ್ಪನ್ನು ಉಲ್ಲೇಖಿಸಿ ಮೇಲ್ಮನವಿ ಸಲ್ಲಿಸಬಹುದು.

ವ್ಯವಸ್ಥೆಯಲ್ಲಿನ ಭ್ರಷ್ಟಾಚಾರವನ್ನು ಕಿತ್ತೊಗೆಯಲು ಪಾರದರ್ಶಕತೆ ಅತ್ಯಗತ್ಯ. ಅಧಿಕಾರಿಗಳು ವಿನಾಕಾರಣ ನಿಮ್ಮ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದರೆ, ಅವರಿಗೆ ಈ ತೀರ್ಪಿನ ಬಗ್ಗೆ ಮಾಹಿತಿ ನೀಡಿ ಮತ್ತು ನಿಮ್ಮ ಹಕ್ಕನ್ನು ಚಲಾಯಿಸಿ.


Political News

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?

Scroll to Top