advertise here

Search

ವೀರೇಂದ್ರ ಹೆಗ್ಗಡೆ ನೇತೃತ್ವದ ಎಸ್‌ಡಿಎಂ ಸೊಸೈಟಿಗೆ ಭೂಕಬಳಿಕೆ ಸಂಕಷ್ಟ: ಕೋರ್ಟ್‌ನಿಂದ  ಸಮನ್ಸ್ ಜಾರಿ!

veerendra heggade sdm society

ಕರ್ನಾಟಕದ ಪ್ರಭಾವಿ ಧಾರ್ಮಿಕ ಮತ್ತು ಸಾಮಾಜಿಕ ನಾಯಕರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದ ಎಸ್‌ಡಿಎಂ ಎಜುಕೇಷನಲ್ ಸೊಸೈಟಿಯ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿರುವುದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಈ ಸಂಬಂಧ ಸಮನ್ಸ್ ಜಾರಿ ಮಾಡಿರುವುದು ಕಾನೂನು ಹೋರಾಟದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ.

ಸೋಮನಾಥ ನಾಯಕ್ ಅವರು ಸಲ್ಲಿಸಿದ ದೂರಿನನ್ವಯ (CH-1/LGC(P). 387/2026), ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಸರ್ವೇ ನಂಬರ್ 96/1 ರಲ್ಲಿನ 83 ಸೆಂಟ್ಸ್ ಸರ್ಕಾರಿ ಭೂಮಿಯನ್ನು ಎಸ್‌ಡಿಎಂ ಸೊಸೈಟಿ ಅತಿಕ್ರಮಿಸಿದೆ ಎಂಬ ಗಂಭೀರ ಆರೋಪವಿದೆ. ಈ ಜಾಗದಲ್ಲಿ ರಬ್ಬರ್ ಕೃಷಿ ಮಾಡಿ, ಕಲ್ಲಿನ ಕಾಂಪೌಂಡ್ ನಿರ್ಮಿಸಿ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ ಎಂದು ಕಂದಾಯ ನಿರೀಕ್ಷಕರು ಈಗಾಗಲೇ ವರದಿ ನೀಡಿದ್ದಾರೆ ಎನ್ನಲಾಗಿದೆ.

ನ್ಯಾಯಾಲಯದ ನಿರ್ದೇಶನಗಳು

ದಿನಾಂಕ 12.03.2026 ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಕೆಲವು ಪ್ರಮುಖ ಆದೇಶಗಳನ್ನು ನೀಡಿದೆ:

ಸಮನ್ಸ್ ಜಾರಿ: ಸೊಸೈಟಿಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆ ಮತ್ತು ಕಾರ್ಯದರ್ಶಿ ಸತೀಷ್ ಚಂದ್ರ ಅವರಿಗೆ ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಮೂಲಕ ಸಮನ್ಸ್ ಜಾರಿಗೊಳಿಸಲು ಸೂಚಿಸಲಾಗಿದೆ.

ALSO READ :  ಏಪ್ರಿಲ್,18ಕ್ಕೆ "ವಿಸ್ತಾರ" ರೀ ಲಾಂಚ್…ಶೀಘ್ರವೇ "ಫ್ರೀಡಂ" ಲೋಕಾರ್ಪಣೆ

ತಹಶೀಲ್ದಾರ್ ವರದಿ: ಸದರಿ ಜಾಗದ ವಾಸ್ತವ ಸ್ಥಿತಿಗತಿಯ ಬಗ್ಗೆ ಸಮಗ್ರ ವರದಿ ನೀಡುವಂತೆ ಬೆಳ್ತಂಗಡಿ ತಹಶೀಲ್ದಾರರಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ವೈಯಕ್ತಿಕ ಹಾಜರಾತಿ: ಇದು ಕ್ರಿಮಿನಲ್ ಪ್ರಕರಣದ ಸ್ವರೂಪದಲ್ಲಿರುವುದರಿಂದ, ಕಾನೂನಿನ ಪ್ರಕಾರ ಆರೋಪಿ ಸ್ಥಾನದಲ್ಲಿರುವವರು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆಯು ಅತ್ಯಂತ ಕಟ್ಟುನಿಟ್ಟಾದ ನಿಯಮಗಳನ್ನು ಹೊಂದಿದೆ. “ಒಂದು ವೇಳೆ ಈ ಅತಿಕ್ರಮಣ ಸಾಬೀತಾದಲ್ಲಿ, ಕಾಯ್ದೆಯ ಅಡಿಯಲ್ಲಿ ತಪ್ಪಿತಸ್ಥರಿಗೆ ಕನಿಷ್ಠ 1 ವರ್ಷದಿಂದ ಗರಿಷ್ಠ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ.”

ಇದನ್ನೂ ಓದಿ | ಸಂಸದ ವೀರೇಂದ್ರ ಹೆಗ್ಗಡೆಗೆ ಹೊಸ ಸಂಕಷ್ಟ: ಭೂ ಕಬಳಿಕೆ ನ್ಯಾಯಾಲಯದಲ್ಲಿ ದೂರು ದಾಖಲು

ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದ ಧರ್ಮಾಧಿಕಾರಿಗಳ ಹೆಸರಿರುವ ಸಂಸ್ಥೆಯ ಮೇಲೆ ಇಂತಹದೊಂದು ಗಂಭೀರ ಕಾನೂನು ಪ್ರಕ್ರಿಯೆ ನಡೆಯುತ್ತಿರುವುದು ಭಕ್ತ ವಲಯದಲ್ಲಿ ಮತ್ತು ಸಾಮಾಜಿಕ ಹೋರಾಟಗಾರರಲ್ಲಿ ತೀವ್ರ ಕುತೂಹಲ ಕೆರಳಿಸಿದೆ. “ಸತ್ಯಮೇವ ಜಯತೇ” ಸಂಘಟನೆಗಳ ಒಕ್ಕೂಟವು ಈ ಹೋರಾಟವನ್ನು ಮುನ್ನೆಲೆಗೆ ತಂದಿದ್ದು, ಕಾನೂನು ಎಲ್ಲರಿಗೂ ಸಮಾನವೇ ಎಂಬ ಪ್ರಶ್ನೆಗೆ ಕಾಲವೇ ಉತ್ತರಿಸಬೇಕಿದೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top